Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...