Homeಅಂಕಣಗಳು`ರಾಜಾನ ಕಿವಿ ಕತ್ತಿ ಕಿವಿ': ಈ ಸಾರ್ವಕಾಲಿಕ ಕಥೆ ನಿಮಗೆ ಗೊತ್ತೆ?

`ರಾಜಾನ ಕಿವಿ ಕತ್ತಿ ಕಿವಿ’: ಈ ಸಾರ್ವಕಾಲಿಕ ಕಥೆ ನಿಮಗೆ ಗೊತ್ತೆ?

ಮಕ್ಕಳ ನೋಟವೇ ಅವರ ಒಳನೋಟ. ದೊಡ್ಡವರಿಗೆ ಅದು ಸಾಲದು. ವಿಶೇಷ ಪ್ರಯತ್ನ ಬೇಕು ಅಂತ ಹ್ಯಾನ್ಸ್ ಅವರು ಹೇಳತಾರ. ಸತ್ಯ ಕಪಟಿಗಳಿಗೆ ಕಾಣುವುದಿಲ್ಲ. ಮುಗ್ಧರಿಂದ ಅದನ್ನು ಮುಚ್ಚಿ ಇಡಲಿಕ್ಕೆ ಸಾಧ್ಯ ಇಲ್ಲ ಅನ್ನುವುದನ್ನು ಎಷ್ಟು ಸರಿ ಹೇಳಿದರು ಹಳಸಲ್ಲ.

- Advertisement -
- Advertisement -

ಒಂದು ಊರಾಗ ಒಬ್ಬ ಚಕ್ರವರ್ತಿ ಮಹಾರಾಜ ಇದ್ದ. ಅವನಿಗೆ ಟೀಕೆ ಅಂದ್ರ ಆಗತಿದ್ದಿಲ್ಲ. ಯಾರಾದರೂ ತನ್ನ ವಿರುದ್ಧ ಮಾತಾಡಿದರ ಅವರಿಗೆ ಶಿಕ್ಷೆ ಕೊಡತಿದ್ದ.

ಅವನಿಗೆ ದೇವರು ಶಿಕ್ಷೆ ಕೊಟ್ಟ. `ನೀನು ನಿನ್ನ ಟೀಕೆ ಮಾಡುವವರ ಮಾತು ಕೇಳದೆ ಹೋದಾಗಲೆಲ್ಲ ನಿನ್ನ ಕಿವಿ ದೊಡ್ಡದಾಗಿ ಬೆಳೆಯಲಿಕ್ಕೆ ಹತ್ತಿಬಿಡತಾವು,’ ಅಂತ.

ಇದನ್ನ ರಾಜಾ ಎಚ್ಚರಿಕೆ ಅಂತ ತಿಳಕೋಬೇಕಾಗಿತ್ತು. ಆದರ ಹಂಗ ತಿಳಕೋಳಿಲ್ಲ. ಅವ ತನ್ನ ಹಳೇ ಚಾಳಿ ಮುಂದುವರೆಸಿದ. ಅವನ ಕಿವಿ ದೊಡ್ಡದಾಗಿ ಬೆಳಕೋತನ ಹೋದವು.

ಆ ಊರಾಗ ಕಿಟ್ಟಪ್ಪ ಅಂತ ಒಬ್ಬವ ಕ್ಷೌರಿಕ ಇದ್ದ. ಅವ ಪ್ರತಿ ವಾರ ಅರಮನೆಗೆ ಹೋಗಿ ರಾಜನ ಕಟಿಂಗ್ ಮಾಡ್ತಿದ್ದ. ಅವರ ಅಪ್ಪ ರಾಜನ ಅಪ್ಪಗ ಮಾಡತಿದ್ದ, ಅವರ ಅಪ್ಪ ಅವರ ಅಪ್ಪಗ, ಅವರ ಅಪ್ಪ ಅವರ ಅಪ್ಪಗ ಹಿಂಗ ಒಂದು ಘನ ಪರಂಪರೆ ನಡಕೊತ ಬಂದಿತ್ತು.

ಹಿಂಗ ಒಂದು ದಿವಸ ಎನಾತಪ ಅಂದ್ರ ಕಿಟ್ಟಪ್ಪ ಅರಮನಿಗೆ ಹೋಗಿ ರಾಜಾನ್ನ ಕುರ್ಚಿ ಮ್ಯಾಲ ಕೂಡಿಸಿ, ಬಿಳಿ ಖಾದಿ ಅರಿಬಿ ಹೊದಿಸಿ, ರಾಜನ ಅಮಿತಾಬ್ ಬಚ್ಚನ್ ಕಟ್ ಕೂದಲ ಸರಿಸಿ ನೋಡತಾನ, ಅವನ ಕಿವಿ ದೊಡ್ಡವಾಗಿ ಬಿಟ್ಟಾವು.

