Homeಮುಖಪುಟರಾಜಸ್ತಾನ: 11 ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ರಾಜಸ್ತಾನ: 11 ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ಮತ್ತೊಂದು ಪ್ರಕರಣದಲ್ಲಿ ಮೂವರು ಹುಡುಗರು ಬಂದೂಕು ತೋರಿಸಿ, ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

- Advertisement -
- Advertisement -

31 ವರ್ಷದ ಶಿಕ್ಷಕ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ತಾನ ರಾಜ್ಯದಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದ ಜುಂಜುನು ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕ ಕೇಶವ್ ಯಾದವ್‌ನನ್ನು ಬಂಧಿಸಲಾಗಿದೆ.

ಪಠ್ಯಪುಸ್ತಕದಲ್ಲಿದ್ದ ಸಹಾಯವಾಣಿಗೆ ಬಾಲಕಿ ಕರೆ ಮಾಡಿದಾಗ ಪೊಲೀಸರಿಗೆ ವಿಷಯ ತಿಳಿದಿದ್ದು, ಶಿಕ್ಷಕನನ್ನು ಬಂಧಿಸಲಾಗಿದೆ. ಶಾಲಾ ಅವಧಿಯ ನಂತರ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಕ್ಟೋಬರ್‌ 5ರಂದು ಅತ್ಯಾಚಾರ ಎಸಗಿದ್ದಾನೆ. ಬೇರೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಶಿಕ್ಷಕ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ. ಆದರೆ, ಮರ್ಯಾದೆಗೆ ಅಂಜಿದ ಕುಟುಂಬವು ದೌರ್ಜನ್ಯವನ್ನು ರಹಸ್ಯವಾಗಿರಿಸಿತ್ತು ಎಂದು ಸಿಂಗನಾ ಪೊಲೀಸ್ ಠಾಣೆ ಎಸ್‌ಎಚ್‌ಒ ಭಜನಾ ರಾಮ್ ತಿಳಿಸಿದ್ದಾರೆ.

7ನೇ ತರಗತಿಯ ವಿದ್ಯಾರ್ಥಿಯು ತನ್ನ ಸರ್ಕಾರಿ ಶಾಲೆಯ ಪಠ್ಯಪುಸ್ತಕದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಗಳನ್ನು ಪಡೆದುಕೊಂಡು ಗುರುವಾರ ಸಹಾಯವಾಣಿಗೆ ಕರೆ ಮಾಡಿ, ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಿಕೊಂಡಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಆಕೆಯನ್ನು ಸಂಪರ್ಕಿಸಿ ವಿಚಾರಿಸಿದರು. ನಂತರ, ಪೊಲೀಸ್ ಸೂಪರಿಂಟೆಂಡೆಂಟ್ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು ಎಂದು ಪೊಲೀಸರು ಹೇಳಿದ್ದಾರೆ.

ಅಲ್ವಾರ್ ಜಿಲ್ಲೆಯ ನಿವಾಸಿಯಾದ ಆರೋಪಿ ಶಿಕ್ಷಕ ಕೇಶವ್ ಯಾದವ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಆತನ ವಿರುದ್ದ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಯಡಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರೋಪಿಯು ಶಿಕ್ಷಕಿಯೊಬ್ಬರನ್ನು ವಿವಾಹವಾಗಿದ್ದನು. ಆತನ ತಂದೆಯೂ ನಿವೃತ್ತ ಶಿಕ್ಷಕರಾಗಿದ್ದಾರೆ. ಆತನ ಸಹೋದರಿ ಮತ್ತು ಸಹೋದರಿಯ ಪತಿ ಉಪನ್ಯಾಸಕರಾಗಿದ್ದಾರೆ ಎಂದು ತಿಳಿದು ಬಂದಿದೆ.

ಯುಪಿ: ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ

ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ 17 ವರ್ಷದ ಬಾಲಕಿಯನ್ನು ಮೂವರು ಯುವಕರು, ಬಂದೂಕು ತೋರಿಸಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹುಡುಗಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ, “16 ಮತ್ತು 17 ವರ್ಷ ವಯಸ್ಸಿನ ಇಬ್ಬರು ಸಹೋದರರೊಂದಿಗೆ ಮತ್ತೊಬ್ಬ ಸೇರಿ ನನ್ನ ಮಗಳನ್ನು ಅಪಹರಿಸಿದ್ದರು. ಕಸವನ್ನು ಎಸೆಯಲು ಹೋದಾಗ ಬಂದೂಕು ತೋರಿಸಿ ಆಕೆಯನ್ನು ಕಾಡಿಗೆ ಎಳೆದೊಯ್ಯಲಾಗಿತ್ತು. ಅತ್ಯಾಚಾರವೆಸಗಿ ಅಲ್ಲಿಂದ ಈ ಮೂವರು ಪರಾರಿಯಾಗಿದ್ದಾರೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...