Homeಚಳವಳಿರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

ರಾಜಸ್ಥಾನ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 13 ಮಂದಿಗೆ 20 ವರ್ಷ ಜೈಲು

- Advertisement -
- Advertisement -

ರಾಜಸ್ಥಾನದಲ್ಲಿ ಈ ವರ್ಷದ ಆರಂಭದಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಒಂಬತ್ತು ದಿನಗಳ ಕಾಲ ಸತತವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ನ್ಯಾಯಾಲಯವು 13 ಜನರಿಗೆ ತಲಾ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.

ಇದೇ ಪ್ರಕರಣದಲ್ಲಿ ಮತ್ತಿಬ್ಬರು ಅಪರಾಧಿಗಳಿಗೆ ತಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಕೋಟಾ ನ್ಯಾಯಾಲಯ ಶನಿವಾರ ವಿಧಿಸಿದೆ.

ಫೋಕ್ಸೋ ಕಾಯಿದೆಯಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯದ ನೇತೃತ್ವ ವಹಿಸಿಕೊಂಡಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶೋಕ್ ಚೌಧರಿ, ಮನೆಯಿಂದ ಬಾಲಕಿಯನ್ನು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆಗೆ ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಪರಾಧಿ ಮಹಿಳೆ ಬಾಲಕಿಯನ್ನು ಮನೆಯಿಂದ ಅಪಹರಿಸಿ ಜಲಾವರ್‌ಗೆ ಕರೆದೊಯ್ದು ಅಲ್ಲಿ ಹಲವು ಮಂದಿಗೆ ಮಾರಾಟ ಮಾಡಿದ್ದರು.

13 ಅಪರಾಧಿಗಳಿಗೆ ತಲಾ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಜೊತೆಗೆ ತಲಾ 10,000 ರೂಪಾಯಿ ದಂಡ ವಿಧಿಸಲಾಗಿದೆ. ಜೊತೆಗೆ ನಾಲ್ಕು ವರ್ಷಗಳ ಶಿಕ್ಷೆಗೆ ಒಳಗಾದವರಿಗೆ 7,000 ರೂಪಾಯಿ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕ್ಷಮೆ ಕೇಳಿದ ಮಾಜಿ ಸ್ಪೀಕರ್‌ ರಮೇಶ್ ಕುಮಾರ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌

ಈ 16 ಜನರಿಗೆ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ, ಅಪರಾಧದಲ್ಲಿ ಭಾಗಿಯಾಗಿದ್ದ ಇತರ 12 ಜನರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಖುಲಾಸೆಗೊಳಿಸಿದೆ. ನಾಲ್ವರು ಅಪ್ರಾಪ್ತ ಅಪರಾಧಿಗಳು ಇನ್ನೂ ಸ್ಥಳೀಯ ಬಾಲ ನ್ಯಾಯ ಮಂಡಳಿಯಲ್ಲಿ ಪ್ರತ್ಯೇಕವಾಗಿ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಈ ವರ್ಷದ ಮಾರ್ಚ್ 6 ರಂದು ಸುಕೇತ್ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಬ್ಯಾಗ್ ಕೊಡಿಸುವ ನೆಪದಲ್ಲಿ ಬುಲ್ಬುಲ್ ಅಲಿಯಾಸ್ ಪೂಜಾ ಜೈನ್ ಎಂಬ ಮಹಿಳೆ ಆಕೆಯನ್ನು ಕೋಟಾದಿಂದ ಅಪಹರಿಸಿದ್ದರು. ಅಲ್ಲಿಂದ ಆಕೆ ತನ್ನನ್ನು ಜಲಾವರ್‌ಗೆ ಕರೆದೊಯ್ದರು. ಅಲ್ಲಿ ಒಂಬತ್ತು ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರ ಎಸಗಿದದ ಬಳಿಕ ಒಬ್ಬರ ಬಳಿಕ ಒಬ್ಬರಂತೆ ಹಲವಾರು ಜನರಿಗೆ ಹಸ್ತಾಂತರಿಸಿದರು ಎಂದು ಬಾಲಕಿ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ ಕೋಟಾ ಪೊಲೀಸರು ಮೇ 7 ರಂದು ನ್ಯಾಯಾಲಯಕ್ಕೆ 1750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.


ಇದನ್ನೂ ಓದಿ: ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆಯನ್ನು ನೀಡಬೇಕು ವಿನಹ ಇಂತ ಕೆಳಮಟ್ಟದ ಶಿಕ್ಷೇಗಳಿಂದ ಸಮಾಜದಲ್ಲಿ ಭಯದ ಬದಲು ಬಂಡತನ ಉಂಟಾಗುತ್ತೇ ಅತ್ಯಾಚಿರಿಗಳಿಗೆ ಇಂತ ವಿಷಯಗಳಲ್ಲಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....