Homeಕರ್ನಾಟಕರಾಜಭವನ ಚಲೋ: ಡಿಕೆಶಿ, ಸಿದ್ದರಾಮಯ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು

ರಾಜಭವನ ಚಲೋ: ಡಿಕೆಶಿ, ಸಿದ್ದರಾಮಯ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ಫ್ರೀಡಂ ಪಾರ್ಕ್​ನಲ್ಲಿ ಜಮಾವಣೆಗೊಂಡರು. ಅಲ್ಲಿ ನಡೆದ ಪ್ರತಿಭಟನಾ ಸಭೆಯ ಬಳಿಕ ಪಕ್ಷದ ನಾಯಕರ ನೇತೃತ್ವದಲ್ಲಿ ರಾಜಭವನದತ್ತ ಹೊರಟರು

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಪಕ್ಷ ಕರೆ ನೀಡಿತ್ತು. ಈ ನಿಟ್ಟಿನಲ್ಲಿ ಮೆರವಣಿಗೆ ಹೊರಟಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ಮಹಾರಾಣಿ ಕಾಲೇಜು ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ಕಾಂಗ್ರೆಸ್‌ ಕಾರ್ಯಕರ್ತರು, ಫ್ರೀಡಂ ಪಾರ್ಕ್​ನಲ್ಲಿ ಜಮಾವಣೆಗೊಂಡರು. ಅಲ್ಲಿ ನಡೆದ ಪ್ರತಿಭಟನಾ ಸಭೆಯ ಬಳಿಕ ಪಕ್ಷದ ನಾಯಕರ ನೇತೃತ್ವದಲ್ಲಿ ರಾಜಭವನದತ್ತ ಹೊರಟರು. ಈ ವೇಳೆ ಪೊಲೀಸರು ಎಲ್ಲರನ್ನೂ ತಡೆದು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಪರ ಇರುವವರ ಅಭಿಪ್ರಾಯ ಬದಲಾಗಬಹುದು: ಸುಪ್ರೀಂ ಸಮಿತಿ ಪರ ಬ್ಯಾಟಿಂಗ್ ಮಾಡಿದ…

ಫ್ರೀಡಂ ಪಾರ್ಕ್​ನಲ್ಲಿ ನಡೆದ​ ಸಮಾವೇಶದಲ್ಲಿ ಮಾತನಾಡಿ ಡಿ.ಕೆ. ಶಿವಕುಮಾರ್, “ಮೂರು ಮರಣಶಾಸನಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದೀರಿ. ಪ್ರಧಾನಮಂತ್ರಿ ಗಮನ ಸೆಳೆಯಲು ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಈ ಹೋರಾಟ ನಡೆಯುತ್ತಿದೆ. ಇದೊಂದು ಐತಿಹಾಸಿಕ ಹೋರಾಟ” ಎಂದು ಹೇಳಿದರು.

“ಹೋರಾಟ ನಮ್ಮ ಉಸಿರು. ಪ್ರತಿಭಟನೆ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ” ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಕರೆ ನೀಡಿದ್ದರು.

“ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ಮೆರೆಯುತ್ತಿದೆ” ಎಂದು ಶಿವಕುಮಾರ್ ಆರೋಪಿಸಿದ್ದರು.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...