Homeಮುಖಪುಟ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

- Advertisement -
- Advertisement -

ರಾಜ್ಯದಲ್ಲಿ ಬಾಲ್ಯವಿವಾಹಗಳ ನೋಂದಣಿಗೆ ಅವಕಾಶ ನೀಡಲಾಗುವ ಮಸೂದೆಯನ್ನು ಶುಕ್ರವಾರದಂದು ರಾಜಸ್ಥಾನ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಬಗ್ಗೆ ಸದನದಲ್ಲಿ ಬಿರುಸಿನ ಚರ್ಚೆ ನಡೆದರೂ, ಅಂತಿಮವಾಗಿ, ‘ರಾಜಸ್ಥಾನ ವಿವಾಹಗಳ ಕಡ್ಡಾಯ ನೋಂದಣಿ ತಿದ್ದುಪಡಿ ಮಸೂದೆ’ಯನ್ನು ಅಂಗೀಕರಿಸಲಾಯಿತು.

ಈ ಹೊಸ ಮಸೂದೆಯ ಪ್ರಕಾರ, ಬಾಲ್ಯ ವಿವಾಹದ ಮಾಹಿತಿಯನ್ನು ಮದುವೆಯಾದ 30 ದಿನಗಳ ಒಳಗೆ ನೀಡಬೇಕು. ಚರ್ಚೆಯಲ್ಲಿ, ಸಂಸತ್ತಿನ ವ್ಯವಹಾರಗಳ ಸಚಿವೆ ಶಾಂತಿ ಧಾರಿವಾಲ್ ಅವರು ಬಾಲ್ಯವಿವಾಹಗಳನ್ನು ನೋಂದಾಯಿಸುವುದರಿಂದ ಅವುಗಳನ್ನು ಮಾನ್ಯವೆಂದು ಪರಿಗಣಿಸಲಾಗುವುದು ಎಂದಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಹೊಸ ಕಾನೂನಿನ ಪ್ರಕಾರ, ವಿವಾಹ ನೋಂದಣಿ ಅಧಿಕಾರಿಯು ಬ್ಲಾಕ್ ಹಂತದವರೆಗೆ ನೋಂದಣಿಯನ್ನು ಮಾಡುತ್ತಾರೆ. ಮದುವೆಯ ಸಮಯದಲ್ಲಿ ಹುಡುಗಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿದ್ದರೆ ಮತ್ತು ಹುಡುಗನ ವಯಸ್ಸು 21 ಕ್ಕಿಂತ ಕಡಿಮೆಯಿದ್ದರೆ, ಅವರ ಪೋಷಕರು ನೋಂದಣಿ ಅಧಿಕಾರಿಗೆ 30 ದಿನಗಳಲ್ಲಿ ತಿಳಿಸಬೇಕೆಂದು ಮಸೂದೆಯು ತಿಳಿಸುತ್ತದೆ.

ಬಾಲ್ಯವಿವಾಹಗಳ ಸಂದರ್ಭದಲ್ಲಿ ಹುಡುಗ ಮತ್ತು ಹುಡುಗಿಯ ಪೋಷಕರು ನಿಗದಿತ ನಮೂನೆಯಲ್ಲಿ ಜ್ಞಾಪನಾ ಪತ್ರವನ್ನು ನೀಡಿ ನೋಂದಣಿ ಅಧಿಕಾರಿಗೆ ತಿಳಿಸಬೇಕಾಗುತ್ತದೆ. ಇದರ ಆಧಾರದ ಮೇಲೆ, ನೋಂದಣಿ ಅಧಿಕಾರಿ ಆ ಬಾಲ್ಯ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಾರೆ. ಈ ನಿಬಂಧನೆಯನ್ನು ವಿವಾಹಗಳ ಕಡ್ಡಾಯ ನೋಂದಣಿ ಕಾಯಿದೆಯ ಸೆಕ್ಷನ್ 8 ರಲ್ಲಿ ಮಾಡಲಾಗಿದೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಈ ಹಿಂದೆ ರಾಜ್ಯದಲ್ಲಿ, ಜಿಲ್ಲಾ ಮಟ್ಟದಲ್ಲಿ ವಿವಾಹ ನೋಂದಣಿ ಅಧಿಕಾರಿಗಳು ಇದ್ದರು ಆದರೆ ಈಗ ಬ್ಲಾಕ್ ಹಂತದವರೆಗೆ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.

ಬಾಲ್ಯ ವಿವಾಹ ಕಾನೂನುಬಾಹಿರವಾಗಿರುವಾಗ ನೋಂದಣಿಯ ಅಗತ್ಯತೆ ಮತ್ತು ವಿಧೇಯಕದ ಉದ್ದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಮಸೂದೆಯನ್ನು ತರಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಪ್ರತಿಪಕ್ಷಗಳು ಬಾಲ್ಯವಿವಾಹಗಳ ನೋಂದಣಿಯ ಅಗತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿ, ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಧಾರಿವಾಲ್, “ಬಾಲ್ಯ ವಿವಾಹವನ್ನು ನೋಂದಾಯಿಸುವುದು ಎಂದರೆ ಬಾಲ್ಯವಿವಾಹಕ್ಕೆ ಸಿಂಧುತ್ವವನ್ನು ನೀಡುವುದು ಎಂದಲ್ಲ ಮತ್ತು ಅವರಿಗೆ ನ್ಯಾಯಬದ್ಧತೆಯನ್ನು ನೀಡುವುದು ಎಂದಲ್ಲ” ಎಂದು ಪ್ರತಿಪಾದಿಸಿದ್ದಾರೆ. ನೋಂದಾಯಿಸಿದ ನಂತರವೂ ಬಾಲ್ಯ ವಿವಾಹಗಳನ್ನು ಆಯೋಜಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...