ತಾನು ರಾತ್ರೆ ಕುಡದದ್ದು ಹೆಚ್ಚು ಆತೋ ಏನೋ ಅಂತ ಅವನಿಗೆ ಸಂಶಯ ಬಂತು. ಒಂದು ಈಟು ನಿದ್ದಿ ಬಂದಾವು ಧಣಿ ಅಂತ ಹೇಳಿ, ಸಿಂಕ ಕಡೆ ಹೋಗಿ ತನ್ನ ಮಾರಿ ತೊಳಕೊಂಡು, ಅರಿವಿಲೆ ವರಿಸಿಕೊಂಡು ಬಂದು ಇನ್ನೊಮ್ಮೆ ನೋಡಿದ. ರಾಜಾನ ಕಿವಿ ಬರೆ ದೊಡ್ಡವ ಅಷ್ಟ ಅಲ್ಲ, ಅವು ಕತ್ತಿ ಕಿವಿ ಆದ ಹಂಗ ಆಗಿಬಿಟ್ಟಾವು.

ಅವನಿಗೆ ಗಾಬರಿ ಆಗಿದ್ದು ರಾಜಾ ನೋಡಿದ. “ಲೇ ಮಗನ ಕಿಟ್ಯಾ. ಇಲ್ಲೇ ನೋಡಿದ್ದು ಇಲ್ಲೇ ಮರ್ತು ಬಿಡಬೇಕು. ಹೊರಗ ಹೋಗಿ ಯಾರರ ಹತ್ತರ ನನ್ನ ಕಿವಿ ಸುದ್ದಿ ಹೇಳಿದಿ ಅಂದ್ರ ನೋಡು ನಿನ್ನ ಜೀವಾ ತಗದಬಿಡ್ತೇನಿ” ಅಂತ ಹೆದರಿಸಿಬಿಟ್ಟ.

ಕಿಟ್ಟಪ್ಪ ಹೆದರಿ ಹೂಂ ಅಂದ. ಆದರ ಆವಗ ತಡಿಲಿಕ್ಕೆ ಆಗವಲ್ಲದು. ತನ್ನ ಕೆಲಸ ಮುಗದ ಮ್ಯಾಲೆ ಹೊರಗ ಹೋಗಿ ಓಡಲಿಕ್ಕೆ ಶುರು ಮಾಡಿದ. ಊರು ಹೊರಗ ಒಂದು ಅಡವಿಯೊಳಗ ಒಂದು ಕಡೆ ನಿಂತು ಒಂದು ಮರದ ಪೋಟರಿ ಒಳಗ ಜೋರಾಗಿ ಒದರಿ ಹೇಳಿದ- “ರಾಜನ ಕಿವಿ ಕತ್ತಿ ಕಿವಿ”, “ರಾಜನ ಕಿವಿ ಕತ್ತಿ ಕಿವಿ”. ಅವ ಹೇಳಿ ಹೇಳಿ ನಗೋದು ಅಲ್ಲೇ ಹತ್ತಿರದಲ್ಲೇ ಇದ್ದ ಒಬ್ಬ ಕುರಿಗಾಹಿಗೆ ಗೊತ್ತಾತು. ಕಿಟ್ಟಪ್ಪ ಏನು ಹೇಳಿದ್ದ ಅಂತ ಅವನಿಗೆ ಗೊತ್ತಾಗಲಿಲ್ಲ. ಆದರೆ ಅವ ಏನೋ ಹೇಳಿಕೊಂಡು ನಗಲಿಕ್ಕೆ ಹತ್ತಿದ್ದ ಅಂತ ಅವ ಹೋಗಿ ರಾಜಾನ ಸೈನಿಕರಿಗೆ ಹೇಳಿದ.

