Homeಚಳವಳಿರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ...

ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

- Advertisement -
- Advertisement -

ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆ (PMFBY) ಅಡಿಯಲ್ಲಿ ವಿಮಾ ಹಕ್ಕು ನಿರಾಕರಿಸಿದ್ದ ಸಾರ್ವಜನಿಕ ವಲಯದ ವಿಮಾ ಕಂಪನಿ ಮತ್ತು ಸರ್ಕಾರಿ ಸಹಕಾರಿ ಬ್ಯಾಂಕ್ ವಿರುದ್ಧ ಸುಮಾರು ಮೂರು ವರ್ಷಗಳ ಕಾನೂನು ಹೋರಾಟ ನಡೆಸಿ ಗೆಲುವು ಕಂಡಿದ್ದಾರೆ ರಾಜಸ್ಥಾನದ ರೈತರು.

ಹೌದು, ರಾಜಸ್ಥಾನದ ಜೋಧಪುರದ ರೈತರು ಕಳೆದ ಮೂರು ವರ್ಷಗಳಿಂದ ತಮಗೆ ದೊರೆಯಬೇಕಿದ್ದ ವಿಮಾ ಹಕ್ಕುಗಳಿಗಾಗಿ ಕಾನೂನು ಹೋರಾಟ ನಡೆಸಿದ್ದರು. ಅಂತಿಮವಾಗಿ 2016ರ ಬೆಳೆಗಳಿಗೆ ತಮ್ಮ ಪಾಲನ್ನು ಸ್ವೀಕರಿಸಿದ್ದಾರೆ.

ಜೋಧ್‌ಪುರದ ಸತ್ಲಾನಾ ಗ್ರಾಮ ಪಂಚಾಯತ್‌ನ ಸಾವಿರಾರು ರೈತರಿಗೆ ವಿಮೆ ಹಕ್ಕು ನಿರಾಕರಿಸಲಾಗಿತ್ತು. ಏಕೆಂದರೆ ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಅಗ್ರಿಕಲ್ಚರಲ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ (ಎಐಸಿ) ರೈತರು ಪ್ರೀಮಿಯಂಗಳನ್ನು ಪಾವತಿಸಿದ ಒಂದು ವರ್ಷದ ನಂತರ, ರೈತರು ಸಾಫ್ಟ್‌ ಕಾಪಿಗಳಲ್ಲಿ ವಿಮಾ ವಿವರಗಳನ್ನು ಸಲ್ಲಿಸಿಲ್ಲ ಎಂಬ ಕಾರಣ ನೀಡಿ ಜೋಧಪುರ ಕೇಂದ್ರ ಸಹಕಾರ ಸಮಿತಿ ಬ್ಯಾಂಕ್‌ಗೆ ಪ್ರೀಮಿಯಂಗಳನ್ನು ಮರುಪಾವತಿಸಿದೆ. ಇತ್ತ ರೈತರ ಖಾತೆಗಳಲ್ಲಿ ಮರುಪಾವತಿಯನ್ನು ಜಮಾ ಮಾಡಲು ಬ್ಯಾಂಕ್ ಕೂಡ ಯಾವುದೇ ಪ್ರಯತ್ನ ಮಾಡಲಿಲ್ಲ.

ಈ ರೈತರು ತಮ್ಮ ಪಂಚಾಯಿತಿ ಅಧ್ಯಕ್ಷ ಭಾಲಾ ರಾಮ್ ಪಟೇಲ್ ಅವರ ಬೆಂಬಲದೊಂದಿಗೆ 2018 ರಲ್ಲಿ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ನ್ಯಾಯಪೀಠದ ಮುಂದೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳು: ಪಂಜಾಬ್‌ ’ರಾಷ್ಟ್ರ ವಿರೋಧಿ’ ಎಂದವರ ವಿರುದ್ಧ ಅಮರಿಂದರ್ ಸಿಂಗ್‌ ವಾಗ್ದಾಳಿ

