Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...