Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...