Homeಅಂಕಣಗಳುಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರಿಗೆ ಎರಡು ತಿಂಗಳು ಊಟ ನೀಡಿದ ಗ್ರಾ.ಪಂ: ಪಿಡಿಓ ರಾಜೇಶ್ ಸಾಧನೆ

ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರಿಗೆ ಎರಡು ತಿಂಗಳು ಊಟ ನೀಡಿದ ಗ್ರಾ.ಪಂ: ಪಿಡಿಓ ರಾಜೇಶ್ ಸಾಧನೆ

- Advertisement -
- Advertisement -

ನೀವು ಫೇಸ್‍ಬುಕ್ ಬಳಕೆದಾರರಾಗಿದ್ದರೆ ರಾಜಾನುಕುಂಟೆ ಗ್ರಾಮ ಪಂಚಾಯ್ತಿ ಎನ್ನುವ ಅಕೌಂಟ್ ಇದೆ. ಈ ಗ್ರಾಮ ಪಂಚಾಯ್ತಿಯಾಗಿ ಕೊರೊನಾ ಸಂದರ್ಭವನ್ನು ನಿಭಾಯಿಸಿದ್ದಂತೂ ಉಳಿದ ಗ್ರಾಮ ಪಂಚಾಯ್ತಿಗಳಿಗೆ ಅತ್ಯುತ್ತಮ ಮಾದರಿ. ಹಾಗಾದರೆ ಇದರ ಹಿಂದಿರುವ ಶಕ್ತಿ ಯಾರೆಂದು ನಿಮಗೆ ಆಸಕ್ತಿ ಕೆರಳಿರಬಹುದು. ಯಲಹಂಕ ತಾಲೂಕಿನ, ಹೆಸರಘಟ್ಟ ಹೋಬಳಿಯ ರಾಜಾನುಕುಂಟೆ ಗ್ರಾಮ ಪಂಚಾಯ್ತಿಯ ಈ ಎಲೆಮರೆಯ ಅಭಿವೃದ್ಧಿ ಅಧಿಕಾರಿ ಹೆಚ್.ಆರ್. ರಾಜೇಶ್ ಅವರೇ ಆ ವ್ಯಕ್ತಿ.

‘ನಾನು ನಿಮ್ಮ ಬಗ್ಗೆ ಬರೆಯಬೇಕು, ಹಾಗಾಗಿ ನಿಮ್ಮ ಬಳಿ ಮಾತನಾಡಬೇಕು ಸಮಯವಿದೆಯೇ’ ಎಂದು ರಾಜೇಶ್ ಅವರನ್ನು ಕೇಳಿದೆ. ಅವರು ‘ನಾವು ಪ್ರಚಾರ ಬಯಸಲ್ಲ ಸರ್, ನಿಮಗೆ ಜಾಹೀರಾತೇನಾದ್ರೂ ಬೇಕಾ? ಅದಕ್ಕೋಸ್ಕರ ನಮ್ಮ ಬಗ್ಗೆ ಬರೀತಿನಿ ಅಂತಿದಿರೇನೋ’ ಎಂದು ಖಾರವಾಗಿಯೇ ನುಡಿದರು. ನಾನು ಸಾವರಿಸಿಕೊಂಡು ನನ್ನ ಮತ್ತು ಗೌರಿಲಂಕೇಶ್ ಹೆಸರಲ್ಲಿ ತರುತ್ತಿರುವ ನ್ಯಾಯಪಥ
ಪತ್ರಿಕೆಯ ಪರಿಚಯಿಸಿ, ಯಾವ ಫಲಾಪೇಕ್ಷೆ ಇಲ್ಲದೆ ದುಡಿಯುವವರನ್ನೂ, ಪ್ರಚಾರವಿಲ್ಲದೆ ತಣ್ಣಗೆ ಸಾಧನೆ ಮಾಡಿದವರನ್ನೂ ಹುಡುಕಿ ಬರೆಯುವುದಾಗಿಯೂ, ಎರಡು ವರ್ಷದಿಂದ ನಿಮ್ಮ ಕೆಲಸಗಳನ್ನು ಗಮನಿಸುತ್ತಿರುವ ಕಾರಣ ನಿಮ್ಮ ಬಗ್ಗೆ ಬರೆಯಬೇಕೆಂದು ಮಾತನಾಡಿಸಿದೆ’ ಎಂದು ತಿಳಿಸಿದೆ. ಆಗ ರಾಜೇಶ್ ಜೊತೆಗೆ ಆಪ್ತವಾಗಿ ಒಂದಷ್ಟು ಮಾತುಕತೆ ನಡೆಯಿತು. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಹೇಮಾಪುರದ ರಾಜೇಶ್ ಪದವೀಧರರಾಗಿದ್ದು, 2010 ರಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದರು. ಕೆಲಸ ಮಾಡಿದಲ್ಲೆಲ್ಲಾ ಅತ್ಯುತ್ತಮ ಹೆಸರು ಸಂಪಾದಿಸಿದ್ದಾರೆ.

