Homeಮುಖಪುಟರಾಜಸ್ಥಾನ ಆಡಿಯೋ ಪ್ರಕರಣ: ಕಾಂಗ್ರೆಸ್ ವಕ್ತಾರ ಸುರ್ಜೇವಾಲ ವಿರುದ್ಧ ದೂರು ದಾಖಲು

ರಾಜಸ್ಥಾನ ಆಡಿಯೋ ಪ್ರಕರಣ: ಕಾಂಗ್ರೆಸ್ ವಕ್ತಾರ ಸುರ್ಜೇವಾಲ ವಿರುದ್ಧ ದೂರು ದಾಖಲು

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ‌ ಸರ್ಕಾರವನ್ನು ಉರುಳಿಸಲೆಂದು ಕಾಂಗ್ರೆಸ್ ಬಂಡಾಯ ಶಾಸಕರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಕಾವತ್ ರೊಡನೆ ನಡೆಸಿರುವ ಸಂಭಾಷಣೆಯ ಆಡಿಯೋ ಫೇಕ್ ಎಂದು ಬಿಜೆಪಿ ಹೇಳಿದೆ. ಈ ಕುರಿತು ಬಿಜೆಪಿ ವಕ್ತಾರರಾದ ಲಕ್ಷ್ಮೀಕಾಂತ್ ಭಾರದ್ವಾಜ್ ಎಂಬುವವರು ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲ ಮತ್ತು ಗೋವಿಂದ್ ಸಿಂಗ್ ದೋಟಾಸ್ರಾರವರ ಮೇಲೆ ಪ್ರಕರಣ ದಾಖಲಾಗಿದೆ.

ಬಿಜೆಪಿಯ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಮುಖ್ಯಮಂತ್ರಿಗಳ ಮನೆಯಲ್ಲಿಯೇ ಪಿತೂರಿ ನಡೆಸಲಾಗಿದೆ. ಮಹೇಶ್ ಜೋಶಿ, ರಂದೀಪ್ ಸುರ್ಜೆವಾಲಾ ಮತ್ತು ಇತರರು ಸದಾ ಸುಳ್ಳು ಮತ್ತು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇತ್ತೀಚಿನ ಬಿಕ್ಕಟ್ಟನ್ನು ಬಿಜೆಪಿ ಮೇಲೆ ಹೊರಿಸಿರುವುದು ಸರ್ವಾಥ ಸರಿಯಲ್ಲ ಎಂದು ರಾಜಸ್ಥಾನದ ಬಿಜೆಪಿ ವಕ್ತಾರ ಭರದ್ವಾಜ್ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಿಎಂರವರ ಆದೇಶದ ಮೇರೆಗೆ ಕೇಂದ್ರ ಸಚಿವರ ಹೆಸರನ್ನು ಎಳೆದು ತರಲಾಗಿದೆ. ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಕೋಟ್ಯಂತರ ರೂಪಾಯಿಗಳನ್ನು ಬಿಜೆಪಿ ನೀಡುತ್ತಿದೆ ಎಂಬ ನಕಲಿ ಫೋನ್ ಸಂಭಾಷಣೆಯನ್ನು ಸೃಷ್ಟಿಸಲಾಗಿದೆ. ತನ್ನನ್ನು ಮುಖ್ಯಮಂತ್ರಿಯ ಓಎಸ್ಡಿ ಎಂದು ಕರೆದುಕೊಳ್ಳುವ ಲೋಕೇಶ್ ಶರ್ಮಾ ಇದರ ನೇತೃತ್ವ ವಹಿಸಿದ್ದಾರೆ. ಈ ಪಿತೂರಿಯಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಸ್ಥಾನ ಮತ್ತು ಅಧಿಕಾರವನ್ನು ತೀವ್ರವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲೋಕೇಶ್ ಶರ್ಮಾ ಅವರು “ಜುಲೈ 16, 2020 ರಂದು ರಾತ್ರಿ 8:25 ರ ಸುಮಾರಿಗೆ ವಾಟ್ಸಾಪ್ ಮೂಲಕ ಮೂರು ಆಡಿಯೊ ಟೇಪ್‌ಗಳನ್ನು ಮಾಧ್ಯಮ ಕಾರ್ಯಕರ್ತರಿಗೆ ಬಿಡುಗಡೆ ಮಾಡಿದ್ದಾರೆ. ಇದು ಕೇಂದ್ರ ಸಚಿವರ ವಿರುದ್ಧ ದೊಡ್ಡ ಮಟ್ಟದ ಮಾನಹಾನಿ ಮಾಡಿದೆ ಎಂದು ದೂರಲಾಗಿದೆ.

ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರಣದೀಪ್ ಸುರ್ಜೆವಾಲಾ, ಗೋವಿಂದ್ ಸಿಂಗ್ ದೋಟಾಸ್ರಾ ಅವರು ಆಡಿಯೋ ಟೇಪ್‌ಗಳಲ್ಲಿನ ಸಂಭಾಷಣೆಯನ್ನು ಸಾರ್ವಜನಿಕವಾಗಿ ಓದಿದ್ದಾರೆ ಮತ್ತು “ಅವುಗಳನ್ನು ಆಧಾರವಾಗಿ ಬಳಸಿ ಬಿಜೆಪಿ ಪ್ರಜಾಪ್ರಭುತ್ವವನ್ನು ಪ್ರಚೋದಿಸುತ್ತದೆ, ಜನಾದೇಶವನ್ನು ಹಾಳುಮಾಡುತ್ತದೆ ಮತ್ತು ಸರ್ಕಾರವನ್ನು ಉರುಳಿಸುತ್ತಿದೆ ಎಂದು ಆರೋಪಿಸುವ ಮೂಲಕ ಬಿಜೆಪಿ ಖ್ಯಾತಿಗೆ ಧಕ್ಕೆ ತಂದಿದೆ ಎಂದು ಉಲ್ಲೇಖಿಲಸಲಾಗಿದೆ.


ಇದನ್ನೂ ಓದಿ; ಬಿಜೆಪಿಯೊಂದಿಗಿನ ಸಚಿನ್ ಪೈಲಟ್ ಬೆಂಬಲಿಗ ಶಾಸಕನ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡಿದ ಗೆಹ್ಲೋಟ್ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...