Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....