Homeಚಳವಳಿರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

- Advertisement -
- Advertisement -

ರಾಜಸ್ಥಾನದಲ್ಲಿ ಈ ವರ್ಷದ ಆರಂಭದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಒಂಬತ್ತು ದಿನಗಳ ಕಾಲ ಸತತವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ನ್ಯಾಯಾಲಯವು 13 ಜನರಿಗೆ ತಲಾ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಇದೇ ಪ್ರಕರಣದಲ್ಲಿ ಮತ್ತಿಬ್ಬರು ಅಪರಾಧಿಗಳಿಗೆ ತಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಕೋಟಾ ನ್ಯಾಯಾಲಯ ಶನಿವಾರ ವಿಧಿಸಿದೆ.

ಫೋಕ್ಸೋ ಕಾಯಿದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ನೇತೃತ್ವ ವಹಿಸಿಕೊಂಡಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶೋಕ್ ಚೌಧರಿ, ಮನೆಯಿಂದ ಬಾಲಕಿಯನ್ನು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆಗೆ ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಪರಾಧಿ ಮಹಿಳೆ ಬಾಲಕಿಯನ್ನು ಮನೆಯಿಂದ ಅಪಹರಿಸಿ ಜಲಾವರ್‌ಗೆ ಕರೆದೊಯ್ದು ಅಲ್ಲಿ ಹಲವು ಮಂದಿಗೆ ಮಾರಾಟ ಮಾಡಿದ್ದರು.

13 ಅಪರಾಧಿಗಳಿಗೆ ತಲಾ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಜೊತೆಗೆ ತಲಾ 10,000 ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ ನಾಲ್ಕು ವರ್ಷಗಳ ಶಿಕ್ಷೆಗೆ ಒಳಗಾದವರಿಗೆ 7,000 ರೂಪಾಯಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ಈ 16 ಜನರಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ, ಅಪರಾಧದಲ್ಲಿ ಭಾಗಿಯಾಗಿದ್ದ ಇತರ 12 ಜನರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಖುಲಾಸೆಗೊಳಿಸಿದೆ. ನಾಲ್ವರು ಅಪ್ರಾಪ್ತ ಅಪರಾಧಿಗಳು ಇನ್ನೂ ಸ್ಥಳೀಯ ಬಾಲ ನ್ಯಾಯ ಮಂಡಳಿಯಲ್ಲಿ ಪ್ರತ್ಯೇಕವಾಗಿ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಈ ವರ್ಷದ ಮಾರ್ಚ್ 6 ರಂದು ಸುಕೇತ್ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಬ್ಯಾಗ್ ಕೊಡಿಸುವ ನೆಪದಲ್ಲಿ ಬುಲ್ಬುಲ್ ಅಲಿಯಾಸ್ ಪೂಜಾ ಜೈನ್ ಎಂಬ ಮಹಿಳೆ ಆಕೆಯನ್ನು ಕೋಟಾದಿಂದ ಅಪಹರಿಸಿದ್ದರು. ಅಲ್ಲಿಂದ ಆಕೆ ತನ್ನನ್ನು ಜಲಾವರ್‌ಗೆ ಕರೆದೊಯ್ದರು. ಅಲ್ಲಿ ಒಂಬತ್ತು ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರ ಎಸಗಿದದ ಬಳಿಕ ಒಬ್ಬರ ಬಳಿಕ ಒಬ್ಬರಂತೆ ಹಲವಾರು ಜನರಿಗೆ ಹಸ್ತಾಂತರಿಸಿದರು ಎಂದು ಬಾಲಕಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ ಕೋಟಾ ಪೊಲೀಸರು ಮೇ 7 ರಂದು ನ್ಯಾಯಾಲಯಕ್ಕೆ 1750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.


ಇದನ್ನೂ ಓದಿ: ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕು ವಿನಹ ಇಂತ ಕೆಳಮಟ್ಟದ ಶಿಕ್ಷೇಗಳಿಂದ ಸಮಾಜದಲ್ಲಿ ಭಯದ ಬದಲು ಬಂಡತನ ಉಂಟಾಗುತ್ತೇ ಅತ್ಯಾಚಿರಿಗಳಿಗೆ ಇಂತ ವಿಷಯಗಳಲ್ಲಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...