‘ಕೊರೊನಾ ಲಾಕ್‍ಡೌನ್ ಕಾರಣಕ್ಕೆ ಗುಜರಾತ್, ಬಿಹಾರ, ಉತ್ತರ ಕರ್ನಾಟಕ ಭಾಗದಿಂದ ವಲಸೆ ಬಂದ ಪಂಚಾಯ್ತಿ ವ್ಯಾಪ್ತಿಯ ಕಟ್ಟಡ ಕಾರ್ಮಿಕರು ಕೆಲಸವೂ ಇಲ್ಲದೆ, ಊಟಕ್ಕೂ ತೊಂದರೆಯಾಗಿ ಕಷ್ಟಪಡುತ್ತಿದ್ದರು. ಇಂತವರಿಗಾಗಿ ಎರಡು ತಿಂಗಳು ನಮ್ಮ ಗ್ರಾಮಪಂಚಾಯ್ತಿ ಸತತವಾಗಿ ಊಟ ತಿಂಡಿ ನೀಡಿತು. ಈತನಕ ಇದಕ್ಕೆ ಕನಿಷ್ಠ 50 ಲಕ್ಷ ಖರ್ಚಾಗಿರಬಹುದು. ಆದರೆ ಪಂಚಾಯ್ತಿಯ ಒಂದು ಪೈಸೆಯೂ ಖರ್ಚಾಗಿಲ್ಲ. ನಮ್ಮ ಕೆಲಸದ ಬದ್ಧತೆ ಮತ್ತು ಪ್ರಾಮಾಣಿಕತೆ ನೋಡಿ, ನಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ದಾನಿಗಳು ಸಂಘಸಂಸ್ಥೆಗಳು, ವೈಯಕ್ತಿಕವಾಗಿ ಒಬ್ಬೊಬ್ಬರು ಒಂದೊಂದಕ್ಕೆ ದಿನಂಪ್ರತಿ ಸಹಾಯ ಮಾಡಿದ್ದಾರೆ. ಒಂದು ದಿನದ ಖರ್ಚನ್ನು ಭರಿಸಿ ಕೆಲವರು ಹುಟ್ಟಿದ ಹಬ್ಬ ಆಚರಿಸಿಕೊಂಡಿದ್ದಾರೆ. ಇದೀಗ ನಮ್ಮ ಪಂಚಾಯ್ತಿಯ ಸದಸ್ಯರೊಬ್ಬರು ನಿರ್ಗತಿಕರಿಗೆ ಊಟ ತಿಂಡಿ ನಿರಂತರವಾಗಿರಲಿ ಎಂದು ಗ್ರಾಮಪಂಚಾಯ್ತಿ ಕ್ಯಾಂಟೀನ್ ತೆರೆಯುವ ಯೋಚನೆ ಮಾಡಿದ್ದಾರೆ. ಸದ್ಯಕ್ಕೆ ಸಣ್ಣದಾಗಿ ನಡೆಯುತ್ತಿದೆ’ ಎನ್ನುತ್ತಾರೆ ರಾಜೇಶ್.