ಸೆಪ್ಟೆಂಬರ್ 16, 2020 ರ ಆದೇಶದಲ್ಲಿ, ನ್ಯಾಯಮೂರ್ತಿ ಸಂಗೀತ ಲೋಧಾ ಮತ್ತು ನ್ಯಾಯಮೂರ್ತಿ ರಾಮೇಶ್ವರ ವ್ಯಾಸ್ ಅವರು 2016 ರ ಬೆಳೆಗೆ ರೈತರಿಗೆ 2020 ರ ಆಗಸ್ಟ್ 20ರಂದು ಪಾವತಿ ಮಾಡಲಾಗಿದೆ ಎಂದು ದೃಢಪಡಿಸಿದರು.

ದಿ ವೈರ್‌ನೊಂದಿಗೆ ಮಾತನಾಡಿರುವ ಸರ್ಪಂಚ್, “ಇದು ಸತ್ಲಾನಾದ ಎಲ್ಲ ರೈತರಿಗೆ ದೊಡ್ಡ ಗೆಲುವು. ಪಿಎಂಎಫ್‌ಬಿವೈ ಅಡಿಯಲ್ಲಿ ವಿಮಾ ಹಕ್ಕುಗಳನ್ನು ಪಡೆಯುವುದು ಭಾರತದಾದ್ಯಂತದ ರೈತರಿಗೆ ಸವಾಲಾಗಿ ಪರಿಣಮಿಸಿದೆ. ವಿಮಾ ಕಂಪನಿಗಳು ಮತ್ತು ಬ್ಯಾಂಕುಗಳು ಯಾವಾಗಲೂ ತಪ್ಪಿಸಿಕೊಳ್ಳುವ ಮಾರ್ಗಗಳನ್ನು ಕಂಡುಕೊಳ್ಳುತ್ತವೆ. ಕಲ್ಪಿಸಿಕೊಳ್ಳಿ, ನಾವು ನಮ್ಮ ಹಕ್ಕುಗಳಿಗಾಗಿ ಎದ್ದು ನಿಲ್ಲದಿದ್ದಿದ್ದರೆ, ಕಂಪನಿಯು 81 ಲಕ್ಷ ರೂಪಾಯಿಗಳನ್ನು ಪಾವತಿಸಲು ಕಾಳಜಿ ವಹಿಸುತ್ತಿರಲಿಲ್ಲ” ಎಂದಿದ್ದಾರೆ.

ಸತ್ಲಾನಾ, ಕಾರ್ನಿಯಾಲಿ ಮತ್ತು ಭಚಾರ್ಣ ಸೇರಿದಂತೆ ಈ ಮೂರು ಪತ್ವಾರ್‌ ಮಂಡಳಿಗಳಲ್ಲಿ ಖಾರಿಫ್ 2016ಕ್ಕೆ 70% ರಷ್ಟು ಇಳುವರಿ ನಷ್ಟವನ್ನು ರಾಜ್ಯ ಕಂದಾಯ ಇಲಾಖೆಯು ನಿರ್ಣಯಿಸಿತ್ತು. ಆದರೆ ರೈತರಿಗೆ ವಿಮಾ ಹಕ್ಕುಗಳನ್ನು ನಿರಾಕರಿಸಲಾಗಿತ್ತು.

ಇನ್ನೂ ಸಟ್ಲಾನಾದಲ್ಲಿ 2017ರ ಖಾರಿಫ್ ಬೆಳೆಗಳಿಗೂ ಎಐಸಿ ವಿಮಾ ಹಕ್ಕುಗಳನ್ನು ನಿರಾಕರಿಸಿದ ಬಗ್ಗೆ ಪಿಐಎಲ್ ಕಳವಳ ವ್ಯಕ್ತಪಡಿಸಿತ್ತು. ಆ ವಿಷಯವನ್ನು ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳಿಗೆ ವಿರೋಧ: ದೇಶಾದ್ಯಂತ ರಸ್ತೆ ತಡೆ, ದೆಹಲಿ ಚಲೋಗೆ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...