Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...