Homeಚಳವಳಿರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ...

ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

- Advertisement -
- Advertisement -

ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ವಿಮಾ ಹಕ್ಕು ನಿರಾಕರಿಸಿದ್ದ ಸಾರ್ವಜನಿಕ ವಲಯದ ವಿಮಾ ಕಂಪನಿ ಮತ್ತು ಸರ್ಕಾರಿ ಸಹಕಾರಿ ಬ್ಯಾಂಕ್ ವಿರುದ್ಧ ಸುಮಾರು ಮೂರು ವರ್ಷಗಳ ಕಾನೂನು ಹೋರಾಟ ನಡೆಸಿ ಗೆಲುವು ಕಂಡಿದ್ದಾರೆ ರಾಜಸ್ಥಾನದ ರೈತರು.

ಹೌದು, ರಾಜಸ್ಥಾನದ ಜೋಧಪುರದ ರೈತರು ಕಳೆದ ಮೂರು ವರ್ಷಗಳಿಂದ ತಮಗೆ ದೊರೆಯಬೇಕಿದ್ದ ವಿಮಾ ಹಕ್ಕುಗಳಿಗಾಗಿ ಕಾನೂನು ಹೋರಾಟ ನಡೆಸಿದ್ದರು. ಅಂತಿಮವಾಗಿ 2016ರ ಬೆಳೆಗಳಿಗೆ ತಮ್ಮ ಪಾಲನ್ನು ಸ್ವೀಕರಿಸಿದ್ದಾರೆ.

ಜೋಧ್‌ಪುರದ ಸತ್ಲಾನಾ ಗ್ರಾಮ ಪಂಚಾಯತ್‌ನ ಸಾವಿರಾರು ರೈತರಿಗೆ ವಿಮೆ ಹಕ್ಕು ನಿರಾಕರಿಸಲಾಗಿತ್ತು. ಏಕೆಂದರೆ ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಅಗ್ರಿಕಲ್ಚರಲ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (ಎಐಸಿ) ರೈತರು ಪ್ರೀಮಿಯಂಗಳನ್ನು ಪಾವತಿಸಿದ ಒಂದು ವರ್ಷದ ನಂತರ, ರೈತರು ಸಾಫ್ಟ್‌ ಕಾಪಿಗಳಲ್ಲಿ ವಿಮಾ ವಿವರಗಳನ್ನು ಸಲ್ಲಿಸಿಲ್ಲ ಎಂಬ ಕಾರಣ ನೀಡಿ ಜೋಧಪುರ ಕೇಂದ್ರ ಸಹಕಾರ ಸಮಿತಿ ಬ್ಯಾಂಕ್‌ಗೆ ಪ್ರೀಮಿಯಂಗಳನ್ನು ಮರುಪಾವತಿಸಿದೆ. ಇತ್ತ ರೈತರ ಖಾತೆಗಳಲ್ಲಿ ಮರುಪಾವತಿಯನ್ನು ಜಮಾ ಮಾಡಲು ಬ್ಯಾಂಕ್ ಕೂಡ ಯಾವುದೇ ಪ್ರಯತ್ನ ಮಾಡಲಿಲ್ಲ.

ಈ ರೈತರು ತಮ್ಮ ಪಂಚಾಯಿತಿ ಅಧ್ಯಕ್ಷ ಭಾಲಾ ರಾಮ್ ಪಟೇಲ್ ಅವರ ಬೆಂಬಲದೊಂದಿಗೆ 2018 ರಲ್ಲಿ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ನ್ಯಾಯಪೀಠದ ಮುಂದೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಸೆಪ್ಟೆಂಬರ್ 16, 2020 ರ ಆದೇಶದಲ್ಲಿ, ನ್ಯಾಯಮೂರ್ತಿ ಸಂಗೀತ ಲೋಧಾ ಮತ್ತು ನ್ಯಾಯಮೂರ್ತಿ ರಾಮೇಶ್ವರ ವ್ಯಾಸ್ ಅವರು 2016 ರ ಬೆಳೆಗೆ ರೈತರಿಗೆ 2020 ರ ಆಗಸ್ಟ್ 20ರಂದು ಪಾವತಿ ಮಾಡಲಾಗಿದೆ ಎಂದು ದೃಢಪಡಿಸಿದರು.

ದಿ ವೈರ್‌ನೊಂದಿಗೆ ಮಾತನಾಡಿರುವ ಸರ್ಪಂಚ್, “ಇದು ಸತ್ಲಾನಾದ ಎಲ್ಲ ರೈತರಿಗೆ ದೊಡ್ಡ ಗೆಲುವು. ಪಿಎಂಎಫ್‌ಬಿವೈ ಅಡಿಯಲ್ಲಿ ವಿಮಾ ಹಕ್ಕುಗಳನ್ನು ಪಡೆಯುವುದು ಭಾರತದಾದ್ಯಂತದ ರೈತರಿಗೆ ಸವಾಲಾಗಿ ಪರಿಣಮಿಸಿದೆ. ವಿಮಾ ಕಂಪನಿಗಳು ಮತ್ತು ಬ್ಯಾಂಕುಗಳು ಯಾವಾಗಲೂ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಕಲ್ಪಿಸಿಕೊಳ್ಳಿ, ನಾವು ನಮ್ಮ ಹಕ್ಕುಗಳಿಗಾಗಿ ಎದ್ದು ನಿಲ್ಲದಿದ್ದಿದ್ದರೆ, ಕಂಪನಿಯು 81 ಲಕ್ಷ ರೂಪಾಯಿಗಳನ್ನು ಪಾವತಿಸಲು ಕಾಳಜಿ ವಹಿಸುತ್ತಿರಲಿಲ್ಲ” ಎಂದಿದ್ದಾರೆ.

ಸತ್ಲಾನಾ, ಕಾರ್ನಿಯಾಲಿ ಮತ್ತು ಭಚಾರ್ಣ ಸೇರಿದಂತೆ ಈ ಮೂರು ಪತ್ವಾರ್‌ ಮಂಡಳಿಗಳಲ್ಲಿ ಖಾರಿಫ್ 2016ಕ್ಕೆ 70% ರಷ್ಟು ಇಳುವರಿ ನಷ್ಟವನ್ನು ರಾಜ್ಯ ಕಂದಾಯ ಇಲಾಖೆಯು ನಿರ್ಣಯಿಸಿತ್ತು. ಆದರೆ ರೈತರಿಗೆ ವಿಮಾ ಹಕ್ಕುಗಳನ್ನು ನಿರಾಕರಿಸಲಾಗಿತ್ತು.

ಇನ್ನೂ ಸಟ್ಲಾನಾದಲ್ಲಿ 2017ರ ಖಾರಿಫ್ ಬೆಳೆಗಳಿಗೂ ಎಐಸಿ ವಿಮಾ ಹಕ್ಕುಗಳನ್ನು ನಿರಾಕರಿಸಿದ ಬಗ್ಗೆ ಪಿಐಎಲ್ ಕಳವಳ ವ್ಯಕ್ತಪಡಿಸಿತ್ತು. ಆ ವಿಷಯವನ್ನು ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ದೇಶಾದ್ಯಂತ ರಸ್ತೆ ತಡೆ, ದೆಹಲಿ ಚಲೋಗೆ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...