Homeಮುಖಪುಟರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನಿರ್ಲಕ್ಷಿಸಿದ ಪೊಲೀಸರು: ದಲಿತನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನಿರ್ಲಕ್ಷಿಸಿದ ಪೊಲೀಸರು: ದಲಿತನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

- Advertisement -
- Advertisement -

ರಾಜಸ್ಥಾನ ಹೈಕೋರ್ಟ್‌ನಿಂದ ತಾನು ಪ್ರಿತಿಸಿದ ದಲಿತ ಯುವಕನೊಂದಿಗೆ ವಾಸಿಸಲು ರಕ್ಷಣೆ ಪಡೆದ 18 ವರ್ಷದ ಒಬಿಸಿ ಸಮುದಾಯದ ಯುವತಿಯನ್ನು ಆಕೆಯ ತಂದೆ ಕೊಲೆ ಮಾಡಿದ್ದಾರೆ ಎಂದು ರಾಜ್ಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತನ್ನ ಮಗಳು ಪಿಂಕಿಯನ್ನು ದೌಸಾ ಪಟ್ಟಣದ ತನ್ನ ಮನೆಯಲ್ಲಿ ಕೊಂದಿದ್ದೇನೆ ಎಂದು ತಂದೆ ಶಂಕರ್ ಲಾಲ್ ಸೈನಿ ಬುಧವಾರ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ತದನಂತರ ಆತನನ್ನು ಬಂಧಿಸಿದ ಪೊಲೀಸರು ಶವವನ್ನು ವಶಪಡಿಸಿಕೊಂಡಿದ್ದಾರೆ, ಇದು ಕತ್ತು ಹಿಸುಕಿದ ಗುರುತುಗಳನ್ನು ಹೊಂದಿದೆ ಎಂದು ಎಸ್ಪಿ ಹೇಳಿದರು.

ಫೆಬ್ರವರಿ 16 ರಂದು ಒಬಿಸಿ ಸಮುದಾಯದ ಪಿಂಕಿ ಸೈನಿಯು ದಲಿತ ಸಮುದಾಯದ ರೋಶನ್ ಮಹಾವರ್ (24) ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದರು. ಇದಕ್ಕೆ ಪಿಂಕಿಯ ಕುಟುಂಬ ಒಪ್ಪಿರಲಿಲ್ಲ. ಹಾಗಾಗಿ ಫೆಬ್ರವರಿ 21 ರಂದು ಪಿಂಕಿ ಮಹಾವರ್ ಅವರೊಂದಿಗೆ ಊರು ತೊರೆದರು. ಫೆಬ್ರವರಿ 26 ರಂದು, ದಂಪತಿಗಳು ರಾಜಸ್ಥಾನ ಹೈಕೋರ್ಟ್ ಮುಂದೆ ಹಾಜರಾಗಿ ನಮ್ಮದು ಪರಸ್ಪರ ಒಪ್ಪಿತ ವಿವಾಹವಾಗಿದ್ದು ರಕ್ಷಣೆ ನೀಡಬೇಕೆಂದು ಕೋರಿದ್ದರು.

ನ್ಯಾಯಾಲಯವು ಅವರಿಗೆ ಸ್ಥಳೀಯ ಪೊಲೀಸರಿಂದ ರಕ್ಷಣೆ ನೀಡುವಂತೆ ಆದೇಶಿಸಿತು ಮತ್ತು “ಅವರು ಎಲ್ಲಿಗೆ ಹೋಗಬೇಕೆಂದು ಬಯಸುತ್ತಾರೆಯೋ ಅಲ್ಲಿಗೆ ಕರೆದೊಯ್ಯಬೇಕು” ಎಂದು ಕೋರ್ಟ್ ಸೂಚಿಸಿತ್ತು ಎಸ್ಪಿ ಕುಮಾರ್ ತಿಳಿಸಿದ್ದಾರೆ.

ಪಿಂಕಿ ಮತ್ತು ರೋಶನ್ ಜೈಪುರಕ್ಕೆ ಹೋಗಲು ಬಯಸಿದ್ದರಿಂದ ಪೊಲೀಸರು ಅವರನ್ನು ಜೈಪುರಕ್ಕೆ ಕರೆದೊಯ್ದರು. “ಮಾರ್ಚ್ 1 ರಂದು ದಂಪತಿಗಳು ದೌಸಾದಲ್ಲಿರುವ ರೋಶನ್ ಮನೆಗೆ ಬಂದರು. ಆದರೆ ಯುವತಿಯ ಕುಟುಂಬ ಸದಸ್ಯರು ಅದೇ ದಿನ ಅವಳನ್ನು ಅಲ್ಲಿಂದ ಬಲವಂತವಾಗಿ ಕರೆದೊಯ್ದರು” ಎಂದು ಎಸ್ಪಿ ಹೇಳಿದ್ದಾರೆ.

