Homeಮುಖಪುಟ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

- Advertisement -
- Advertisement -

ರಾಜ್ಯದಲ್ಲಿ ಬಾಲ್ಯವಿವಾಹಗಳ ನೋಂದಣಿಗೆ ಅವಕಾಶ ನೀಡಲಾಗುವ ಮಸೂದೆಯನ್ನು ಶುಕ್ರವಾರದಂದು ರಾಜಸ್ಥಾನ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಬಗ್ಗೆ ಸದನದಲ್ಲಿ ಬಿರುಸಿನ ಚರ್ಚೆ ನಡೆದರೂ, ಅಂತಿಮವಾಗಿ, ‘ರಾಜಸ್ಥಾನ ವಿವಾಹಗಳ ಕಡ್ಡಾಯ ನೋಂದಣಿ ತಿದ್ದುಪಡಿ ಮಸೂದೆ’ಯನ್ನು ಅಂಗೀಕರಿಸಲಾಯಿತು.

ಈ ಹೊಸ ಮಸೂದೆಯ ಪ್ರಕಾರ, ಬಾಲ್ಯ ವಿವಾಹದ ಮಾಹಿತಿಯನ್ನು ಮದುವೆಯಾದ 30 ದಿನಗಳ ಒಳಗೆ ನೀಡಬೇಕು. ಚರ್ಚೆಯಲ್ಲಿ, ಸಂಸತ್ತಿನ ವ್ಯವಹಾರಗಳ ಸಚಿವೆ ಶಾಂತಿ ಧಾರಿವಾಲ್ ಅವರು ಬಾಲ್ಯವಿವಾಹಗಳನ್ನು ನೋಂದಾಯಿಸುವುದರಿಂದ ಅವುಗಳನ್ನು ಮಾನ್ಯವೆಂದು ಪರಿಗಣಿಸಲಾಗುವುದು ಎಂದಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಹೊಸ ಕಾನೂನಿನ ಪ್ರಕಾರ, ವಿವಾಹ ನೋಂದಣಿ ಅಧಿಕಾರಿಯು ಬ್ಲಾಕ್ ಹಂತದವರೆಗೆ ನೋಂದಣಿಯನ್ನು ಮಾಡುತ್ತಾರೆ. ಮದುವೆಯ ಸಮಯದಲ್ಲಿ ಹುಡುಗಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿದ್ದರೆ ಮತ್ತು ಹುಡುಗನ ವಯಸ್ಸು 21 ಕ್ಕಿಂತ ಕಡಿಮೆಯಿದ್ದರೆ, ಅವರ ಪೋಷಕರು ನೋಂದಣಿ ಅಧಿಕಾರಿಗೆ 30 ದಿನಗಳಲ್ಲಿ ತಿಳಿಸಬೇಕೆಂದು ಮಸೂದೆಯು ತಿಳಿಸುತ್ತದೆ.

ಬಾಲ್ಯವಿವಾಹಗಳ ಸಂದರ್ಭದಲ್ಲಿ ಹುಡುಗ ಮತ್ತು ಹುಡುಗಿಯ ಪೋಷಕರು ನಿಗದಿತ ನಮೂನೆಯಲ್ಲಿ ಜ್ಞಾಪನಾ ಪತ್ರವನ್ನು ನೀಡಿ ನೋಂದಣಿ ಅಧಿಕಾರಿಗೆ ತಿಳಿಸಬೇಕಾಗುತ್ತದೆ. ಇದರ ಆಧಾರದ ಮೇಲೆ, ನೋಂದಣಿ ಅಧಿಕಾರಿ ಆ ಬಾಲ್ಯ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಾರೆ. ಈ ನಿಬಂಧನೆಯನ್ನು ವಿವಾಹಗಳ ಕಡ್ಡಾಯ ನೋಂದಣಿ ಕಾಯಿದೆಯ ಸೆಕ್ಷನ್ 8 ರಲ್ಲಿ ಮಾಡಲಾಗಿದೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಈ ಹಿಂದೆ ರಾಜ್ಯದಲ್ಲಿ, ಜಿಲ್ಲಾ ಮಟ್ಟದಲ್ಲಿ ವಿವಾಹ ನೋಂದಣಿ ಅಧಿಕಾರಿಗಳು ಇದ್ದರು ಆದರೆ ಈಗ ಬ್ಲಾಕ್ ಹಂತದವರೆಗೆ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.

ಬಾಲ್ಯ ವಿವಾಹ ಕಾನೂನುಬಾಹಿರವಾಗಿರುವಾಗ ನೋಂದಣಿಯ ಅಗತ್ಯತೆ ಮತ್ತು ವಿಧೇಯಕದ ಉದ್ದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಮಸೂದೆಯನ್ನು ತರಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಪ್ರತಿಪಕ್ಷಗಳು ಬಾಲ್ಯವಿವಾಹಗಳ ನೋಂದಣಿಯ ಅಗತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿ, ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಧಾರಿವಾಲ್, “ಬಾಲ್ಯ ವಿವಾಹವನ್ನು ನೋಂದಾಯಿಸುವುದು ಎಂದರೆ ಬಾಲ್ಯವಿವಾಹಕ್ಕೆ ಸಿಂಧುತ್ವವನ್ನು ನೀಡುವುದು ಎಂದಲ್ಲ ಮತ್ತು ಅವರಿಗೆ ನ್ಯಾಯಬದ್ಧತೆಯನ್ನು ನೀಡುವುದು ಎಂದಲ್ಲ” ಎಂದು ಪ್ರತಿಪಾದಿಸಿದ್ದಾರೆ. ನೋಂದಾಯಿಸಿದ ನಂತರವೂ ಬಾಲ್ಯ ವಿವಾಹಗಳನ್ನು ಆಯೋಜಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...