Homeಚಳವಳಿರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ...

ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

- Advertisement -
- Advertisement -

ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ವಿಮಾ ಹಕ್ಕು ನಿರಾಕರಿಸಿದ್ದ ಸಾರ್ವಜನಿಕ ವಲಯದ ವಿಮಾ ಕಂಪನಿ ಮತ್ತು ಸರ್ಕಾರಿ ಸಹಕಾರಿ ಬ್ಯಾಂಕ್ ವಿರುದ್ಧ ಸುಮಾರು ಮೂರು ವರ್ಷಗಳ ಕಾನೂನು ಹೋರಾಟ ನಡೆಸಿ ಗೆಲುವು ಕಂಡಿದ್ದಾರೆ ರಾಜಸ್ಥಾನದ ರೈತರು.

ಹೌದು, ರಾಜಸ್ಥಾನದ ಜೋಧಪುರದ ರೈತರು ಕಳೆದ ಮೂರು ವರ್ಷಗಳಿಂದ ತಮಗೆ ದೊರೆಯಬೇಕಿದ್ದ ವಿಮಾ ಹಕ್ಕುಗಳಿಗಾಗಿ ಕಾನೂನು ಹೋರಾಟ ನಡೆಸಿದ್ದರು. ಅಂತಿಮವಾಗಿ 2016ರ ಬೆಳೆಗಳಿಗೆ ತಮ್ಮ ಪಾಲನ್ನು ಸ್ವೀಕರಿಸಿದ್ದಾರೆ.

ಜೋಧ್‌ಪುರದ ಸತ್ಲಾನಾ ಗ್ರಾಮ ಪಂಚಾಯತ್‌ನ ಸಾವಿರಾರು ರೈತರಿಗೆ ವಿಮೆ ಹಕ್ಕು ನಿರಾಕರಿಸಲಾಗಿತ್ತು. ಏಕೆಂದರೆ ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಅಗ್ರಿಕಲ್ಚರಲ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (ಎಐಸಿ) ರೈತರು ಪ್ರೀಮಿಯಂಗಳನ್ನು ಪಾವತಿಸಿದ ಒಂದು ವರ್ಷದ ನಂತರ, ರೈತರು ಸಾಫ್ಟ್‌ ಕಾಪಿಗಳಲ್ಲಿ ವಿಮಾ ವಿವರಗಳನ್ನು ಸಲ್ಲಿಸಿಲ್ಲ ಎಂಬ ಕಾರಣ ನೀಡಿ ಜೋಧಪುರ ಕೇಂದ್ರ ಸಹಕಾರ ಸಮಿತಿ ಬ್ಯಾಂಕ್‌ಗೆ ಪ್ರೀಮಿಯಂಗಳನ್ನು ಮರುಪಾವತಿಸಿದೆ. ಇತ್ತ ರೈತರ ಖಾತೆಗಳಲ್ಲಿ ಮರುಪಾವತಿಯನ್ನು ಜಮಾ ಮಾಡಲು ಬ್ಯಾಂಕ್ ಕೂಡ ಯಾವುದೇ ಪ್ರಯತ್ನ ಮಾಡಲಿಲ್ಲ.

ಈ ರೈತರು ತಮ್ಮ ಪಂಚಾಯಿತಿ ಅಧ್ಯಕ್ಷ ಭಾಲಾ ರಾಮ್ ಪಟೇಲ್ ಅವರ ಬೆಂಬಲದೊಂದಿಗೆ 2018 ರಲ್ಲಿ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ನ್ಯಾಯಪೀಠದ ಮುಂದೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಸೆಪ್ಟೆಂಬರ್ 16, 2020 ರ ಆದೇಶದಲ್ಲಿ, ನ್ಯಾಯಮೂರ್ತಿ ಸಂಗೀತ ಲೋಧಾ ಮತ್ತು ನ್ಯಾಯಮೂರ್ತಿ ರಾಮೇಶ್ವರ ವ್ಯಾಸ್ ಅವರು 2016 ರ ಬೆಳೆಗೆ ರೈತರಿಗೆ 2020 ರ ಆಗಸ್ಟ್ 20ರಂದು ಪಾವತಿ ಮಾಡಲಾಗಿದೆ ಎಂದು ದೃಢಪಡಿಸಿದರು.

ದಿ ವೈರ್‌ನೊಂದಿಗೆ ಮಾತನಾಡಿರುವ ಸರ್ಪಂಚ್, “ಇದು ಸತ್ಲಾನಾದ ಎಲ್ಲ ರೈತರಿಗೆ ದೊಡ್ಡ ಗೆಲುವು. ಪಿಎಂಎಫ್‌ಬಿವೈ ಅಡಿಯಲ್ಲಿ ವಿಮಾ ಹಕ್ಕುಗಳನ್ನು ಪಡೆಯುವುದು ಭಾರತದಾದ್ಯಂತದ ರೈತರಿಗೆ ಸವಾಲಾಗಿ ಪರಿಣಮಿಸಿದೆ. ವಿಮಾ ಕಂಪನಿಗಳು ಮತ್ತು ಬ್ಯಾಂಕುಗಳು ಯಾವಾಗಲೂ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಕಲ್ಪಿಸಿಕೊಳ್ಳಿ, ನಾವು ನಮ್ಮ ಹಕ್ಕುಗಳಿಗಾಗಿ ಎದ್ದು ನಿಲ್ಲದಿದ್ದಿದ್ದರೆ, ಕಂಪನಿಯು 81 ಲಕ್ಷ ರೂಪಾಯಿಗಳನ್ನು ಪಾವತಿಸಲು ಕಾಳಜಿ ವಹಿಸುತ್ತಿರಲಿಲ್ಲ” ಎಂದಿದ್ದಾರೆ.

ಸತ್ಲಾನಾ, ಕಾರ್ನಿಯಾಲಿ ಮತ್ತು ಭಚಾರ್ಣ ಸೇರಿದಂತೆ ಈ ಮೂರು ಪತ್ವಾರ್‌ ಮಂಡಳಿಗಳಲ್ಲಿ ಖಾರಿಫ್ 2016ಕ್ಕೆ 70% ರಷ್ಟು ಇಳುವರಿ ನಷ್ಟವನ್ನು ರಾಜ್ಯ ಕಂದಾಯ ಇಲಾಖೆಯು ನಿರ್ಣಯಿಸಿತ್ತು. ಆದರೆ ರೈತರಿಗೆ ವಿಮಾ ಹಕ್ಕುಗಳನ್ನು ನಿರಾಕರಿಸಲಾಗಿತ್ತು.

ಇನ್ನೂ ಸಟ್ಲಾನಾದಲ್ಲಿ 2017ರ ಖಾರಿಫ್ ಬೆಳೆಗಳಿಗೂ ಎಐಸಿ ವಿಮಾ ಹಕ್ಕುಗಳನ್ನು ನಿರಾಕರಿಸಿದ ಬಗ್ಗೆ ಪಿಐಎಲ್ ಕಳವಳ ವ್ಯಕ್ತಪಡಿಸಿತ್ತು. ಆ ವಿಷಯವನ್ನು ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ದೇಶಾದ್ಯಂತ ರಸ್ತೆ ತಡೆ, ದೆಹಲಿ ಚಲೋಗೆ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...