ಕೊರೊನಾ ನಿಂತ್ರಣಕ್ಕೆಂದು ಗ್ರಾಮ ಪಂಚಾಯ್ತಿಗಳಿಗೆ ಸರಕಾರ ಪ್ರತ್ಯೇಕ ಹಣ ನೀಡಿಲ್ಲ. ಆದರೆ ಗ್ರಾಮಪಂಚಾಯ್ತಿಯ ಸದಸ್ಯರು, ಅಧ್ಯಕ್ಷರು, ಪಿಡಿಓಗಳು ಆಸಕ್ತರಾಗಿದ್ದರೆ, ಪಂಚಾಯ್ತಿಯ ಆದಾಯದ ಒಂದಷ್ಟು ಮೊತ್ತವನ್ನು ಬಳಸುತ್ತಲೇ ಸಮುದಾಯದ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಾಗುತ್ತದೆ. ರಾಜೇಶ್ ಅವರು ಇದನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ‘ಸೋಂಕು ಹರಡದಂತೆ ಔಷಧಿ ಸಿಂಪಡನೆ, ಮಾಸ್ಕ್ ವಿತರಣೆ, ವಯಕ್ತಿಕ ಅಂತರದ ಬಗೆಗೆ ಜನರಿಗೆ ತಿಳಿಸುವುದು, ಕೊರೊನಾ ಜಾಗೃತಿಯ ಬಗ್ಗೆ ವ್ಯಾಪಕ ಪ್ರಚಾರ ಮಾಡುವುದು ಈ ಎಲ್ಲವನ್ನೂ, ನಮ್ಮ ಗ್ರಾಮ ಪಂಚಾಯ್ತಿ ಗರಿಷ್ಠ ಮಟ್ಟದಲ್ಲಿ ಮಾಡಿದೆ. ನಮ್ಮ ಜೊತೆ ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಹಗಲು ರಾತ್ರಿ ದುಡಿದಿದ್ದಾರೆ. ನಮ್ಮ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತರಿಗೆ ನಾನು ಎಷ್ಟು ಸಲಾಮ್ ಹೊಡೆದ್ರೂ ಕಡಿಮೆಯೇ’ ಎನ್ನುತ್ತಾರೆ ರಾಜೇಶ್.

ಹೊರರಾಜ್ಯದ ತಮ್ಮ ಊರುಗಳಿಗೆ ಹೋಗುವ ವಲಸೆ ಕಾರ್ಮಿಕರ ವಿವರಗಳನ್ನು ಸೇವಾ ಸಿಂಧು ತಂತ್ರಾಂಶದಲ್ಲಿ ನಮೂದಿಸಿ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿ, ಅವರವರ ಊರುಗಳಿಗೆ ತೆರಳಲು ಯಾವುದೇ ತೊಡಕಾಗದಂತೆ ಗ್ರಾಮ ಪಂಚಾಯ್ತಿ ನಿಭಾಯಿಸಿ. ಪ್ರತಿ ಊರುಗಳಿಗೂ ಗ್ರಾಮಕಾರ್ಯ ಪಡೆಗಳನ್ನು ರಚಿಸಿ, ಪಂಚಾಯ್ತಿ ಕೋವಿಡ್ 19 ಕಾರ್ಯ ಪಡೆಯನ್ನು ರಚನೆ ಮಾಡಿ ಕಾಲಕಾಲಕ್ಕೆ ತರಬೇತಿ ನೀಡಿ, ಸುರಕ್ಷತೆಯ ಬಗ್ಗೆ ನಿರಂತರವಾಗಿ ಸಭೆಗಳನ್ನು ಮಾಡಿ ತಿಳಿವಳಿಕೆ ಮತ್ತು ಜವಾಬ್ದಾರಿಗಳನ್ನು ಪರಸ್ಪರ ಹಂಚಿಕೊಳ್ಳಲಾಗುತ್ತಿತ್ತು. ಡಿ.ವೈ.ಎಸ್.ಪಿ, ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಸ್ವಯಂಸೇವಾಸಂಸ್ಥೆಗಳ ಜೊತೆಗೆ ನಿರಂತರ ಸಭೆಗಳನ್ನು ಏರ್ಪಡಿಸಲಾಯಿತು. ಇದೇ ಸಂದರ್ಭಕ್ಕೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ, ವೈಯಕ್ತಿಕ ತಮ್ಮ ಆಸ್ತಿ/ಜಮೀನಿನಲ್ಲಿ ಕೆಲಸ ನಿರ್ವಹಿಸಿ ತಮ್ಮ ಖಾತೆಗೆ ನೇರವಾಗಿ ಹಣ ಪಡೆಯುವಂತೆಯೂ, ಸಮುದಾಯ ನೆಲೆಯ ಕೆಲಸ ಮಾಡಿ ಆಸ್ತಿ ಸೃಜನೆ ಮಾಡಿಕೊಳ್ಳುವಂತೆಯೂ ಜಾಗೃತಿ ಮೂಡಿಸಿ ಯಶಸ್ವಿಯಾಗಿ ಖಾತ್ರಿ ಕೆಲಸವನ್ನು ಹಂಚಲಾಯಿತು. ಹೀಗೆ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳಬಹುದಾದ 96 ಕೆಲಸಗಳ ಪಟ್ಟಿಯನ್ನು ಪಂಚಾಯ್ತಿಯು ಸಾರ್ವಜನಿಕರಿಗೆ ತಿಳಿಯಪಡಿಸಿತು.