ರಾಜಾನಿಂದ ನೇಮಕಗೊಂಡಿದ್ದ ನ್ಯಾಯಾಧೀಶರು ಕಿಟ್ಟಪ್ಪನಿಗೆ ದೇಶದ ರಹಸ್ಯಗಳನ್ನು ಅರಣ್ಯದ ಬಯಲಿನೊಳಗ ಬಯಲು ಮಾಡಿದ್ದಕ್ಕ ರಾಜದ್ರೋಹದ ಆರೋಪ ಸಾಬೀತು ಮಾಡಿದರು. ರಾಜಾ ಅಂದ್ರ ದೇಶ ಆಗಿದ್ದರಿಂದ ಅವನ ಮೇಲೆ ದೇಶದ್ರೋಹದ ಆರೋಪನು ಆಟೋಮೇಟಿಕ ಆಗಿ ಸಾಬೀತು ಆಯಿತು.

ಅವನನ್ನ ಆನೆ ಕಾಲಿನಲ್ಲಿ ತುಳಿಸಿ, ಅದರ ನಂತರ ಎನಾರ ಉಳದರ ಅದನ್ನ ತೋಪು ಮುಂದೆ ಕಟ್ಟಿ ಮದ್ದು ಗುಂಡು ಹಾರಿಸಬೇಕು. ಅದಕ್ಕಿಂತ ಮೊದಲು ಅವನಿಗೆ ವಿಷ ಹಾಕಿದ ಊಟ ಮಾಡಿಸಬೇಕು, ಅಂತ ತೀರ್ಪು ಪ್ರಕಟಿಸಿದರು.

ಕಿಟ್ಟಪ್ಪ ಹೋದ. ಆ ನಂತರ ಒಂದೆರಡು ವರ್ಷಕ್ಕ ಆ ಊರಾಗ ಒಬ್ಬ ಹಲಿಗಿ ತಯಾರು ಮಾಡೋ ಕಲಾವಿದ ಇದ್ದ. ಆತ ಹಾಗೂ ಒಬ್ಬ ಬಡಿಗಿ ಕೂಡಿ ಆ ಅರಣ್ಯಕ್ಕ ಹೋದರು. ಯಾವ ಗಿಡದ ಪೊಟರಿ ಒಳಗ ಕಿಟ್ಟಪ್ಪ ರಹಸ್ಯ ಬಯಲು ಮಾಡಿದ್ದನೋ ಆ ನಶೀಬ ಇಲ್ಲದ ಗಿಡ ಕಡದರು. ಅದನ್ನ ತೊಗೊಂಡು ಹೋಗಿ ಆ ಕಲಾವಿದ ಹಲಿಗಿ ತಯಾರು ಮಾಡಿದ.

ಆ ನಂತರ ಅವ ಅದನ್ನ `ಧಕ್ಕನಕ, ನಕ್ಕನಕ’ ಅಂತ ಬಾರಸಲಿಕ್ಕೆ ಹೋದ. ಆದರ ಅವನಿಗೆ ಶಾಕ್ ಆತು. ಅದು ಧಕ್ಕನಕ ಅಂತ ಸಪ್ಪಳ ಮಾಡೋ ಬದಲಿ, “ರಾಜನ ಕಿವಿ ಕತ್ತಿ ಕಿವಿ” ಅಂತ ಮನಿಶಾರ ದನಿಯೊಳಗ ಮಾತು ಆಡಲಿಕ್ಕೆ ಹತ್ತಿಬಿಟ್ಟಿತು.

ಅವನ ಮಗ ಅದನ್ನ ತೊಗೊಂಡು ಊರಾಗ ಎಲ್ಲ ಅಡ್ಡಾಡಿಬಿಟ್ಟ. ಅದನ್ನ ಬಾರಸೋದು, ಅದು “ರಾಜನ ಕಿವಿ ಕತ್ತಿ ಕಿವಿ” ಅಂತ ಅನ್ನೋದು, ಅದರಿಂದ ಜನರಿಗೆ ಖುಶಿ ಆಗೋದು, ಅವರು ಇಷ್ಟು ದೊಡ್ಡ ರಾಷ್ಟ್ರೀಯ ರಹಸ್ಯ ಗೊತ್ತಾಗಿದ್ದು ನೋಡಿ ಇವನಿಗೆ ಬಾಂಬೆ ಮಿಠಾಯಿ ತೊಗೊಳೋ ಅಂತ ಒಂದು ಆಣೆ ಕೊಡೋದು, ಎಲ್ಲ ನಡಿತು.

