Homeಮುಖಪುಟರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ಬಿಜೆಪಿ ನಾಯಕಿ 17 ವರ್ಷದ ಬಾಲಕಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಿದ್ದರು

- Advertisement -
- Advertisement -

ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು, ವೇಶ್ಯಾವಾಟಿಕೆ ಆರೋಪದಲ್ಲಿ ರಾಜಸ್ಥಾನದ ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೇರಿದಂತೆ ಐದು ಜನರನ್ನು ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಸರ್ಕಾರಿ ನೌಕರರಾಗಿದ್ದಾರೆ.

ಬಿಜೆಪಿ ನಾಯಕಿ ಸುನೀತಾ ವರ್ಮಾ ಅಕ್ಟೋಬರ್ 2019 ಮತ್ತು ಮೇ 2020 ರ ನಡುವೆ ಹಲವಾರು ವ್ಯಕ್ತಿಗಳೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದಾರೆ ಮತ್ತು ತನ್ನ ತಂದೆಯ ಹಣವನ್ನು ಸಹ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿ ದೂರು ನೀಡಿದ್ದರು. ಬಾಲಕಿಯ ಮೇಲೆ ಮೊದಲ ಬಾರಿಗೆ ಹೋಟೆಲ್‌ ಒಂದರಲ್ಲಿ ಅತ್ಯಾಚಾರ ಎಸಗಲಾಗಿತ್ತು, ಅದನ್ನು ವಿಡಿಯೋ ಮಾಡಿದ್ದ ಆರೋಪಿ ನಂತರ ಆ ವಿಡಿಯೋ ತುಣುಕುಗಳನ್ನು ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಬಿಜೆಪಿಯ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆಯಾಗಿರುವ ಸುನೀತಾ ವರ್ಮಾ ಬಂಧನವಾಗುತ್ತಿದ್ದಂತೆ ಪಕ್ಷದಿಂದ ವಜಾ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೋ ಕಾಯ್ದೆಯಡಿ ಬಿಜೆಪಿ ನಾಯಕಿ ಮತ್ತು ಆಕೆಯ ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಾಲೆಯಿಂದ ಹಿಂತಿರುಗುತ್ತಿದ್ದ ಬಾಲಕಿಯೊಂದಿಗೆ ಸುನಿತಾ ವರ್ಮಾರ ಸಹಚರರು ಸ್ನೇಹ ಬೆಳೆಸಿದ್ದರು, ನಂತರ ಸುನಿತಾ ವರ್ಮಾ ಬಾಲಕಿಯನ್ನು ಹಲವಾರು ವ್ಯಕ್ತಿಗಳನ್ನು ಭೇಟಿಯಾಗಲು ಕಳುಹಿಸುತ್ತಿದ್ದರು. 17 ವರ್ಷದ ಬಾಲಕಿಯನ್ನು ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಲಾಗಿತ್ತು ಎಂದು ಸವಾಯಿ ಮಾಧೋಪುರ್‌ ಮಹಿಳಾ ಸೆಲ್‌‌‌ನ ಅಧಿಕಾರಿ ಓಂ ಪ್ರಕಾಶ್ ಸೋಲಂಕಿ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಬಂಧಿತರಾದವರಲ್ಲಿ ಸವಾಯಿ ಮಾಧೋಪುರ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಗುಮಾಸ್ತರಾಗಿರುವ ಸಂದೀಪ್ ಶರ್ಮಾ, ಜಿಲ್ಲಾ ಕಲೆಕ್ಟರೇಟ್‌ನಲ್ಲಿ ಪಿಯೋನ್‌ ಆಗಿರುವ ಶ್ಯೋರಜ್‌ ಮೀನಾ ಮತ್ತು ಎಲೆಕ್ಟ್ರಿಷಿಯನ್‌ ರಾಜು ಲಾಲ್‌ ರಾಯಗರ ಸೇರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದ

ಸುನಿತಾ ವರ್ಮಾ ಬೇರೆ ಹುಡುಗಿಯರನ್ನು ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಧನಗಳು ನಡೆಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನೋಡಿ: ಈ ಮೂರು ಪತ್ರಿಕೆಗಳನ್ನು ಮುಗಿಸಲು ಹೊರಟಿದೆಯೇ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....