ಪಂಚಾಯ್ತಿಯ ವಾರ್ಷಿಕ ಆದಾಯ ಸರಿಸುಮಾರು ಎರಡೂವರೆ ಕೋಟಿಯಷ್ಟಿದೆ. ಪಂಚಾಯ್ತಿಯಲ್ಲಿ 38 ಜನ ಸ್ಟಾಫ್ ಇದ್ದು, ಇವರಿಗೆ ವಾರ್ಷಿಕ ತಿಂಗಳ ಸಂಬಳವೇ 55 ಲಕ್ಷದಷ್ಟಾಗುತ್ತದೆ. ಪಂಚಾಯ್ತಿಯ ಆದಾಯ ಹೆಚ್ಚಿದ್ದರೂ, ಈ ಪ್ರದೇಶ ನಗರೀಕರಣವಾದಂತೆ ಗರಿಷ್ಠಮಟ್ಟದ ಸೌಲಭ್ಯಗಳನ್ನು ಉತ್ತಮ ಗುಣಮಟ್ಟದಲ್ಲಿ ಕೊಡಬೇಕಾಗುತ್ತದೆ. ಹಾಗಾಗಿ ಆದಾಯದಂತೆ ಪಂಚಾಯ್ತಿಯ ಖರ್ಚನ್ನೂ ಯೋಜನಾಬದ್ಧವಾಗಿ ನಿರ್ವಹಿಸಲಾಗಿದೆ.

‘ನಾನು ರಾಜಾನುಕುಂಟೆ ಪಂಚಾಯ್ತಿಗೆ ಉಡುಪಿಯಿಂದ ವರ್ಗವಾಗಿ ಬಂದಾಗ ಈ ಭಾಗದ ಜನರಿಗೆ ಗ್ರಾಮ ಪಂಚಾಯ್ತಿ ಅಂದ್ರೆ ಅದು ಕೇವಲ ರಸ್ತೆ, ನೀರು, ಬೀದಿ ದೀಪಕ್ಕೆ ಸೀಮಿತ ಎಂದಷ್ಟೆ ತಿಳಿದಿದ್ದರು. ಒಂದು ಸರಕಾರ ಎಲ್ಲಾ ಇಲಾಖೆಯ ಕೆಲಸಗಳನ್ನು ಹೇಗೆ ಮಾಡುತ್ತೋ, ಹಾಗೆ ಎಲ್ಲಾ ಇಲಾಖೆಗಳ ಕೆಲಸಗಳನ್ನೂ ಗ್ರಾಮ ಪಂಚಾಯ್ತಿ ಮಾಡುತ್ತದೆ. ಆರೋಗ್ಯಕ್ಕೆ ಬೇಕಾದ ಸ್ವಚ್ಛ ವಾತಾವರಣ, ಉತ್ತಮ ಹವಾಮಾನಕ್ಕೆ ಬೇಕಾಗುವ ಅರಣ್ಯೀಕರಣ, ಆರ್ಥಿಕವಾಗಿ ಹಿಂದುಳಿದವರ, ಪರಿಶಿಷ್ಟ ಜಾತಿ ಮತ್ತು ವರ್ಗಗಳ, ಅಂಗವಿಕಲರ, ಬಡತನದಲ್ಲಿರುವ ಗರ್ಭಿಣಿ, ಬಾಣಂತಿ, ಚಿಕ್ಕ ಮಕ್ಕಳಿಗೂ ಗ್ರಾಮ ಪಂಚಾಯ್ತಿ ನೆರವಾಗಲು ಸಾಧ್ಯವಿದೆ ಎಂದು ನಾವು ತೋರಿಸಿಕೊಟ್ಟೆವು’ ಎಂದು ರಾಜೇಶ್ ತಮ್ಮ ಕೆಲಸದ ವೈಖರಿಯನ್ನು ಯಾವುದೇ ಹೆಗ್ಗಳಿಕೆ ಇಲ್ಲದೆ ಹೇಳುತ್ತಾರೆ.

