Homeಮುಖಪುಟರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ಬಿಜೆಪಿ ನಾಯಕಿ 17 ವರ್ಷದ ಬಾಲಕಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಿದ್ದರು

- Advertisement -
- Advertisement -

ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು, ವೇಶ್ಯಾವಾಟಿಕೆ ಆರೋಪದಲ್ಲಿ ರಾಜಸ್ಥಾನದ ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೇರಿದಂತೆ ಐದು ಜನರನ್ನು ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಸರ್ಕಾರಿ ನೌಕರರಾಗಿದ್ದಾರೆ.

ಬಿಜೆಪಿ ನಾಯಕಿ ಸುನೀತಾ ವರ್ಮಾ ಅಕ್ಟೋಬರ್ 2019 ಮತ್ತು ಮೇ 2020 ರ ನಡುವೆ ಹಲವಾರು ವ್ಯಕ್ತಿಗಳೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದಾರೆ ಮತ್ತು ತನ್ನ ತಂದೆಯ ಹಣವನ್ನು ಸಹ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿ ದೂರು ನೀಡಿದ್ದರು. ಬಾಲಕಿಯ ಮೇಲೆ ಮೊದಲ ಬಾರಿಗೆ ಹೋಟೆಲ್‌ ಒಂದರಲ್ಲಿ ಅತ್ಯಾಚಾರ ಎಸಗಲಾಗಿತ್ತು, ಅದನ್ನು ವಿಡಿಯೋ ಮಾಡಿದ್ದ ಆರೋಪಿ ನಂತರ ಆ ವಿಡಿಯೋ ತುಣುಕುಗಳನ್ನು ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಬಿಜೆಪಿಯ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆಯಾಗಿರುವ ಸುನೀತಾ ವರ್ಮಾ ಬಂಧನವಾಗುತ್ತಿದ್ದಂತೆ ಪಕ್ಷದಿಂದ ವಜಾ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೋ ಕಾಯ್ದೆಯಡಿ ಬಿಜೆಪಿ ನಾಯಕಿ ಮತ್ತು ಆಕೆಯ ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಾಲೆಯಿಂದ ಹಿಂತಿರುಗುತ್ತಿದ್ದ ಬಾಲಕಿಯೊಂದಿಗೆ ಸುನಿತಾ ವರ್ಮಾರ ಸಹಚರರು ಸ್ನೇಹ ಬೆಳೆಸಿದ್ದರು, ನಂತರ ಸುನಿತಾ ವರ್ಮಾ ಬಾಲಕಿಯನ್ನು ಹಲವಾರು ವ್ಯಕ್ತಿಗಳನ್ನು ಭೇಟಿಯಾಗಲು ಕಳುಹಿಸುತ್ತಿದ್ದರು. 17 ವರ್ಷದ ಬಾಲಕಿಯನ್ನು ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಲಾಗಿತ್ತು ಎಂದು ಸವಾಯಿ ಮಾಧೋಪುರ್‌ ಮಹಿಳಾ ಸೆಲ್‌‌‌ನ ಅಧಿಕಾರಿ ಓಂ ಪ್ರಕಾಶ್ ಸೋಲಂಕಿ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಬಂಧಿತರಾದವರಲ್ಲಿ ಸವಾಯಿ ಮಾಧೋಪುರ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಗುಮಾಸ್ತರಾಗಿರುವ ಸಂದೀಪ್ ಶರ್ಮಾ, ಜಿಲ್ಲಾ ಕಲೆಕ್ಟರೇಟ್‌ನಲ್ಲಿ ಪಿಯೋನ್‌ ಆಗಿರುವ ಶ್ಯೋರಜ್‌ ಮೀನಾ ಮತ್ತು ಎಲೆಕ್ಟ್ರಿಷಿಯನ್‌ ರಾಜು ಲಾಲ್‌ ರಾಯಗರ ಸೇರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದ

ಸುನಿತಾ ವರ್ಮಾ ಬೇರೆ ಹುಡುಗಿಯರನ್ನು ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಧನಗಳು ನಡೆಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನೋಡಿ: ಈ ಮೂರು ಪತ್ರಿಕೆಗಳನ್ನು ಮುಗಿಸಲು ಹೊರಟಿದೆಯೇ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....