“ನಾವು ಪಿಂಕಿಗಾಗಿ ಹುಡುಕುತ್ತಿದ್ದೆವು. ನಿನ್ನೆ (ಬುಧವಾರ) ರಾತ್ರಿ ಆಕೆಯ ತಂದೆ ಪೊಲೀಸ್ ಠಾಣೆಗೆ ತಲುಪಿ ತನ್ನ ಮಗಳನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ನಾವು ಅವರ ಮನೆಗೆ ಹೋದಾಗ, ಪಿಂಕಿಯವರ ಮೃತದೇಹವನ್ನು ಕಂಡೆವು. ಆರಂಭಿಕ ಪರಿಶೀಲನೆಯ ಪ್ರಕಾರ, ಇದು ಕತ್ತು ಹಿಸುಕಿದ ಕೊಲೆ ಪ್ರಕರಣವೆಂದು ತೋರುತ್ತದೆ ” ಎಂದು ಎಸ್‌ಪಿ ಕುಮಾರ್ ಹೇಳಿದರು.

ಆರೋಪಿ ತಂದೆ ಶಂಕರ್ ಲಾಲ್ ಸೈನಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಅಪರಾಧದಲ್ಲಿ ಇತರ ವ್ಯಕ್ತಿಗಳು ಭಾಗಿಯಾಗಿರುವ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದಂಪತಿಗಳನ್ನು ರಕ್ಷಿಸಲು ಹೈಕೋರ್ಟ್‌ ನೀಡಿದ ಆದೇಶಕ್ಕೆ ಪೊಲೀಸರು ಬದ್ಧರಾಗಿಲ್ಲ. ಪೊಲೀಸರು ತೋರಿದ “ಸಂಪೂರ್ಣ ನಿರ್ಲಕ್ಷ್ಯ”ದಿಂದ ಈ ಹತ್ಯೆ ಸಂಭವಿಸಿದೆ ಎಂದು ಪಿಂಕಿ ಮತ್ತು ರೋಶನ್ ಪರ ವಕೀಲರು ಆರೋಪಿಸಿದ್ದಾರೆ.

ಫೆಬ್ರವರಿ 26 ರ ತನ್ನ ಆದೇಶದಲ್ಲಿ, ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಸತೀಶ್ ಕುಮಾರ್ ಶರ್ಮಾ ಹೀಗೆ ಹೇಳಿದ್ದರು: “ಅರ್ಜಿದಾರರು ಇಬ್ಬರೂ ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದಾರೆ ಮತ್ತು ಅವರು ಪರಸ್ಪರ ಒಟ್ಟಿಗೆ ಬದುಕಲು ಬಯಸುತ್ತಾರೆ. ಆದ್ದರಿಂದ, ಪ್ರಕರಣದ ಅರ್ಹತೆಗಳ ಬಗ್ಗೆ ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸದೆ, ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳದಂತೆ ಮತ್ತು ಅರ್ಜಿದಾರರಿಗೆ ಯಾವುದೇ ರೀತಿಯ ಹಾನಿ ಮಾಡದಂತೆ ಸಲಹೆ ನೀಡಲು ನಿರ್ದೇಶಿಸಲಾಗಿದೆ…’

“ಇದಲ್ಲದೆ, ಅರ್ಜಿದಾರರಿಗೆ ರಕ್ಷಣೆ ನೀಡುವಂತೆ ಸ್ಥಳೀಯ ಪೊಲೀಸ್ ಪ್ರಾಧಿಕಾರಕ್ಕೆ ತಿಳಿಸಲು ಮತ್ತು ಅವರ ಇಚ್ಛೆಯಂತೆ ಅವರನ್ನು ಸುರಕ್ಷಿತ ಸ್ಥಳದಲ್ಲಿ ಕರೆದೊಯ್ಯಲು ಸಾರ್ವಜನಿಕ ಅಭಿಯೋಜಕರಿಗೆ ನಿರ್ದೇಶಿಸಲಾಗಿದೆ” ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದು, ಮಾರ್ಚ್ 9 ರಂದು ನ್ಯಾಯಾಲಯವು ಈ ವಿಷಯವನ್ನು ಮತ್ತೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು.

