Homeಮುಖಪುಟರಾಜಸ್ಥಾನ: ಅತ್ಯಾಚಾರ ಸಂತ್ರಸ್ತೆಗೆ ಗುಂಡು ಹಾರಿಸಿದ ಆರೋಪಿ; ಆಕೆಯ ಸಹೋದರನ ಮೇಲೆ ಮಾರಣಾಂತಿಕ ದಾಳಿ

ರಾಜಸ್ಥಾನ: ಅತ್ಯಾಚಾರ ಸಂತ್ರಸ್ತೆಗೆ ಗುಂಡು ಹಾರಿಸಿದ ಆರೋಪಿ; ಆಕೆಯ ಸಹೋದರನ ಮೇಲೆ ಮಾರಣಾಂತಿಕ ದಾಳಿ

- Advertisement -
- Advertisement -

ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಸಹೋದರನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿ, ಆತನ ಇಬ್ಬರು ಸಹಚರರು ಚೂಪಾದ ಆಯುಧಗಳಿಂದ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ತನ್ನ ಸಹೋದರನೊಂದಿಗೆ ಮನೆಗೆ ಹಿಂದಿರುಗುತ್ತಿದ್ದ ಸಂತ್ರಸ್ತೆ ಬೆನ್ನಿಗೆ ಆರೋಪಿಗಳು ಗುಂಡು ಹಾರಿಸಿದ್ದು, ಪ್ರಸ್ತುತ ಜೈಪುರದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಗ್ಪುರ ಗ್ರಾಮದ ಪೊಲೀಸ್ ಠಾಣೆಯಿಂದ ಕೇವಲ 20 ಮೀಟರ್ ದೂರದಲ್ಲಿ ಈ ದಾಳಿ ನಡೆದಿದೆ.

ಸ್ಥಳದಿಂದ ಪರಾರಿಯಾಗುವ ಮೊದಲು ಮೂವರು ಪುರುಷರು ಮಹಿಳೆ ಮತ್ತು ಆಕೆಯ ಸಹೋದರನ ಮೇಲೆ ಕೊಡಲಿಯಂತಹ ಆಯುಧವನ್ನು ಬಳಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಬದುಕುಳಿದ ಅವರಿಗೆ, ತಲೆ, ಕಾಲುಗಳು, ಕೈಗಳು ಮತ್ತು ಭುಜಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಆರೋಪಿಯ ಇಬ್ಬರು ಸಹಚರರಾದ ಮಹಿಪಾಲ್ ಗುರ್ಜರ್ ಮತ್ತು ರಾಹುಲ್ ಗುರ್ಜರ್ ಅವರನ್ನು ಬಂಧಿಸಲಾಗಿದೆ. ಘಟನೆ ನಂತರ, ಆರೋಪಿ ರಾಜೇಂದ್ರ ಯಾದವ್ ಜೈಪುರದ ಎಸ್‌ಎಂಎಸ್‌ ಆಸ್ಪತ್ರೆಯಲ್ಲಿ ತೀವ್ರ ಗಾಯಗಳೊಂದಿಗೆ ಕಂಡುಬಂದಿದ್ದಾನೆ. ಈ ಗಾಯಗಳು ಅಪಘಾತದಿಂದ ಉಂಟಾಗಿದೆಯೇ ಅಥವಾ ಆತ್ಮಹತ್ಯೆಯ ಪ್ರಯತ್ನವೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯಾದವ್ ರೈಲಿನ ಮುಂದೆ ನಿಂತು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂದು ವರದಿಗಳು ಸೂಚಿಸುತ್ತವೆ, ಇದರಿಂದಾಗಿ ಆತ ತನ್ನ ಒಂದು ಕಾಲು ಕಳೆದುಕೊಂಡಿದ್ದಾನೆ.

24 ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆ ಆರೋಪಿ ರಾಜೇಂದ್ರ ಯಾದವ್ ವಿರುದ್ಧ ಜೂನ್ 2023 ರಲ್ಲಿ ಪ್ರಕರಣ ದಾಖಲಿಸಿದ್ದರು. ಆ ಸಮಯದಲ್ಲಿ ಯಾದವ್ ಅವರನ್ನು ಬಂಧಿಸಲಾಯಿತು. ನಂತರ, ಆತ ತನ್ನ ಕೆಲಸ ಕಳೆದುಕೊಂಡಿದ್ದ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡ ಅವನು, ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಲು ಆರಂಭಿಸಿದ್ದ. ಆಕೆ ನಿರಾಕರಿಸಿದ್ದಕ್ಕೆ ಪ್ರತೀಕಾರವಾಗಿ ಇತ್ತೀಚಿನ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಯಾದವ್ ಸ್ಥಳೀಯ ರಾಜಕಾರಣಿಗಳೊಂದಿಗೆ ತೆಗೆಸಿಕೊಂಡಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ. ಅಪರಾಧಿಗಳು ಮತ್ತು ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಗಳ ನಡುವಿನ ಸಂಪರ್ಕದ ಬಗ್ಗೆ ಜನರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಇದನ್ನೂ ಓದಿ; ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ; 26 ವರ್ಷದ ದಲಿತ ಯುವಕನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...