Homeಮುಖಪುಟರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ರಾಜಸ್ಥಾನ ಅವಿಶ್ವಾಸ ನಿರ್ಣಯಕ್ಕೆ ಗೈರು: ಶಾಸಕರಿಗೆ ಸಮನ್ಸ್ ನೀಡಿ ವಿವರಣೆ ಕೇಳಿದ ಬಿಜೆಪಿ

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

- Advertisement -
- Advertisement -

ಆಗಸ್ಟ್ 14 ರಂದು ರಾಜಸ್ಥಾನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮಂಡಿಸಿದ ವಿಶ್ವಾಸ ನಿರ್ಣಯಕ್ಕೆ ಗೈರಾಗಿದ್ದ ರಾಜಸ್ಥಾನದ ನಾಲ್ಕು ಬಿಜೆಪಿ ಶಾಸಕರಿಗೆ ಪಕ್ಷವು ಸಮನ್ಸ್ ನೀಡಿ, ವಿವರಣೆಯನ್ನು ಕೇಳಿದೆ.

ಶಾಸಕರು ಪ್ರತಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಮತ್ತು ರಾಜ್ಯ ಪಕ್ಷದ ಅಧ್ಯಕ್ಷ ಸತೀಶ್ ಪೂನಿಯಾ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ನಾಲ್ಕೂ ಶಾಸಕರಾದ ಗೋಪಿ ಚಂದ್ ಮೀನಾ, ಕೈಲಾಶ್ ಚಂದ್ರ ಮೀನಾ, ಹರೇಂದ್ರ ನಿನಾಮಾ ಮತ್ತು ಗೌತಮ್ ಲಾಲ್ ಅವರು ಆರಂಭದಲ್ಲಿ ಅಸೆಂಬ್ಲಿಯಲ್ಲಿ ಹಾಜರಿದ್ದೇವೆ, ಆದರೆ ಸಭೆಯನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಿದ ನಂತರ ಗೈರಾದೆವು ಎಂದು ಹೇಳಿದ್ದಾರೆ.

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಕುದುರೆ ವ್ಯಾಪರಾಕ್ಕೊಳಕ್ಕಾಗಬಹುದು ಎಂಬ ಭಯದಿಂದ ಗುಜರಾತ್‌ನ ರೆಸಾರ್ಟ್‌ಗೆ ಕಳುಹಿಸಲಾದ 18 ಬಿಜೆಪಿ ಶಾಸಕರಲ್ಲಿ ಈ ನಾಲ್ವರು ಸೇರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಪೂನಿಯಾ, “ಇದು ಅಷ್ಟಾಗಿ ಏನೂ ಗಂಭೀರವಾಗಿರಲಿಲ್ಲ. ಆದರೆ ಇದು ಅವರ ಅನುಪಸ್ಥಿತಿಯನ್ನು ಪರಿಗಣಿಸುತ್ತದೆ ಅಷ್ಟೆ. ಹಾಗಾಗಿ ನಾನು ಪ್ರತಿಪಕ್ಷದ ನಾಯಕನೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

‘ಅತೃಪ್ತ ಶಾಸಕರು ಮತ್ತೆ ಒಂದಾಗಿದ್ದಾರೆ. ಹಾಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಕೈಬಿಟ್ಟು, ಕೊರೊನಾ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದರು. ನಾವು ಗೈರಾಗಲು ಇದೇ ಕಾರಣ’ ಎಂದು ಶಾಸಕ ಗೋಪಿ ಚಂದ್ ಮೀನಾ ಹೇಳಿದರು.

ಆರೋಗ್ಯ ಸರಿಯಿಲ್ಲದ ಕಾರಣ ಆಗಸ್ಟ್ 13 ರಂದು ಅತಿಸಾರ ಉಂಟಾಗಿ ನಾನು ಅಸ್ವಸ್ಥನಾಗಿದ್ದೆ. ತಮ್ಮ ಕ್ಷೇತ್ರವು ಜೈಪುರದಿಂದ 500 ಕಿ.ಮೀ ದೂರದಲ್ಲಿದೆ. ಗುಜರಾತ್‌ನಲ್ಲಿ ರಸ್ತೆ ಮೂಲಕ ಮತ್ತು ನಂತರ ರಾಜಸ್ಥಾನ ರಸ್ತೆ ಮೂಲಕ ಜೈಪುರಕ್ಕೆ ಪ್ರಯಾಣಿಸುವುದು ನನ್ನ ಆರೋಗ್ಯವನ್ನು ಹದಗೆಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ ನಾನು ಸಭೆಯಲ್ಲಿದ್ದೆ. ಆದರೆ ಪದೇ ಪದೇ ಶೌಚಾಲಯಕ್ಕೆ ಹೋಗಬೇಕಾಗಿ ಬಂತು. ಇದು ಅಲ್ಲಿ ಸಾಧ್ಯವಿಲ್ಲದ್ದರಿಂದ, ಎಂಎಲ್‌ಎ ಕ್ವಾರ್ಟ್ರಸ್‌ಗೆ ಹೋಗಬೇಕಾಯಿತು. ಅಲ್ಲಿಗೆ ಹೊದ ಮೇಲೆ ವಿಶ್ವಾಸ ನಿರ್ಣಯದ ವಿಷಯ ತಿಳಿಯಿತು. ಹಾಗಾಗಿ ಅಲ್ಲಿಯೇ ನಿದ್ರೆಗೆ ಜಾರಿದೆ ಎಂದು ಗೋಪಿ ಚಂದ್ ಮೀನಾ ಹೇಳಿದ್ದಾರೆ.