ಮಾರ್ಚ್ 1 ರಂದು ಪಿಂಕಿಯನ್ನು ಬಲವಂತವಾಗಿ ಕರೆದೊಯ್ದ ಆರೋಪದಲ್ಲಿ, ರೋಶನ್ ಕುಟುಂಬವು ಪಿಂಕಿಯ ತಂದೆ, ಚಿಕ್ಕಪ್ಪ ಮತ್ತು ಇತರ ಸಂಬಂಧಿಕರು ಸೇರಿ 11 ಮಂದಿ ಮತ್ತು 15-20 ಇತರ ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ಅಪಹರಣ, ಕ್ರಿಮಿನಲ್ ಬೆದರಿಕೆ ಮತ್ತು ಕಳ್ಳತನ, ಮತ್ತು ಎಸ್‌ಸಿ /ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿಭಾಗಗಳು ಸೇರಿದಂತೆ ಐಪಿಸಿ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ನೋಂದಾಯಿಸಲಾಗಿದೆ. ಯುವತಿಯ ತಂದೆ ಶಂಕರ್ ಲಾಲ್ ಸೈನಿ ಮತ್ತು ಇತರ ಆರೋಪಿಗಳು ಜಾತಿವಾದಿ ಬೈಗುಳಗಳನ್ನು ಬಳಸಿ ನಿಂದಿಸಿದ್ದಾರೆ ಎಂದು ರೋಶನ್ ಅವರ ಕುಟುಂಬ ಆರೋಪಿಸಿದೆ. ಅವರ ಮನೆಗೆ ಹಾನಿ ಮಾಡಿ, 1.2 ಲಕ್ಷ ರೂ. ದೋಚಿಕೊಂಡು ಮತ್ತು ಪಿಂಕಿಯನ್ನು ಬಲವಂತವಾಗಿ ಅಪಹರಿಸಿದರು ಎಂದು ರೋಶನ್ ಕುಟುಂಬ ದೂರು ನೀಡಿದೆ.

“ದಂಪತಿಗಳಿಗೆ ರಕ್ಷಣೆ ನೀಡುವ ಹೈಕೋರ್ಟ್ ಆದೇಶದ ಹೊರತಾಗಿಯೂ, ಪಿಂಕಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ಸಂಪೂರ್ಣ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ದಂಪತಿಗಳು ತಮ್ಮ ಸುರಕ್ಷತೆಗಾಗಿ ಹೆದರುತ್ತಿದ್ದರು ಮತ್ತು ತಮ್ಮ ಸ್ವಂತ ಇಚ್ಛಾಶಕ್ತಿಯಿಂದ ಪರಸ್ಪರ ಒಟ್ಟಿಗೆ ಬದುಕಲು ಬಯಸಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು ”ಎಂದು ಪಿಂಕಿ ಮತ್ತು ರೋಶನ್ ಅವರನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸಿದ ವಕೀಲ ನವಾಲ್ ಸಿಂಗ್ ಸಿಕಾರ್ವಾರ್ ಹೇಳಿದ್ದಾರೆ.

ಪಿಂಕಿಯ ಹತ್ಯೆಯ ನಂತರ, ಈಗ ತಾನು ನನ್ನ ಜೀವಕ್ಕೆ ಹೆದರುತ್ತಿದ್ದೇನೆ. ನನ್ನನ್ನೂ ಕೊಲೆ ಮಾಡಬಹುದು. ಆದರೆ ಪೊಲೀಸರು ನನ್ನ ಭಯವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಎಂದು ರೋಶನ್ ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

“ಅವರು ಪಿಂಕಿಯನ್ನು ಕೊಲ್ಲಬಹುದೆಂದು ನನಗೆ ತಿಳಿದಿತ್ತು. ಪಿಂಕಿಯ ಕುಟುಂಬ ಅವಳನ್ನು ಕರೆದುಕೊಂಡು ಹೋದಾಗ ನಾನು ಇದನ್ನು ಪೊಲೀಸರಿಗೆ ತಿಳಿಸಿದ್ದೆ. ಆದರೆ ಅವರು (ಪೊಲೀಸರು), ಪಿಂಕಿಯನ್ನು ಕರೆದುಕೊಂಡು ಹೋಗಿದ್ದ ಆಕೆಯ ಪೋಷಕರು ಮುಂದಿನ ವಿಚಾರಣೆಯಲ್ಲಿ ಆಕೆಯನ್ನು ನ್ಯಾಯಾಲಯಕ್ಕೆ ಕರೆತರುತ್ತಾರೆ ಎಂದು ಹೇಳಿದರು. ನಾನು ಕೂಗಿ ಹೇಳಿದೆ ಮತ್ತು ಪೊಲೀಸರಿಗೆ ಮನವಿ ಮಾಡಿದೆ, ಆದರೆ ಅವರು ನನ್ನ ಕಳವಳವನ್ನು ಗಂಭೀರವಾಗಿ ಪರಿಗಣಿಸಲಿಲ್ಲ” ಎಂದು ರೋಶನ್ ಅಳಲು ತೋಡಿಕೊಂಡಿದ್ದಾರೆ.