ಇದು ರಾಜಾನ ಸೈನಿಕರಿಗೆ ತಿಳೀತು. ಅವರು ಬಂದು, ಕಲಾವಿದನ ಒದ್ದು, ಆ ಹಲಿಗಿ, ಅದಕ್ಕ ಉಪಯೋಗಿಸಿದ್ದ ಕಟ್ಟಿಗಿ, ಎಲ್ಲ ಜಪ್ತಿ ಮಾಡಿಕೊಂಡು ಹೋದರು. ಆ ಹಲಿಗಿ ಮುರದು, ಬೆಂಕಿ ಹಚ್ಚಿ ಸುಟ್ಟರು. ಆ ಬೂದಿ ತೊಗೊಂಡು ಹೋಗಿ ನೀರಿಗೆ ಹಾಕಿದರು. ಆದರ ದೊರೆಯ ರಹಸ್ಯ ಸೋರಿಕೆ ನಿಲ್ಲಲಿಲ್ಲ. ಆ ನದಿಯ ಮೀನು ಎಲ್ಲ ಮಾತು ಆಡಲಿಕ್ಕೆ ಹತ್ತಿದವು. “ರಾಜನ ಕಿವಿ ಕತ್ತಿ ಕಿವಿ”, “ರಾಜನ ಕಿವಿ ಕತ್ತಿ ಕಿವಿ” ಅಂತ ಮೀನು ಪೇಟೆ ತುಂಬ ಸುದ್ದಿ!. ಎಲ್ಲರೂ ಕೇಳೋದು, ಮುಸಿ ಮುಸಿ ನಗೋದು.

ಒಂದು ದಿವಸ ರಾಜಾ- ರಾಣಿ ಸೀ ಫುಡ್ ತಿನ್ನಬೇಕು ಅಂತ ಹೇಳಿ ಹೋಟೆಲಿಗೆ ಹೋದರು. ಅವರ ತಾಟಿನಾಗ ತಂದು ಇಟ್ಟ ಭೂತಾಯಿ ಮೀನು ಸಹಿತ “ರಾಜನ ಕಿವಿ ಕತ್ತಿ ಕಿವಿ” ಅಂತ ಹೇಳಿ ಕಣ್ಣು ಹೊಡೀತು! ಅದನ್ನ ನೋಡಿ ಬಂದ ರಾಜಾಗ ನಿದ್ದಿ ಬರಲಿಲ್ಲ. ಆದ ಬೇಜಾರಿನಾಗ ಅವ ಕೊರಗಿ ಕೊರಗಿ ಒಂದು ದಿವಸ ಸತ್ತು ಹೋದ. ಅವನ ಸಮಾಧಿ ಮ್ಯಾಲೆ ಒಂದು ಗಿಡ ನೆಟ್ಟರು. ಅದಕ್ಕ ಮೀನಿನ ಗೊಬ್ಬರ ಹಾಕಿದರು. ಆ ಗಿಡದಿಂದ ರಾತ್ರಿ ಅವಾಜು ಬರಲಿಕ್ಕ ಶುರು ಆತು. “ರಾಜನ ಕಿವಿ ಕತ್ತಿ ಕಿವಿ”.

ಈ ತಾಜಾ ಪಂಚತಂತ್ರದ ಕತಿಯಿಂದ ನಾವು ಏನು ಪಾಠ ಕಲಿಯಬಹುದು ಅಂದ್ರ – ಸತ್ಯ ಹೇಳಿದವರು, ಅದನ್ನ ಕೇಳಲಾರದವರು, ಹೇಳಕೂಡದು ಅಂದವರು, ಹೇಳಿದವರಿಗೆ ಶಿಕ್ಷೆ ಕೊಟ್ಟವರು, ಕೇಳಿಸಿಕೊಂಡವರು, ಹೇಳಲಿಕ್ಕೆ ಅನುಕೂಲ ಮಾಡಿಕೊಟ್ಟವರು, ಕೇಳಿದರೂ ಕೇಳಲಿಲ್ಲ ಅಂತ ನಟನೆ ಮಾಡಿದವರು ಇವರು ಯಾರೂ ಉಳಿಯಲಿಕ್ಕೆ ಇಲ್ಲ, ಆದರ ಸತ್ಯ ಉಳಿತದ.

