Homeಮುಖಪುಟರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನ ರಾಮಗಢದಲ್ಲಿರುವ ರಾಮ ಮಂದಿರವನ್ನು ವಿರೋಧ ಪಕ್ಷದ ಕಾಂಗ್ರೆಸ್ ನಾಯಕ ಟಿಕರಾಮ್ ಪ್ರವೇಶಿಸಿದ ಬಳಿಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನ್ ದೇವ್ ಅಹುಜಾ ನೇತೃತ್ವದಲ್ಲಿ ಶುದ್ಧೀಕರಣಗೊಳಡಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಶುದ್ಧೀಕರಣದ ವೀಡಿಯೊ ಕಾಣಿಸಿಕೊಂಡಿದ್ದು, ಅಹುಜಾ ದೇವಾಲಯದ ಆವರಣದಲ್ಲಿ ಗಂಗಾಜಲ ಸಿಂಪಡಿಸುತ್ತಿರುವುದನ್ನು ಕಾಣಬಹುದು. “ಕೆಲವು ಅಶುದ್ಧ ಜನರು ಭಾನುವಾರ ದೇವಸ್ಥಾನ ಆವರಣ ಪ್ರವೇಶಿಸಿದ್ದರಿಂದ ದೇವಾಲಯವನ್ನು ಶುದ್ಧೀಕರಿಸುವುದು ಮುಖ್ಯ” ಎಂದು ಅಹುಜಾ ಈ ನಡೆಯನ್ನು ಸಮರ್ಥಿಸಿಕೊಂಡರು.

“ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ, ಆದರೆ ದೇವಾಲಯದಲ್ಲಿ ಯಾರಿದ್ದರು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದು ಹೇಳಿರುವ ಅಹುಜಾ, 2016 ರಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವನ್ನು ಲೈಂಗಿಕ ಅಡ್ಡೆ ಎಂದು ಕರೆದಿದ್ದರು. ಸಾಲದ್ದಕ್ಕೆ, ವಿವಿ ಆವರಣದಲ್ಲಿ ಪ್ರತಿದಿನ 3,000 ಕ್ಕೂ ಹೆಚ್ಚು ಬಳಸಿದ ಕಾಂಡೋಮ್‌ಗಳು ಮತ್ತು 2,000 ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳುವ ಮೂಲಕ  ಟೀಕೆಗೆ ಗುರಿಯಾಗಿದ್ದರು.

ಅಹುಜಾ ಅವರ ಕ್ರಮವು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಜುಲ್ಲಿ ಹೇಳಿದರು. “ನಾನು ವಿಧಾನಸಭೆಯಲ್ಲಿ ಅಸ್ಪೃಶ್ಯತಾ ವಿಷಯವನ್ನು ಎತ್ತಿದ್ದೇನೆ; ಅದರ ವಿರುದ್ಧ ಅಭಿಯಾನವನ್ನು ನಡೆಸುತ್ತೇನೆ. ನನ್ನ ದಲಿತ ಗುರುತಿನ ಕಾರಣದಿಂದಾಗಿ ಬಿಜೆಪಿ ದೇವಾಲಯವನ್ನು ಶುದ್ಧೀಕರಿಸುತ್ತಿದೆ. ಇದು ನನ್ನ ನಂಬಿಕೆಯ ಮೇಲಿನ ದಾಳಿ ಮಾತ್ರವಲ್ಲದೆ ಅಸ್ಪೃಶ್ಯತೆಗೆ ಸಂಬಂಧಿಸಿದ ಅಪರಾಧಗಳನ್ನು ಪ್ರೋತ್ಸಾಹಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.

ಬಿಜೆಪಿ ದಲಿತರನ್ನು ಎಷ್ಟು ದ್ವೇಷಿಸುತ್ತದೆ ಎಂದರೆ. ಅವರು ದೇವಾಲಯಗಳಲ್ಲಿ ಪೂಜಿಸುವುದನ್ನು ಸಹ ನೋಡಲು ಸಾಧ್ಯವಿಲ್ಲ ಎಂದು ಜುಲ್ಲಿ ಹೇಳಿದರು. “ದೇವರುಗಳು ಅವರ (ಬಿಜೆಪಿ) ಏಕಸ್ವಾಮ್ಯವೇ? ಮುಖ್ಯಮಂತ್ರಿ (ಭಜನ್ ಲಾಲ್ ಶರ್ಮಾ) ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ (ಮದನ್ ರಾಥೋಡ್) ಅವರು ಈ ಕ್ರಮವನ್ನು ಬೆಂಬಲಿಸುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು” ಎಂದು ಹಿಂದಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಅಲ್ವಾರ್ ಗ್ರಾಮೀಣ ಕ್ಷೇತ್ರದ ಶಾಸಕರಾದ ಜುಲ್ಲಿ ಹೇಳಿದರು.

ಕಾಂಗ್ರೆಸ್ ಮಂಗಳವಾರ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ, ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಲು ಯೋಜಿಸಿದೆ.

ಗೆಹ್ಲೋಟ್ ಅಹುಜಾ ಅವರ ಕ್ರಮವನ್ನು ಖಂಡಿಸಿದರು, ಜೂಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಗಂಗಾಜಲ ಸಿಂಪಡಿಸುವುದು ಬಿಜೆಪಿಯ ದಲಿತರ ಮೇಲಿನ ದ್ವೇಷವನ್ನು ತೋರಿಸುತ್ತದೆ ಎಂದು ಹೇಳಿದರು. “21 ನೇ ಶತಮಾನದಲ್ಲಿ ನಾಗರಿಕ ಸಮಾಜದಲ್ಲಿ ಇಂತಹ ಸಂಕುಚಿತ ಮನೋಭಾವ ಸ್ವೀಕಾರಾರ್ಹವಲ್ಲ” ಅವರು ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರನ್ನು ತಮ್ಮ ಹಿರಿಯ ನಾಯಕನ ಈ ನಡವಳಿಕೆಯನ್ನು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದರು. “ಈ ಹೇಯ ಕೃತ್ಯಕ್ಕಾಗಿ ಬಿಜೆಪಿ ತನ್ನ ನಾಯಕನ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

ಅಹುಜಾ ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸದಾ ಸುದ್ದಿಯಲ್ಲಿದ್ದಾರೆ. ಗೋ ಜಾಗರೂಕತೆಯನ್ನು ಬೆಂಬಲಿಸಿದ ಅಹುಜಾ, ಗೋ ಕಳ್ಳಸಾಗಣೆದಾರರು ಮತ್ತು ಗೋವುಗಳನ್ನು ವಧಿಸುವವರನ್ನು ಗುಂಪುಗುಂಪಾಗಿ ಕೊಲ್ಲಬೇಕೆಂದು ಕರೆ ನೀಡಿದ್ದರು. 2018 ರಲ್ಲಿ, ಅವರು ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಕರೆದರು. ಸಿಂಧಿ ಸಮುದಾಯದ ಮೇಲ್ಜಾತಿ ಅಹುಜಾ, ರಾಮಗಢದ ಮಾಜಿ ಮೂರು ಬಾರಿ ಶಾಸಕರಾಗಿದ್ದಾರೆ. ನವೆಂಬರ್‌ನಲ್ಲಿ, ಅವರ ಸೋದರಳಿಯ ಜೈ ಅಹುಜಾ ಅವರಿಗೆ ರಾಮಗಢ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯಿಂದ ದೂರವಿತ್ತು.

‘ಭಾರತವನ್ನು ಮಾರಿ ಹೊರಟು ಹೋಗುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...