“ಅವಳು ಅಂತಿಮವಾಗಿ ಅವಳ ಮನೆಯಲ್ಲಿಯೇ ಕೊಲೆಯಾಗಿರುವುದು ಹೇಗೆ? ಅವಳು ಇಲ್ಲಿಯೇ ದೌಸಾದಲ್ಲಿ, ಅವಳ ಹೆತ್ತವರ ಮನೆಯಲ್ಲಿದ್ದರೆ, ಪೊಲೀಸರು ಅವಳನ್ನು ಮೂರು ದಿನಗಳವರೆಗೆ ಏಕೆ ಕಂಡುಹಿಡಿಯಲಿಲ್ಲ? ನಮ್ಮಿಬ್ಬರನ್ನೂ ಕೊಲ್ಲುವುದಾಗಿ ಆಕೆಯ ಕುಟುಂಬ ಆಗಾಗ್ಗೆ ಬೆದರಿಕೆ ಹಾಕಿತ್ತು. ‘ ದಲಿತ ಕೋಲಿ ಜಾತಿಯವನಾದ ನೀನು, ಒಬಿಸಿ ಮಾಲಿ ಜಾತಿಯ ಪಿಂಕಿಯೊಂದಿಗೆ ಬದುಕಲು ಕನಸು ಕಾಣುತ್ತಿರುವುದೇ ಅಪರಾಧ’ ಎಂದು ಪಿಂಕಿ ಕುಟುಂಬದವರು ನನ್ನನ್ನು ಬೆದರಿಸಿದ್ದರು. ಅವರು ನನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಿದ್ದರು” ಎಂದು ರೋಶನ್ ಹೇಳಿದ್ದಾರೆ.

ರೋಶನ್ ಪ್ರಕಾರ, ಸುಮಾರು 40 ಪುರುಷರು ಮತ್ತು ಮಹಿಳೆಯರು, (ಅವರಲ್ಲಿ ಹೆಚ್ಚಿನವರು ಪಿಂಕಿಯ ವಿಸ್ತೃತ ಕುಟುಂಬದ ಸದಸ್ಯರಾಗಿದ್ದರು,) ಪಿಂಕಿಯನ್ನು ಕರೆದೊಯ್ಯಲು ಅವರ ಮನೆಗೆ ಬಂದಿದ್ದರು.

“ನಾವು ಹಣವಿಲ್ಲದ ಕಾರಣ ನಾವು ಮತ್ತೆ ದೌಸಾಗೆ ಬಂದಿದ್ದೇವೆ” ಎಂದು ಪಟ್ಟಣದಲ್ಲಿ ಜಿಮ್ ಹೊಂದಿರುವ ಮತ್ತು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐಟಿಐ) ಪದವಿ ಓದುತ್ತಿರುವ ರೋಶನ್ ಹೇಳಿದರು. “ನಾವು ಮನೆಗೆ ತಲುಪಿದ ತಕ್ಷಣ, ಅವರ ಕುಟುಂಬ ಸದಸ್ಯರು ನಮ್ಮ ಮೇಲೆ ಹಲ್ಲೆ ನಡೆಸಿ ಕರೆದೊಯ್ದರು” ಎಂದು ಅವರು ಹೇಳಿದರು.