ನೀವು ಸತ್ಯ ಹೇಳಿದವರ ಇತಿಹಾಸ ನೋಡಿಕೊತ ಹೋದರ ಏನು ಬಹಳ ಖುಷಿ ಆಗೋದಿಲ್ಲ. ಯಹೂದೀ ಕುಟುಂಬದಾಗ ಹುಟ್ಟಿ, ದೆಹಲಿಯ ಗಲ್ಲಿಗಳಲ್ಲಿ ಸಂತನ ಹಂಗ ಬದುಕಿ, ಹಿಂದೂ -ಇಸ್ಲಾಮಿನ ತತ್ವ ತಿಳಿದುಕೊಂಡು, ಸಮಭಾವದ ಪಾಠ ಹೇಳಿದ ಸೂಫಿ ಸರ್ಮದನ ಕತಿ ಏನು ಆತು ಅಂತ ನೋಡ್ರಿ. ಸರ್ವಶಕ್ತ ಒಬ್ಬನನ್ನು ಬಿಟ್ಟು ಇನ್ನೊಬ್ಬರು ಪೂಜೆಗೆ ಅರ್ಹರಲ್ಲ ಅಂತ ಹೇಳಿದ ರಾಜನ ಮಾತನ್ನು ಕೇಳದೆ ಯಾರು ಪೂಜೆಗೆ ಅರ್ಹರಲ್ಲ ಅಂತ ಹೇಳಿದ. ಗಲ್ಲುಶಿಕ್ಷೆ ವಿಧಿಸಿದಾಗ ನಾನು ಸಾಯಬಹುದು, ನನ್ನ ಮಾತನ್ನು ನೀವು ಏನು ಮಾಡುವಿರಿ ಅಂತ ಮರು ಪ್ರಶ್ನೆ ಮಾಡಿದ.

ನಾನೇ ಸತ್ಯ ಅಂತ ಘೋಷಿಸಿ ಕೊಂಡ ಸೂಫಿ ಮನ್ಸೂರ್ ನನ್ನು ರಾಜಾ ಗಲ್ಲಿಗೆ ಹಾಕುತ್ತಾನ. ಸಾಯುವ ಮುನ್ನ ಅವನ ಕೈ ಕತ್ತರಿಸಿ ಹಾಕುತ್ತಾರ. ಮುಖಕ್ಕೆ ತನ್ನ ರಕ್ತ ಬಳಿದುಕೊಂಡು ನಾನು ಸಾಯುವಾಗ ನನ್ನ ಮುಖ್ಯ ಬಿಳಿಚಿತ್ತು ಅಂತ ಯಾರೂ ತಿಳಿದು ಕೊಳ್ಳುವುದುಬೇಡ ಅಂತ ಗಹಗಹಿಸಿ ನಗುತ್ತಾನೆ.

ನಾನು ದೇವಪುತ್ರ ಅಂತ ಹೇಳಿಕೊಂಡು, ಜನರಿಂದ ಯಹೂದೀಗಳ ದೇವರು ಅಂತ ಅನ್ನಿಸಿಕೊಂಡ ಯೇಸುವಿನ ಇತಿಹಾಸ ನೋಡಿದರ ಆಶ್ಚರ್ಯ ಆಗತದ. ಹಳೆಯ ದೇವರ ಗುಡಿಗಳನ್ನು ಧ್ವಂಸ ಮಾಡಿ, ಅಲ್ಲಿ ಸಾಲ ಕೊಡುತ್ತಿದ್ದ ಅರ್ಚಕರನ್ನು ಓಡಿಸಿ, ಕೂಲಿ ಮಾಡುವ ಜನ ವಾರದ ರಜಾ ದಿನಗಳಾದ ಶನಿವಾರ- ಭಾನುವಾರವೂ ಸಹ ಕೆಲಸ ಮಾಡಿದರೆ ತಪ್ಪೇನೂ ಇಲ್ಲ ಅಂದಿದ್ದು, ಅಂಧ ವಿಶ್ವಾಸದ ಬಗ್ಗೆ ಜಾಗೃತಿ ಮೂಡಿಸಿದ್ದು, ಏಕತೆ, ಸಮಾನತೆ, ಭ್ರಾತೃತ್ವ ಇರಬೇಕು ಅಂತ ಹೇಳಿದ್ದು ಅವನಿಗೆ ಮುಳುವಾದವು. ಅಂದಿನ ರಾಜಾ ಪಾಂತಿಯಸ ಪಿಲೆಟ್ ಅವನಿಗೆ ಶಿಲುಬೆ ಶಿಕ್ಷೆ ವಿಧಿಸಿದ.

ಆ ಮಾತಿಗೆ ಈಗ ಎರಡು ಸಾವಿರ ವರ್ಷ ಮೀರಿದವು. ಅವರು ಯಾರು ಈಗ ಉಳಿದಿಲ್ಲ. ಅವರು ಹೇಳಿದ ಸತ್ಯ ಮಾತ್ರ ಉಳಕೊಂಡದ.

