Homeಮುಖಪುಟರಾಜಸ್ಥಾನ | ವಿಧಾನಸಭೆಯಲ್ಲೆ ಕಾಂಗ್ರೆಸ್‌ನ ಮುಸ್ಲಿಂ ಶಾಸಕನನ್ನು 'ಪಾಕಿಸ್ತಾನಿ' ಎಂದು ಕರೆದ ಬಿಜೆಪಿ ಶಾಸಕ!

ರಾಜಸ್ಥಾನ | ವಿಧಾನಸಭೆಯಲ್ಲೆ ಕಾಂಗ್ರೆಸ್‌ನ ಮುಸ್ಲಿಂ ಶಾಸಕನನ್ನು ‘ಪಾಕಿಸ್ತಾನಿ’ ಎಂದು ಕರೆದ ಬಿಜೆಪಿ ಶಾಸಕ!

- Advertisement -
- Advertisement -

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಗೋಪಾಲ್ ಶರ್ಮಾ ಅವರು ಕಾಂಗ್ರೆಸ್ ಮುಖ್ಯ ಸಚೇತಕ ರಫೀಕ್ ಖಾನ್ ಅವರನ್ನು ಪದೇ ಪದೇ “ಪಾಕಿಸ್ತಾನಿ” ಎಂದು ಉಲ್ಲೇಖಿಸಿರುವ ಘಟನೆ ಶುಕ್ರವಾರ ನಡೆದಿದೆ. ಇದರ ನಂತರ ಸದನದಲ್ಲಿ ಕೋಲಾಹಲ ಉಂಟಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಧಾನಸಭೆಯಲ್ಲೆ

ನಗರಾಭಿವೃದ್ಧಿ, ವಸತಿ ಮತ್ತು ಸ್ಥಳೀಯ ಸ್ಥಂಸ್ಥೆ ಇಲಾಖೆಗಳಿಗೆ ನೀಡುವ ಅನುದಾನದ ಕುರಿತಾದ ಚರ್ಚೆಯ ಸಂದರ್ಭದಲ್ಲಿ ಗೋಪಾಲ್ ಅವರು ಈ ಪದವನ್ನು ಬಳಸಿದ್ದಾರೆ. ವಿಧಾನಸಭೆಯಲ್ಲೆ

ನಗರಾಭಿವೃದ್ಧಿಯಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಕಾರ್ಯಕ್ಷಮತೆಯನ್ನು ಪ್ರಸ್ತುತ ಬಿಜೆಪಿ ಸರ್ಕಾರದ ಕಾರ್ಯಕ್ಷಮತೆಗೆ ಹೋಲಿಸಿದ ರಫೀಕ್ ಖಾನ್ ಅವರು, ಪರೋಕ್ಷವಾಗಿ ಗೋಪಾಲ್ ಶರ್ಮಾ ಅವರನ್ನು ಉಲ್ಲೇಖಿಸಿ, ಸ್ಪೀಕರ್‌ ಸಂದೀಪ್ ಶರ್ಮಾ ಅವರಿಗೆ “ಸ್ವಲ್ಪ ಜ್ಞಾನ ನೀಡಿ” ಎಂದು ಕೇಳಿದರು.

ಈ ವೇಳೆ ಬಿಜೆಪಿ ಶಾಸಕ ಗೋಪಾಲ್ ಶರ್ಮಾ ಅವರು ರಫೀಕ್ ಖಾನ್ ಅವರನ್ನು “ಪಾಕಿಸ್ತಾನಿ” ಎಂದು ಕರೆದಿದ್ದು, ಇದನ್ನು ವಿರೋಧಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದವು.

ಗೋಪಾಲ್ ಅವರ ವರ್ತನೆಗೆ ರಫೀಕ್ ಖಾನ್ ಆಕ್ಷೇಪ ವ್ಯಕ್ತಪಡಿಸಿದ್ದು, ಘರ್ಷಣೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಘರ್ಷಣೆಯ ನಡುವೆ, ಬಿಜೆಪಿ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಲ್ಲೇಖಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್, ರಾಜ್ಯ ವಿಧಾನಸಭೆಯಲ್ಲಿ ಸದಸ್ಯರಲ್ಲದವರನ್ನು ಹೆಸರಿಸಲು ಸಾಧ್ಯವಿಲ್ಲ ಎಂದು ನೆನಪಿಸಿದ ನಂತರ ಅವರ ಹೇಳಿಕೆಗಳನ್ನು ಹಿಂಪಡೆದುಕೊಂಡಿದ್ದಾರೆ.

ವಿರೋಧ ಪಕ್ಷದ ನಾಯಕ ಟಿಕಾ ರಾಮ್ ಜಲ್ಲಿ ಸೇರಿದಂತೆ ಇತರ ಕಾಂಗ್ರೆಸ್ ಶಾಸಕರು ಕೂಡಾ ಗೋಪಾಲ್ ಶರ್ಮಾ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಈ ವೇಳೆ ಸ್ಪೀಕರ್ ಮಧ್ಯಪ್ರವೇಶಿಸಿ ಸದನದಲ್ಲಿ ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕೇಳಿಕೊಂಡಿದ್ದಾರೆ.

ಇದರ ನಂತರ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿದ ಜುಲ್ಲಿ, ಗೋಪಾಲ್ ಶರ್ಮಾ ಅವರ ಹೇಳಿಕೆಗಳನ್ನು “ಅಸಹನೀಯ ಮತ್ತು ಖಂಡನೀಯ” ಎಂದು ಕರೆದಿದ್ದಾರೆ.

“ಬಿಜೆಪಿ ನಾಯಕರು ದಿನದಿಂದ ದಿನಕ್ಕೆ ತಮ್ಮ ಹೇಳಿಕೆಗಳ ಮಟ್ಟವನ್ನು ಕಡಿಮೆ ಮಾಡಲು ಸ್ಪರ್ಧೆಗೆ ಇಳಿದಿದ್ದಾರೆ. ಅವರು ವಿಧಾನಸಭೆಯಲ್ಲಿ ನೀಡುವ ಭಾಷಣಗಳು ಮತ್ತು ಬೀದಿಯಲ್ಲಿ ನೀಡುವ ಭಾಷಣಗಳ ನಡುವೆ ಯಾವುದೇ ವ್ಯತ್ಯಾಸವನ್ನು ಕಾಣುತ್ತಿಲ್ಲ.” ಎಂದು ಜುಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಮಾರ್ಚ್ 6 ರಂದು, ಜೈಪುರ ಮುನ್ಸಿಪಲ್ ಕಾರ್ಪೊರೇಷನ್‌ನ ಮಂಡಳಿ ಸಭೆಯಲ್ಲಿ ಗೋಪಾಲ್ ಶರ್ಮಾ ಅವರು ರಫೀಕ್ ಖಾನ್ ಅವರೊಂದಿಗೆ ಘರ್ಷಣೆ ನಡೆಸಿದ್ದರು. ಈ ಘರ್ಷಣೆಯ ಸಂದರ್ಭದಲ್ಲಿ ಜೈಪುರವನ್ನು “ಮಿನಿ-ಪಾಕಿಸ್ತಾನ” ಆಗಲು ಬಿಡುವುದಿಲ್ಲ ಎಂದು ಅವರು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ಎನ್ಇಪಿ, ಕ್ಷೇತ್ರ ಪುನರ್ವಿಂಗಡನೆ, ವಕ್ಫ್‌ ಕುರಿತು ಚರ್ಚಿಸಲು ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...