ಪಿಂಕಿ ಕಾಲೇಜಿನಲ್ಲಿ ತನ್ನ ಮೊದಲ ವರ್ಷದಲ್ಲಿದ್ದಳು. ನಾವು ಪ್ರೀತಿಸಿ ಊರು ತೊರೆಯುವ ಮೊದಲು, ಅವರ ಕುಟುಂಬವು ಅವಳನ್ನು ಬೇರೆ ಮದುವೆಗೆ ಒತ್ತಾಯಿಸಿತ್ತು ಮತ್ತು ಅವಳನ್ನು ಹೊಡೆದಿತ್ತು ಎಂದು ರೋಶನ್ ಆರೋಪಿಸಿದ್ದಾರೆ. “ನಾನು ಈಗ ನನ್ನ ಪ್ರಾಣಕ್ಕಾಗಿ ಭಯಪಡುತ್ತೇನೆ. ಅವಳ ಮೂವರು ಸಂಬಂಧಿಗಳಾದ ಕಲು, ಮುಖೇಶ್ ಮತ್ತು ರಂಗ್‌ಲಾಲ್ ನನ್ನನ್ನು ಕೊಲ್ಲಲು ಕೆಲವು ಜನರಿಗೆ ಹಣವನ್ನು ನೀಡಿದ್ದಾರೆ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ರೋಶನ್ ಹೇಳಿದ್ದಾರೆ.

ಘಟನೆ ಬಹಿರಂಗವಾಗುತ್ತಿದ್ದಂತೆ ನೂರಾರು ಸಾಮಾಜಿಕ ಕಾರ್ಯಕರ್ತರು ಪೊಲೀಸರ ನಿರ್ಲಕ್ಷ್ಯ ಖಂಡಿಸಿದ್ದಾರೆ. ಜೊತೆಗೆ ರೋಶನ್ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಒತ್ತಾಯಿಸಿದ್ದಾರೆ.

“ಇದು ನಾಚಿಕೆಗೇಡಿನ ಸಂಗತಿ. ಇದು ಮಹಿಳೆಯರ ಭದ್ರತೆಗಾಗಿ ಪೊಲೀಸ್ ಮತ್ತು ರಾಜಸ್ಥಾನ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸುತ್ತದೆ. ದಂಪತಿಯನ್ನು ರಕ್ಷಿಸಲು ಹೈಕೋರ್ಟ್ ಪೊಲೀಸರಿಗೆ ಆದೇಶ ನೀಡಿದ್ದರೂ, ಪಿಂಕಿ ಸೈನಿಯನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ” ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ನ ರಾಜಸ್ಥಾನ ಘಟಕದ ಅಧ್ಯಕ್ಷ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

“ದೌಸಾದ ಸರ್ಕಲ್ ಆಫೀಸರ್, ದೌಸಾ ಎಸ್ಪಿ ಮತ್ತು ಕೊಟ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೇರಿದಂತೆ ಅಲ್ಲಿನ ಇತರ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಾವು ಒತ್ತಾಯಿಸುತ್ತೇವೆ. ಪಿಂಕಿಯನ್ನು ಅಪಹರಿಸಿದ ನಂತರ ರೋಶನ್ ತುರ್ತು ಸಂಖ್ಯೆ 100ಕ್ಕೆ ಹಲವಾರು ಕರೆಗಳನ್ನು ಮಾಡಿದ್ದಾರೆ. ಆದರೆ ದೌಸಾ ಪೊಲೀಸರು, ಕೊಟ್ವಾಲಿ ಪೊಲೀಸ್ ಠಾಣೆಗೆ ಕರೆ ಮಾಡಲು ಹೇಳುವ ಮೂಲಕ ಅವರು ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದರು ” ಎಂದು ಕವಿತ ಶ್ರೀವಾಸ್ತವ ಹೇಳಿದರು.

ಹೈಕೋರ್ಟ್‌ ಆದೇಶದ ಬಗ್ಗೆ ದೌಸಾ ಪೊಲೀಸರಿಗೆ ತಿಳಿದಿಲ್ಲ ಎಂದು ಸರ್ಕಲ್ ಅಧಿಕಾರಿ ದೀಪಕ್ ಕುಮಾರ್ ಹೇಳಿದ್ದಾರೆ. “ನ್ಯಾಯಾಲಯವು ಅವರಿಗೆ ರಕ್ಷಣೆ ನೀಡಿದೆ ಎಂದು ನಮಗೆ ತಿಳಿದಿರಲಿಲ್ಲ. ಮಹಿಳೆಯನ್ನು ಅಪಹರಿಸಿದ ನಂತರವೇ ನಮಗೆ ಇದು ಗೊತ್ತಾಗಿದ್ದು. ಹೈಕೋರ್ಟ್ ಆದೇಶದ ಬಗ್ಗೆ ಅಧಿಕೃತ ಚಾನೆಲ್‌ಗಳ ಮೂಲಕ ನಮಗೆ ಯಾವುದೇ ಮಾಹಿತಿ ಬಂದಿಲ್ಲ” ಎಂದು ದೀಪಕ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...