ಗ್ರಾಮ ಪಂಚಾಯ್ತಿಯದೇ ನರ್ಸರಿ ಇದೆ. ಈ ನರ್ಸರಿಯಲ್ಲಿ ಬೆಳೆಸಿದ ಗಿಡಗಳನ್ನು ಅರಣ್ಯೀಕರಣಕ್ಕೆ ಬಳಸಲಾಗುತ್ತದೆ. 2017-18 ನೇ ಸಾಲಿನಲ್ಲಿ 15 ಸಾವಿರ ಗಿಡಗಳನ್ನು ಬೆಳೆಸಲಾಗಿತ್ತು. ಗ್ರಾಮ ಪಂಚಾಯ್ತಿಯ ಅಂಗನವಾಡಿಗಳ ಮೇಲೆ ಸೋಲಾರ್ ಅಳವಡಿಸಿ, ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ಪ್ರಯೋಗ ಮಾಡಿದೆ. 2017-18 ರಲ್ಲಿ `ನಮ್ಮ ಗ್ರಾಮ ನಮ್ಮ ಯೋಜನೆ’ ಪ್ರಶಸ್ತಿ ಈ ಪಂಚಾಯ್ತಿಗೆ ಲಭಿಸಿದೆ. 2018-19 ನೇ ಸಾಲಿನ ಗಾಂಧಿಗ್ರಾಮ ಪ್ರಶಸ್ತಿಯನ್ನು ಈ ಪಂಚಾಯ್ತಿ ಪಡೆದಿದೆ. 2019 ರ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿಯೆಂದೂ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯ್ತಿ ಎಂದೂ ಹೆಗ್ಗಳಿಕೆಗೆ ಈ ಪಂಚಾಯ್ತಿ ಪಾತ್ರವಾಗಿದೆ. 2019 ರ ದೀನ್ ದಯಾಳ್ ಉಪಧ್ಯಾಯ್ ಪಂಚಾಯ್ತಿ ಸಶಕ್ತೀಕರಣ ಪುರಸ್ಕಾರವೂ ಸಿಕ್ಕಿದೆ. ಹೀಗಾಗಿಯೇ ಬೇರೆ ಬೇರೆ ಭಾಗದ ಶಾಸಕರು, ಗ್ರಾಮಪಂಚಾಯ್ತಿ ಅಧಿಕಾರಿಗಳು ಈ ಗ್ರಾಮ ಪಂಚಾಯ್ತಿಯ ಮಾದರಿಗಳನ್ನು ನೋಡಲೆಂದೇ ಬರುತ್ತಾರೆ.

`ನಮ್ಮ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ವರ್ಗ, ಪಂಚಾಯ್ತಿಯ ನಾಗರಿಕರು ಹೀಗೆ ಎಲ್ಲರ ಸಹಕಾರದಿಂದ ಇಷ್ಟೆಲ್ಲಾ ಸಾಧ್ಯವಾಗಿದೆ’ ಎಂದು ವಿನಯದಿಂದಲೇ ಮಾತನಾಡುವ ರಾಜೇಶ್ ಅವರಂಥ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಕಡೆಗೂ ಅಗತ್ಯವಿದೆ


ಇದನ್ನು ಓದಿ: ಜಗಳೂರೆಂಬ ಬರಡು ನೆಲದ ಭಗೀರಥ ಪ್ರತಿಭೆ: ಪ್ರವೀಣ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...