Homeಮುಖಪುಟ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

- Advertisement -
- Advertisement -

ರಾಜ್ಯದಲ್ಲಿ ಬಾಲ್ಯವಿವಾಹಗಳ ನೋಂದಣಿಗೆ ಅವಕಾಶ ನೀಡಲಾಗುವ ಮಸೂದೆಯನ್ನು ಶುಕ್ರವಾರದಂದು ರಾಜಸ್ಥಾನ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಬಗ್ಗೆ ಸದನದಲ್ಲಿ ಬಿರುಸಿನ ಚರ್ಚೆ ನಡೆದರೂ, ಅಂತಿಮವಾಗಿ, ‘ರಾಜಸ್ಥಾನ ವಿವಾಹಗಳ ಕಡ್ಡಾಯ ನೋಂದಣಿ ತಿದ್ದುಪಡಿ ಮಸೂದೆ’ಯನ್ನು ಅಂಗೀಕರಿಸಲಾಯಿತು.

ಈ ಹೊಸ ಮಸೂದೆಯ ಪ್ರಕಾರ, ಬಾಲ್ಯ ವಿವಾಹದ ಮಾಹಿತಿಯನ್ನು ಮದುವೆಯಾದ 30 ದಿನಗಳ ಒಳಗೆ ನೀಡಬೇಕು. ಚರ್ಚೆಯಲ್ಲಿ, ಸಂಸತ್ತಿನ ವ್ಯವಹಾರಗಳ ಸಚಿವೆ ಶಾಂತಿ ಧಾರಿವಾಲ್ ಅವರು ಬಾಲ್ಯವಿವಾಹಗಳನ್ನು ನೋಂದಾಯಿಸುವುದರಿಂದ ಅವುಗಳನ್ನು ಮಾನ್ಯವೆಂದು ಪರಿಗಣಿಸಲಾಗುವುದು ಎಂದಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ಹೊಸ ಕಾನೂನಿನ ಪ್ರಕಾರ, ವಿವಾಹ ನೋಂದಣಿ ಅಧಿಕಾರಿಯು ಬ್ಲಾಕ್ ಹಂತದವರೆಗೆ ನೋಂದಣಿಯನ್ನು ಮಾಡುತ್ತಾರೆ. ಮದುವೆಯ ಸಮಯದಲ್ಲಿ ಹುಡುಗಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿದ್ದರೆ ಮತ್ತು ಹುಡುಗನ ವಯಸ್ಸು 21 ಕ್ಕಿಂತ ಕಡಿಮೆಯಿದ್ದರೆ, ಅವರ ಪೋಷಕರು ನೋಂದಣಿ ಅಧಿಕಾರಿಗೆ 30 ದಿನಗಳಲ್ಲಿ ತಿಳಿಸಬೇಕೆಂದು ಮಸೂದೆಯು ತಿಳಿಸುತ್ತದೆ.

ಬಾಲ್ಯವಿವಾಹಗಳ ಸಂದರ್ಭದಲ್ಲಿ ಹುಡುಗ ಮತ್ತು ಹುಡುಗಿಯ ಪೋಷಕರು ನಿಗದಿತ ನಮೂನೆಯಲ್ಲಿ ಜ್ಞಾಪನಾ ಪತ್ರವನ್ನು ನೀಡಿ ನೋಂದಣಿ ಅಧಿಕಾರಿಗೆ ತಿಳಿಸಬೇಕಾಗುತ್ತದೆ. ಇದರ ಆಧಾರದ ಮೇಲೆ, ನೋಂದಣಿ ಅಧಿಕಾರಿ ಆ ಬಾಲ್ಯ ವಿವಾಹವನ್ನು ನೋಂದಾಯಿಸಿಕೊಳ್ಳುತ್ತಾರೆ. ಈ ನಿಬಂಧನೆಯನ್ನು ವಿವಾಹಗಳ ಕಡ್ಡಾಯ ನೋಂದಣಿ ಕಾಯಿದೆಯ ಸೆಕ್ಷನ್ 8 ರಲ್ಲಿ ಮಾಡಲಾಗಿದೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಈ ಹಿಂದೆ ರಾಜ್ಯದಲ್ಲಿ, ಜಿಲ್ಲಾ ಮಟ್ಟದಲ್ಲಿ ವಿವಾಹ ನೋಂದಣಿ ಅಧಿಕಾರಿಗಳು ಇದ್ದರು ಆದರೆ ಈಗ ಬ್ಲಾಕ್ ಹಂತದವರೆಗೆ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.

ಬಾಲ್ಯ ವಿವಾಹ ಕಾನೂನುಬಾಹಿರವಾಗಿರುವಾಗ ನೋಂದಣಿಯ ಅಗತ್ಯತೆ ಮತ್ತು ವಿಧೇಯಕದ ಉದ್ದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸದನದಿಂದ ಹೊರನಡೆದಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಆದೇಶದ ಆಧಾರದಲ್ಲಿ ಮಸೂದೆಯನ್ನು ತರಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಪ್ರತಿಪಕ್ಷಗಳು ಬಾಲ್ಯವಿವಾಹಗಳ ನೋಂದಣಿಯ ಅಗತ್ಯದ ಬಗ್ಗೆ ಪ್ರಶ್ನೆಗಳನ್ನು ಎತ್ತಿ, ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಧಾರಿವಾಲ್, “ಬಾಲ್ಯ ವಿವಾಹವನ್ನು ನೋಂದಾಯಿಸುವುದು ಎಂದರೆ ಬಾಲ್ಯವಿವಾಹಕ್ಕೆ ಸಿಂಧುತ್ವವನ್ನು ನೀಡುವುದು ಎಂದಲ್ಲ ಮತ್ತು ಅವರಿಗೆ ನ್ಯಾಯಬದ್ಧತೆಯನ್ನು ನೀಡುವುದು ಎಂದಲ್ಲ” ಎಂದು ಪ್ರತಿಪಾದಿಸಿದ್ದಾರೆ. ನೋಂದಾಯಿಸಿದ ನಂತರವೂ ಬಾಲ್ಯ ವಿವಾಹಗಳನ್ನು ಆಯೋಜಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...