ಆದರೆ ಬಿಜೆಪಿಗಾಗಿ ದುಡಿದಿರುವ ನನಗೆ ಸಮನ್ಸ್ ನೀಡಿರುವುದು ಬೇಸರ ತಂದಿದೆ. ಅದರೂ ನನ್ನ ಆರೋಗ್ಯದ ಕಾರಣದಿಂದ ಆ ದಿನ ಸದನವನ್ನು ತೊರೆಯುವ ಮೂಲಕ ನಾನು ತಪ್ಪು ಮಾಡಿದ್ದೇನೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ಕಾರು ದುರಸ್ಥಿಯಲ್ಲಿತ್ತು. ಹಾಗಾಗಿ ನಾನು ಆಟೋ ರಿಕ್ಷಾದಲ್ಲಿ ಹೊರಟೆ. ಆದರೂ ಮಳೆಯಲ್ಲಿ ಸಿಲುಕಿಕೊಂಡೆ. ಹಾಗಾಗಿ ಸಭೆಗೆ ಹಾಜರಾಗಲು ತಡವಾಯಿತು ಎಂದು ಗರ್ಹಿ ಶಾಸಕ ಕೈಲಾಶ್ ಚಂದ್ರ ಹೇಳಿದ್ದಾರೆ.

ಮರುದಿನ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಕ್ಷೇತ್ರಕ್ಕೆ ಹೋಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದ್ದರಿಂದ, ಮತ್ತು ಸದನವನ್ನು 1 ಗಂಟೆಗೆ ಮುಂದೂಡಿದ್ದರಿಂದ ನಾನು ಗೈರಾಗಬೇಕಾಯಿತು ಎಂದು ಘಾಟೋಲ್ ಶಾಸಕ ಹರೇಂದ್ರ ನಿನಾಮಾ ವಿವರಣೆ ನೀಡಿದ್ದಾರೆ.

“ಅವಿಶ್ವಾಸ ನಿರ್ಣಯ ಮಂಡಿಸದಿರಲು ಪಕ್ಷ ನಿರ್ಧರಿಸಿತು. ಕಾಂಗ್ರೆಸ್ ಬಣಗಳು ಮತ್ತೆ ಒಂದಾಗಿದ್ದವು. ಆದ್ದರಿಂದ ಇನ್ನು ಏನೂ ಉಳಿದಿಲ್ಲ. ಇದಲ್ಲದೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ನನ್ನ ಕ್ಷೇತ್ರದಲ್ಲಿ ಇರಬೇಕಾಗಿತ್ತು. ಆದ್ದರಿಂದ ಸದನವನ್ನು ಮುಂದೂಡಿದ ನಂತರ, ನಾನು ಎಂ ಎಲ್ ಎ ಕ್ವಾರ್ಟ್ರಸ್ ಗೆ ಮರಳಿದೆ. ಊಟದ ನಂತರ ಸ್ವಕ್ಷೇತ್ರಕ್ಕೆ ಹೊರಟೆ” ಎಂದು ಶಾಸಕ ಗೌತಮ್ ಲಾಲ್ ಹೇಳಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಇತರ 18 ಶಾಸಕರ ಬಂಡಾಯದ ನಂತರ, ರಾಜಸ್ಥಾನದಲ್ಲಿ ಒಂದು ತಿಂಗಳ ಕಾಲ ರಾಜಕೀಯ ಬಿಕ್ಕಟ್ಟು ಸಂಭವಿಸಿತ್ತು. ಅಶೋಕ್ ಗೆಹ್ಲೋಟ್ ಶಿಬಿರದೊಂದಿಗೆ ಮತ್ತೆ ಒಂದಾದ ಅತೃಪ್ತರ ಬಣ ಆಗಸ್ಟ್ 14 ರಂದು ವಿಶ್ವಾಸಾರ್ಹ ನಿರ್ಣಯವನ್ನು ಮಂಡಿಸಿ, ಅದನ್ನು ಧ್ವನಿ ಮತದ ಮೂಲಕ ಗೆದ್ದುಕೊಂಡಿತು.

ರಾಜ್ಯ ಕಾಂಗ್ರೆಸ್‌ನಲ್ಲಿನ ದಂಗೆಯು ಬಿಜೆಪಿಯ ರಾಜ್ಯ ಘಟಕದೊಳಗೆ ಇರುವ ಬಿರುಕನ್ನು ಹೊರಗೆಳೆದಿದೆ. ಮಾಜಿ ಸಿಎಂ ವಸುಂಧರಾ ರಾಜೆ ಸುದೀರ್ಘ ಮೌನವನ್ನು ಕಾಯ್ದುಕೊಂಡಿದ್ದಾರೆ ಮತ್ತು ಅವರ ನಿಷ್ಠಾವಂತ ಮಾಜಿ ಸ್ಪೀಕರ್ ಕೈಲಾಶ್ ಮೇಘವಾಲ್ ಕುದುರೆ ವ್ಯಾಪಾರದ ವಿರುದ್ಧ ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ವಿಶ್ವಾಸ ಮತ ಗೆದ್ದ ಗೆಹ್ಲೋಟ್; ಸರ್ಕಾರ ಭದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....