Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...