Homeಮುಖಪುಟರಾಜಸ್ಥಾನ: ವಾಯುಪಡೆಯ ಫೈಟರ್ ಜೆಟ್ ಪತನ; ಇಬ್ಬರು ಯೋಧರು ಮೃತ

ರಾಜಸ್ಥಾನ: ವಾಯುಪಡೆಯ ಫೈಟರ್ ಜೆಟ್ ಪತನ; ಇಬ್ಬರು ಯೋಧರು ಮೃತ

- Advertisement -
- Advertisement -

ರಾಜಸ್ಥಾನದ ಬಾರ್ಮರ್ ನಗರದಲ್ಲಿ ಗುರುವಾರದಂದು ತರಬೇತಿ ವಿಮಾನ ‘ಮಿಗ್-21’ ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಬಾರ್ಮರ್ ಜಿಲ್ಲೆಯ ಭೀಮ್ಡಾ ಗ್ರಾಮದಲ್ಲಿ ಅರ್ಧ ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಮಾನದ ಅವಶೇಷಗಳು ಚದುರಿ ಬಿದ್ದಿವೆ.

ದುರದೃಷ್ಟಕರ ಘಟನೆಯಲ್ಲಿ ಅವಳಿ-ಆಸನದ Mig-21 ತರಬೇತುದಾರ ವಿಮಾನವು ರಾತ್ರಿ ತರಬೇತಿಗಾಗಿ ಟೇಕ್ ಆಫ್ ಆಗಿತ್ತು. ಇದು ಹಾರಾಟದ ನಡುವೆ ಬೆಂಕಿ ಕಾಣಿಸಿಕೊಂಡು ನೆಲಕ್ಕೆ ಅಪ್ಪಳಿಸಿದೆ. ಈ ವೇಳೆ ಪೈಲಟ್‌ಗಳು ಹೊರಹಾಕಲು ಆಗಲಿಲ್ಲ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ 9.10ಕ್ಕೆ ಅಪಘಾತ ಸಂಭವಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಫ್‌ನ ಅವಳಿ ಆಸನಗಳ ಮಿಗ್-21 ತರಬೇತುದಾರ ವಿಮಾನವು ಇಂದು ಸಂಜೆ ರಾಜಸ್ಥಾನದ ಉತರ್ಲೈ ವಾಯುನೆಲೆಯಿಂದ ತರಬೇತಿಗಾಗಿ ಆಕಾಶಕ್ಕೇರಿತ್ತು. ರಾತ್ರಿ 9:10 ರ ಸುಮಾರಿಗೆ ಬಾರ್ಮರ್ ಬಳಿ ವಿಮಾನ ಅಪಘಾತಕ್ಕೀಡಾಯಿತು. ಇಬ್ಬರೂ ಪೈಲಟ್‌ಗಳಿಗೆ ಮಾರಣಾಂತಿಕ ಗಾಯಗಳಾಗಿವೆ. ವಾಯುಪಡೆಯು ಯೋಧರ ಜೀವಹಾನಿಗೆ ತೀವ್ರವಾಗಿ ವಿಷಾದಿಸುತ್ತದೆ ಮತ್ತು ದುಃಖಿತ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ” ಎಂದು ವಾಯುಪಡೆ ಹೇಳಿದೆ.

ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ ಎಂದು ಪಡೆ ಹೇಳಿದೆ.

ಅಪಘಾತದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರೊಂದಿಗೆ ಮಾತನಾಡಿದ್ದಾರೆ. “ರಾಜಸ್ಥಾನದ ಬಾರ್ಮರ್ ಬಳಿ ಐಎಎಫ್‌ನ ಮಿಗ್ -21 ತರಬೇತುದಾರ ವಿಮಾನ ಅಪಘಾತದಿಂದಾಗಿ ಇಬ್ಬರು ಏರ್ ವಾರಿಯರ್‌ಗಳನ್ನು ಕಳೆದುಕೊಂಡಿದ್ದು ತೀವ್ರ ದುಃಖಕರವಾಗಿದೆ” ಎಂದು ರಾಜನಾಥ್‌ ಸಿಂಗ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಕಳ್ಳಭಟ್ಟಿ ಮದ್ಯ ಕುಡಿದು 36 ಸಾವು: ಅಕ್ರಮ ದಂಧೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

“ದೇಶಕ್ಕೆ ಅವರ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದುಃಖದ ಸಮಯದಲ್ಲಿ ನಾನು ಯೋಧರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

MiG-21 ಸೋವಿಯತ್ ರಷ್ಯಾಕಾಲದ ಏಕ ಎಂಜಿನ್ ಮಲ್ಟಿರೋಲ್ ಫೈಟರ್/ಗ್ರೌಂಡ್ ಅಟ್ಯಾಕ್ ಏರ್‌ಕ್ರಾಫ್ಟ್ ಆಗಿದೆ. ಈ ಹಿಂದೆ ಅದು ದೇಶದ ವಾಯುಪಡೆಯ ಬೆನ್ನೆಲುಬಾಗಿತ್ತು.

ವಿಮಾನವು ಕಳಪೆ ಸುರಕ್ಷತಾ ದಾಖಲೆಯನ್ನು ಹೊಂದಿದ್ದು, ಮುಂದಿನ ದಶಕದಿಂದ ಈ ವಿಮಾನಗಳನ್ನು ಸೇವೆಯಿಂದ ಹಿಂತೆಗೆದುಕೊಳ್ಳುವ ನಿರೀಕ್ಷೆಯಿದೆ. ಆ ವೇಳೆ ವಿಮಾನ ಹೆಚ್ಚು ಆಧುನಿಕ ಪ್ರಕಾರಗಳೊಂದಿಗೆ ಬದಲಾಯಿಸಲಾಗುತ್ತದೆ.

2021 ರಲ್ಲಿ ಐದು ಮಿಗ್ -21 ವಿಮಾನಗಳು ಭಾರತದಲ್ಲಿ ಪತನಗೊಂಡಿವೆ. ಇದರ ಪರಿಣಾಮವಾಗಿ ಮೂವರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ವಾಯುವಪಡೆ ಪೈಲಟ್ವಿಂ ಗ್ ಕಮಾಂಡರ್ ಹರ್ಷಿತ್ ಸಿನ್ಹಾ ಅವರು ಮಿಗ್ -21 ಯುದ್ಧ ವಿಮಾನ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತರಬೇತಿಯ ಸಮಯದಲ್ಲಿ ಪತನಗೊಂಡ ನಂತರ ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಕ್ರಿಯೆಗೆ ಪ್ರತಿಕ್ರಿಯೆ ಎಂದು ಹೊರಟರೆ ಕರಾವಳಿ ತಾಲಿಬಾನ್ ಆಗಲ್ವಾ?’

ಆಗಸ್ಟ್‌ನಲ್ಲಿ, ಮತ್ತೊಂದು MiG-21 ಫೈಟರ್ ಜೆಟ್, ತರಬೇತಿ ಪಥದಲ್ಲಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಹಳ್ಳಿಯೊಂದರ ಬಳಿ ಪತನಗೊಂಡಿತು. ಆದರೆ, ಪೈಲಟ್ ಸುರಕ್ಷಿತವಾಗಿ ಹೊರ ಹಾರುವಲ್ಲಿ ಯಶಸ್ವಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...