Homeಮುಖಪುಟ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

- Advertisement -
- Advertisement -

ರಾಜ್ಯದಲ್ಲಿ ಬಾಲ್ಯವಿವಾಹಗಳ ನೋಂದಣಿಗೆ ಅವಕಾಶ ನೀಡಲಾಗುವ ಮಸೂದೆಯನ್ನು ಶುಕ್ರವಾರದಂದು ರಾಜಸ್ಥಾನ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಬಗ್ಗೆ ಸದನದಲ್ಲಿ ಬಿರುಸಿನ ಚರ್ಚೆ ನಡೆದರೂ, ಅಂತಿಮವಾಗಿ, ‘ರಾಜಸ್ಥಾನ ವಿವಾಹಗಳ ಕಡ್ಡಾಯ ನೋಂದಣಿ ತಿದ್ದುಪಡಿ ಮಸೂದೆ’ಯನ್ನು ಅಂಗೀಕರಿಸಲಾಯಿತು.

ಈ ಹೊಸ ಮಸೂದೆಯ ಪ್ರಕಾರ, ಬಾಲ್ಯ ವಿವಾಹದ ಮಾಹಿತಿಯನ್ನು ಮದುವೆಯಾದ 30 ದಿನಗಳ ಒಳಗೆ ನೀಡಬೇಕು. ಚರ್ಚೆಯಲ್ಲಿ, ಸಂಸತ್ತಿನ ವ್ಯವಹಾರಗಳ ಸಚಿವೆ ಶಾಂತಿ ಧಾರಿವಾಲ್ ಅವರು ಬಾಲ್ಯವಿವಾಹಗಳನ್ನು ನೋಂದಾಯಿಸುವುದರಿಂದ ಅವುಗಳನ್ನು ಮಾನ್ಯವೆಂದು ಪರಿಗಣಿಸಲಾಗುವುದು ಎಂದಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಹೊಸ ಕಾನೂನಿನ ಪ್ರಕಾರ, ವಿವಾಹ ನೋಂದಣಿ ಅಧಿಕಾರಿಯು ಬ್ಲಾಕ್ ಹಂತದವರೆಗೆ ನೋಂದಣಿಯನ್ನು ಮಾಡುತ್ತಾರೆ. ಮದುವೆಯ ಸಮಯದಲ್ಲಿ ಹುಡುಗಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿದ್ದರೆ ಮತ್ತು ಹುಡುಗನ ವಯಸ್ಸು 21 ಕ್ಕಿಂತ ಕಡಿಮೆಯಿದ್ದರೆ, ಅವರ ಪೋಷಕರು ನೋಂದಣಿ ಅಧಿಕಾರಿಗೆ 30 ದಿನಗಳಲ್ಲಿ ತಿಳಿಸಬೇಕೆಂದು ಮಸೂದೆಯು ತಿಳಿಸುತ್ತದೆ.

ಬಾಲ್ಯವಿವಾಹಗಳ ಸಂದರ್ಭದಲ್ಲಿ ಹುಡುಗ ಮತ್ತು ಹುಡುಗಿಯ ಪೋಷಕರು ನಿಗದಿತ ನಮೂನೆಯಲ್ಲಿ ಜ್ಞಾಪನಾ ಪತ್ರವನ್ನು ನೀಡಿ ನೋಂದಣಿ ಅಧಿಕಾರಿಗೆ ತಿಳಿಸಬೇಕಾಗುತ್ತದೆ. ಇದರ ಆಧಾರದ ಮೇಲೆ, ನೋಂದಣಿ ಅಧಿಕಾರಿ ಆ ಬಾಲ್ಯ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಾರೆ. ಈ ನಿಬಂಧನೆಯನ್ನು ವಿವಾಹಗಳ ಕಡ್ಡಾಯ ನೋಂದಣಿ ಕಾಯಿದೆಯ ಸೆಕ್ಷನ್ 8 ರಲ್ಲಿ ಮಾಡಲಾಗಿದೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಈ ಹಿಂದೆ ರಾಜ್ಯದಲ್ಲಿ, ಜಿಲ್ಲಾ ಮಟ್ಟದಲ್ಲಿ ವಿವಾಹ ನೋಂದಣಿ ಅಧಿಕಾರಿಗಳು ಇದ್ದರು ಆದರೆ ಈಗ ಬ್ಲಾಕ್ ಹಂತದವರೆಗೆ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.

ಬಾಲ್ಯ ವಿವಾಹ ಕಾನೂನುಬಾಹಿರವಾಗಿರುವಾಗ ನೋಂದಣಿಯ ಅಗತ್ಯತೆ ಮತ್ತು ವಿಧೇಯಕದ ಉದ್ದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಮಸೂದೆಯನ್ನು ತರಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಪ್ರತಿಪಕ್ಷಗಳು ಬಾಲ್ಯವಿವಾಹಗಳ ನೋಂದಣಿಯ ಅಗತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿ, ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಧಾರಿವಾಲ್, “ಬಾಲ್ಯ ವಿವಾಹವನ್ನು ನೋಂದಾಯಿಸುವುದು ಎಂದರೆ ಬಾಲ್ಯವಿವಾಹಕ್ಕೆ ಸಿಂಧುತ್ವವನ್ನು ನೀಡುವುದು ಎಂದಲ್ಲ ಮತ್ತು ಅವರಿಗೆ ನ್ಯಾಯಬದ್ಧತೆಯನ್ನು ನೀಡುವುದು ಎಂದಲ್ಲ” ಎಂದು ಪ್ರತಿಪಾದಿಸಿದ್ದಾರೆ. ನೋಂದಾಯಿಸಿದ ನಂತರವೂ ಬಾಲ್ಯ ವಿವಾಹಗಳನ್ನು ಆಯೋಜಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...