Homeಮುಖಪುಟರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ಬಿಜೆಪಿ ನಾಯಕಿ 17 ವರ್ಷದ ಬಾಲಕಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಿದ್ದರು

- Advertisement -
- Advertisement -

ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ಲೈಂಗಿಕ ದೌರ್ಜನ್ಯದ ದೂರಿನ ಮೇರೆಗೆ ಕಾರ್ಯಪ್ರವೃತ್ತರಾಗಿದ್ದ ಪೊಲೀಸರು, ವೇಶ್ಯಾವಾಟಿಕೆ ಆರೋಪದಲ್ಲಿ ರಾಜಸ್ಥಾನದ ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೇರಿದಂತೆ ಐದು ಜನರನ್ನು ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಇಬ್ಬರು ಸರ್ಕಾರಿ ನೌಕರರಾಗಿದ್ದಾರೆ.

ಬಿಜೆಪಿ ನಾಯಕಿ ಸುನೀತಾ ವರ್ಮಾ ಅಕ್ಟೋಬರ್ 2019 ಮತ್ತು ಮೇ 2020 ರ ನಡುವೆ ಹಲವಾರು ವ್ಯಕ್ತಿಗಳೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯಿಸಿದ್ದಾರೆ ಮತ್ತು ತನ್ನ ತಂದೆಯ ಹಣವನ್ನು ಸಹ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿ ದೂರು ನೀಡಿದ್ದರು. ಬಾಲಕಿಯ ಮೇಲೆ ಮೊದಲ ಬಾರಿಗೆ ಹೋಟೆಲ್‌ ಒಂದರಲ್ಲಿ ಅತ್ಯಾಚಾರ ಎಸಗಲಾಗಿತ್ತು, ಅದನ್ನು ವಿಡಿಯೋ ಮಾಡಿದ್ದ ಆರೋಪಿ ನಂತರ ಆ ವಿಡಿಯೋ ತುಣುಕುಗಳನ್ನು ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಹಿಳಾ ನಾಯಕಿ ಬಟ್ಟೆಗೆ ಕೈಹಾಕಲು ಆತನಿಗೆಷ್ಟು ಧೈರ್ಯ..?- ಬಿಜೆಪಿಯ ಚಿತ್ರಾ ವಾಘ್ ಆಕ್ರೋಶ

ಬಿಜೆಪಿಯ ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆಯಾಗಿರುವ ಸುನೀತಾ ವರ್ಮಾ ಬಂಧನವಾಗುತ್ತಿದ್ದಂತೆ ಪಕ್ಷದಿಂದ ವಜಾ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೋ ಕಾಯ್ದೆಯಡಿ ಬಿಜೆಪಿ ನಾಯಕಿ ಮತ್ತು ಆಕೆಯ ಸಹಚರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಾಲೆಯಿಂದ ಹಿಂತಿರುಗುತ್ತಿದ್ದ ಬಾಲಕಿಯೊಂದಿಗೆ ಸುನಿತಾ ವರ್ಮಾರ ಸಹಚರರು ಸ್ನೇಹ ಬೆಳೆಸಿದ್ದರು, ನಂತರ ಸುನಿತಾ ವರ್ಮಾ ಬಾಲಕಿಯನ್ನು ಹಲವಾರು ವ್ಯಕ್ತಿಗಳನ್ನು ಭೇಟಿಯಾಗಲು ಕಳುಹಿಸುತ್ತಿದ್ದರು. 17 ವರ್ಷದ ಬಾಲಕಿಯನ್ನು ಎಂಟಕ್ಕೂ ಹೆಚ್ಚು ಬಾರಿ ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರಕ್ಕೆ ಒಳಪಡಿಸಲಾಗಿತ್ತು ಎಂದು ಸವಾಯಿ ಮಾಧೋಪುರ್‌ ಮಹಿಳಾ ಸೆಲ್‌‌‌ನ ಅಧಿಕಾರಿ ಓಂ ಪ್ರಕಾಶ್ ಸೋಲಂಕಿ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಬಂಧಿತರಾದವರಲ್ಲಿ ಸವಾಯಿ ಮಾಧೋಪುರ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಗುಮಾಸ್ತರಾಗಿರುವ ಸಂದೀಪ್ ಶರ್ಮಾ, ಜಿಲ್ಲಾ ಕಲೆಕ್ಟರೇಟ್‌ನಲ್ಲಿ ಪಿಯೋನ್‌ ಆಗಿರುವ ಶ್ಯೋರಜ್‌ ಮೀನಾ ಮತ್ತು ಎಲೆಕ್ಟ್ರಿಷಿಯನ್‌ ರಾಜು ಲಾಲ್‌ ರಾಯಗರ ಸೇರಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದ

ಸುನಿತಾ ವರ್ಮಾ ಬೇರೆ ಹುಡುಗಿಯರನ್ನು ಇದೇ ರೀತಿ ಬ್ಲ್ಯಾಕ್ ಮೇಲ್ ಮಾಡಿ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಬಂಧನಗಳು ನಡೆಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೋ ನೋಡಿ: ಈ ಮೂರು ಪತ್ರಿಕೆಗಳನ್ನು ಮುಗಿಸಲು ಹೊರಟಿದೆಯೇ ಮೋದಿ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...