Homeದಲಿತ್ ಫೈಲ್ಸ್ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ

ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ

- Advertisement -
- Advertisement -

ನೀರಿನ ಪಾತ್ರೆ ಮುಟ್ಟಿದ್ದಕ್ಕಾಗಿ ಎಂಟು ವರ್ಷದ ದಲಿತ ಬಾಲಕನನ್ನು ಥಳಿಸಿ, ತಲೆಕೆಳಗಾಗಿ ಮರಕ್ಕೆ ನೇತುಹಾಕಲಾಗಿದೆ ಎಂಬ ಆರೋಪದ ಮೇಲೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪ್ರಬಲಜಾತಿ ವ್ಯಕ್ತಿಯನ್ನು ಬಂಧಿಸಲಾಗಿದೆ.

ಕೃತ್ಯಕ್ಕೆ ಸಹಕರಿಸಿದ ಇತರ ಇಬ್ಬರನ್ನು ಬಂಧಿಸಲಾಗಿದೆ; ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಬಾಲಕನ ತಾಯಿ ಮತ್ತು ಅಜ್ಜಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಳಕನ ತಾಯಿ ಪುರಿ ದೇವಿ ಪ್ರಕಾರ, ಅವನು ತಮ್ಮ ಭಖರ್‌ಪುರ ಗ್ರಾಮದಲ್ಲಿ ಆಟವಾಡುತ್ತಿದ್ದಾಗ, ನರನಾರಾಮ್ ಪ್ರಜಾಪತ್ ಮತ್ತು ದೇಮಾರಾಮ್ ಪ್ರಜಾಪತ್ ಎಂಬುವವರು ಸ್ನಾನಗೃಹವನ್ನು ಸ್ವಚ್ಛಗೊಳಿಸಲು ಮತ್ತು ಕಸ ಸಂಗ್ರಹಿಸಲು ಸೂಚಿಸಿದ್ದಾರೆ.

ಅಪ್ರಾಪ್ತ ಬಾಲಕ ಕೆಲಸ ಮುಗಿಸಿ ನೀರು ಕೇಳಿದ ನಂತರ ದೈಹಿಕ ಹಲ್ಲೆ ಪ್ರಾರಂಭವಾಯಿತು ಎಂದು ವರದಿಯಾಗಿದೆ. ನೀರಿನ ಪಾತ್ರೆ ಮುಟ್ಟಿದ ನಂತರ ಆರೋಪಿಗಳು ಬಾಲಕನನ್ನು ನರನಾರಾಮ್ ಅವರ ನಿವಾಸಕ್ಕೆ ಕರೆದೊಯ್ದರು, ಅಲ್ಲಿ ಅವರು ಅವನನ್ನು ಮರಕ್ಕೆ ತಲೆಕೆಳಗಾಗಿ ನೇತುಹಾಕಿ ಹೊಡೆಯುವುದನ್ನು ಮುಂದುವರೆಸಿದರು ಎಂದು ವರದಿಯಾಗಿದೆ.

ಅಪ್ರಾಪ್ತ ವಯಸ್ಕನ ಸಂಬಂಧಿಯೊಬ್ಬರು ಘಟನೆಯನ್ನು ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಲು ಪ್ರಾರಂಭಿಸಿದಾಗ ಹಲ್ಲೆ ನಿಲ್ಲಿಸಿದರು ಎಂದು ವರದಿಯಾಗಿದೆ.

“ಪ್ರಾಥಮಿಕ ತನಿಖೆ, ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕನನ್ನು ಕ್ರೂರವಾಗಿ ಥಳಿಸಿ ತಲೆಕೆಳಗಾಗಿ ನೇತುಹಾಕಲಾಗಿದೆ ಎಂದು ದೃಢಪಟ್ಟಿದೆ. ಆದರೂ, ನೀರಿನ ಪಾತ್ರೆಯನ್ನು ಮುಟ್ಟಿದ್ದರಿಂದ ಹಲ್ಲೆ ನಡೆದಿದೆ ಎಂಬ ಆರೋಪ ಇನ್ನೂ ತನಿಖೆಯಲ್ಲಿದೆ” ಎಂದು ಪೊಲೀಸ್ ಅಧಿಕಾರಿ ಸುಖ್‌ರಾಮ್ ಬಿಷ್ಣೋಯ್ ಹೇಳಿದರು.

ಆರೋಪಿಗಳು ಪುರಿ ದೇವಿಯ ಮನೆಗೆ ನುಗ್ಗಿ ಅವರ ಮತ್ತು ಅವರ ಅತ್ತೆಯ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಆಗಸ್ಟ್ 30 ರಂದು ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಲಾಗಿದೆ ಎಂದು ಬಿಷ್ಣೋಯ್ ಹೇಳಿದರು. “ಶಂಕಿತರನ್ನು ನರ್ನಾರಾಮ್, ದೇಮಾರಾಮ್ ಮತ್ತು ರೂಪರಾಮ್ ಪ್ರಜಾಪತ್ ಎಂದು ಗುರುತಿಸಲಾಗಿದೆ, ಎಲ್ಲರೂ ಭಾಖರ್‌ಪುರ ನಿವಾಸಿಗಳು” ಎಂದರು.

ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), ಸೆಕ್ಷನ್ 127(2) (ಅಕ್ರಮ ಬಂಧನ), ಮತ್ತು ಸೆಕ್ಷನ್ 137(2) (ಅಪಹರಣ) ಮತ್ತು 1989 ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಆಂಧ್ರಪ್ರದೇಶ| ದಲಿತ ಕುಟುಂಬದ ಮೇಲೆ ಟಿಡಿಪಿ ನಾಯಕನಿಂದ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...