ಈಗ ನಮ್ಮನ್ನು ಆಳುವ ಪರಂತಪರು ಯಾವ ಟೀಕೆಯನ್ನು ಸಹಿಸುತ್ತಿಲ್ಲ. ಸೃಜನಾತ್ಮಕ ಟೀಕೆಗೆ ಸಹಿತ ಇಲ್ಲೇ ಜಾಗ ಇಲ್ಲ. ಅಧಿಕಾರ ಅವರನ್ನ ಕುರುಡರನ್ನಾಗಿಸಿದೆ. ಸತ್ಯಕ್ಕೆ ಸಾವಿಲ್ಲ ಅನ್ನುವ ಸರಳ ಸತ್ಯ ಅವರಿಗೆ ಕಾಣುತ್ತಿಲ್ಲ.

ಅಂಥವರಿಗೆ ಡೆನ್ಮಾರ್ಕ್ ದೇಶದ ಒಂದು ಕತೆ ನೆನಪು ಮಾಡಿಕೊಡಬಹುದು. ಅದು ಹ್ಯಾನ್ಸ್ ಕ್ರಿಶ್ಚಿಯನ್ ಆಂಡರ್ಸನ್ ಅವರು 1850 ರ ಸುಮಾರಿಗೆ ಬರೆದ ಮಕ್ಕಳ ಕತೆ `ಮಹಾರಾಜರ ಹೊಸ ಉಡುಪು’.

ಎಲ್ಲರಿಗೂ ಗೊತ್ತಿರುವ ಈ ಕತೆಯಲ್ಲಿ ದಗಾಕೋರ ದರ್ಜಿಗಳು ರಾಜನಿಗೆ ಹೊಸ ಉಡಪು ತಯಾರಿಸುವ ನೆಪದಲ್ಲಿ ಬಂಗಾರ – ರೇಷ್ಮೆ ದಾನ ಪಡಿತಾರ. ಇದು ಬರೀ ಬುದ್ಧಿವಂತರಿಗೆ ಕಾಣತದ ಅಂತ ಸುಳ್ಳು ಹೇಳಿ ಯಾವ ಬಟ್ಟೆಯನ್ನು ತಯಾರು ಮಾಡದೆ, ರಾಜನನ್ನು ನಗ್ನವಾಗಿಸಿ ಊರಾಗ ಎಲ್ಲ ಓಡಾಡಿಸಿ ಬಿಡತಾರ. ದೊಡ್ಡವರು ಎಲ್ಲ ಸುಮ್ಮನೆ ಇದ್ದರೂ ಅಲ್ಲಿನ ಮಗುವೊಂದು ಮಹಾರಾಜರ ಮೈ ಮೇಲೆ ಬಟ್ಟೆ ಇಲ್ಲ ಅಂತ ಜೋರಾಗಿ ಹೇಳಿ ಬಿಡತದ. ದೊಡ್ಡವರು ನಕ್ಕು ಬಿಡತಾರ.

ಆವಾಗ ರಾಜಾಗ ನಾಚಿಕೆ ಆಗತದ. ಮಕ್ಕಳ ನೋಟವೇ ಅವರ ಒಳನೋಟ. ದೊಡ್ಡವರಿಗೆ ಅದು ಸಾಲದು. ವಿಶೇಷ ಪ್ರಯತ್ನ ಬೇಕು ಅಂತ ಹ್ಯಾನ್ಸ್ ಅವರು ಹೇಳತಾರ. ಸತ್ಯ ಕಪಟಿಗಳಿಗೆ ಕಾಣುವುದಿಲ್ಲ. ಮುಗ್ಧರಿಂದ ಅದನ್ನು ಮುಚ್ಚಿ ಇಡಲಿಕ್ಕೆ ಸಾಧ್ಯ ಇಲ್ಲ ಅನ್ನುವುದನ್ನು ಎಷ್ಟು ಸರಿ ಹೇಳಿದರು ಹಳಸಲ್ಲ.

ಇದನ್ನು ತಿಳಿಯದಷ್ಟೂ ಇವರು ಮುಗ್ಧರಲ್ಲ, ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ದಿನಕರ ದೇಸಾಯಿಯವರ ನಂತರ ನಿಜ ನಾಯಕತ್ವದ ಕನವರಿಕೆಯಲ್ಲಿ ದಿಕ್ಕೆಟ್ಟ ಉತ್ತರ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...