Homeಮುಖಪುಟರಾಜಸ್ಥಾನ: ವಾಯುಪಡೆಯ ಫೈಟರ್ ಜೆಟ್ ಪತನ; ಇಬ್ಬರು ಯೋಧರು ಮೃತ

ರಾಜಸ್ಥಾನ: ವಾಯುಪಡೆಯ ಫೈಟರ್ ಜೆಟ್ ಪತನ; ಇಬ್ಬರು ಯೋಧರು ಮೃತ

- Advertisement -
- Advertisement -

ರಾಜಸ್ಥಾನದ ಬಾರ್ಮರ್ ನಗರದಲ್ಲಿ ಗುರುವಾರದಂದು ತರಬೇತಿ ವಿಮಾನ ‘ಮಿಗ್-21’ ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಬಾರ್ಮರ್ ಜಿಲ್ಲೆಯ ಭೀಮ್ಡಾ ಗ್ರಾಮದಲ್ಲಿ ಅರ್ಧ ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಮಾನದ ಅವಶೇಷಗಳು ಚದುರಿ ಬಿದ್ದಿವೆ.

ದುರದೃಷ್ಟಕರ ಘಟನೆಯಲ್ಲಿ ಅವಳಿ-ಆಸನದ Mig-21 ತರಬೇತುದಾರ ವಿಮಾನವು ರಾತ್ರಿ ತರಬೇತಿಗಾಗಿ ಟೇಕ್ ಆಫ್ ಆಗಿತ್ತು. ಇದು ಹಾರಾಟದ ನಡುವೆ ಬೆಂಕಿ ಕಾಣಿಸಿಕೊಂಡು ನೆಲಕ್ಕೆ ಅಪ್ಪಳಿಸಿದೆ. ಈ ವೇಳೆ ಪೈಲಟ್‌ಗಳು ಹೊರಹಾಕಲು ಆಗಲಿಲ್ಲ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ 9.10ಕ್ಕೆ ಅಪಘಾತ ಸಂಭವಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಐಎಎಫ್‌ನ ಅವಳಿ ಆಸನಗಳ ಮಿಗ್-21 ತರಬೇತುದಾರ ವಿಮಾನವು ಇಂದು ಸಂಜೆ ರಾಜಸ್ಥಾನದ ಉತರ್ಲೈ ವಾಯುನೆಲೆಯಿಂದ ತರಬೇತಿಗಾಗಿ ಆಕಾಶಕ್ಕೇರಿತ್ತು. ರಾತ್ರಿ 9:10 ರ ಸುಮಾರಿಗೆ ಬಾರ್ಮರ್ ಬಳಿ ವಿಮಾನ ಅಪಘಾತಕ್ಕೀಡಾಯಿತು. ಇಬ್ಬರೂ ಪೈಲಟ್‌ಗಳಿಗೆ ಮಾರಣಾಂತಿಕ ಗಾಯಗಳಾಗಿವೆ. ವಾಯುಪಡೆಯು ಯೋಧರ ಜೀವಹಾನಿಗೆ ತೀವ್ರವಾಗಿ ವಿಷಾದಿಸುತ್ತದೆ ಮತ್ತು ದುಃಖಿತ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ” ಎಂದು ವಾಯುಪಡೆ ಹೇಳಿದೆ.

ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ ಎಂದು ಪಡೆ ಹೇಳಿದೆ.

ಅಪಘಾತದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರೊಂದಿಗೆ ಮಾತನಾಡಿದ್ದಾರೆ. “ರಾಜಸ್ಥಾನದ ಬಾರ್ಮರ್ ಬಳಿ ಐಎಎಫ್‌ನ ಮಿಗ್ -21 ತರಬೇತುದಾರ ವಿಮಾನ ಅಪಘಾತದಿಂದಾಗಿ ಇಬ್ಬರು ಏರ್ ವಾರಿಯರ್‌ಗಳನ್ನು ಕಳೆದುಕೊಂಡಿದ್ದು ತೀವ್ರ ದುಃಖಕರವಾಗಿದೆ” ಎಂದು ರಾಜನಾಥ್‌ ಸಿಂಗ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌ನಲ್ಲಿ ಕಳ್ಳಭಟ್ಟಿ ಮದ್ಯ ಕುಡಿದು 36 ಸಾವು: ಅಕ್ರಮ ದಂಧೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

“ದೇಶಕ್ಕೆ ಅವರ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದುಃಖದ ಸಮಯದಲ್ಲಿ ನಾನು ಯೋಧರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

MiG-21 ಸೋವಿಯತ್ ರಷ್ಯಾಕಾಲದ ಏಕ ಎಂಜಿನ್ ಮಲ್ಟಿರೋಲ್ ಫೈಟರ್/ಗ್ರೌಂಡ್ ಅಟ್ಯಾಕ್ ಏರ್‌ಕ್ರಾಫ್ಟ್ ಆಗಿದೆ. ಈ ಹಿಂದೆ ಅದು ದೇಶದ ವಾಯುಪಡೆಯ ಬೆನ್ನೆಲುಬಾಗಿತ್ತು.

ವಿಮಾನವು ಕಳಪೆ ಸುರಕ್ಷತಾ ದಾಖಲೆಯನ್ನು ಹೊಂದಿದ್ದು, ಮುಂದಿನ ದಶಕದಿಂದ ಈ ವಿಮಾನಗಳನ್ನು ಸೇವೆಯಿಂದ ಹಿಂತೆಗೆದುಕೊಳ್ಳುವ ನಿರೀಕ್ಷೆಯಿದೆ. ಆ ವೇಳೆ ವಿಮಾನ ಹೆಚ್ಚು ಆಧುನಿಕ ಪ್ರಕಾರಗಳೊಂದಿಗೆ ಬದಲಾಯಿಸಲಾಗುತ್ತದೆ.

2021 ರಲ್ಲಿ ಐದು ಮಿಗ್ -21 ವಿಮಾನಗಳು ಭಾರತದಲ್ಲಿ ಪತನಗೊಂಡಿವೆ. ಇದರ ಪರಿಣಾಮವಾಗಿ ಮೂವರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ವಾಯುವಪಡೆ ಪೈಲಟ್ವಿಂ ಗ್ ಕಮಾಂಡರ್ ಹರ್ಷಿತ್ ಸಿನ್ಹಾ ಅವರು ಮಿಗ್ -21 ಯುದ್ಧ ವಿಮಾನ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ತರಬೇತಿಯ ಸಮಯದಲ್ಲಿ ಪತನಗೊಂಡ ನಂತರ ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಕ್ರಿಯೆಗೆ ಪ್ರತಿಕ್ರಿಯೆ ಎಂದು ಹೊರಟರೆ ಕರಾವಳಿ ತಾಲಿಬಾನ್ ಆಗಲ್ವಾ?’

ಆಗಸ್ಟ್‌ನಲ್ಲಿ, ಮತ್ತೊಂದು MiG-21 ಫೈಟರ್ ಜೆಟ್, ತರಬೇತಿ ಪಥದಲ್ಲಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಹಳ್ಳಿಯೊಂದರ ಬಳಿ ಪತನಗೊಂಡಿತು. ಆದರೆ, ಪೈಲಟ್ ಸುರಕ್ಷಿತವಾಗಿ ಹೊರ ಹಾರುವಲ್ಲಿ ಯಶಸ್ವಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...