Homeಮುಖಪುಟರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನ ರಾಮಗಢದಲ್ಲಿರುವ ರಾಮ ಮಂದಿರವನ್ನು ವಿರೋಧ ಪಕ್ಷದ ಕಾಂಗ್ರೆಸ್ ನಾಯಕ ಟಿಕರಾಮ್ ಪ್ರವೇಶಿಸಿದ ಬಳಿಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನ್ ದೇವ್ ಅಹುಜಾ ನೇತೃತ್ವದಲ್ಲಿ ಶುದ್ಧೀಕರಣಗೊಳಡಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಶುದ್ಧೀಕರಣದ ವೀಡಿಯೊ ಕಾಣಿಸಿಕೊಂಡಿದ್ದು, ಅಹುಜಾ ದೇವಾಲಯದ ಆವರಣದಲ್ಲಿ ಗಂಗಾಜಲ ಸಿಂಪಡಿಸುತ್ತಿರುವುದನ್ನು ಕಾಣಬಹುದು. “ಕೆಲವು ಅಶುದ್ಧ ಜನರು ಭಾನುವಾರ ದೇವಸ್ಥಾನ ಆವರಣ ಪ್ರವೇಶಿಸಿದ್ದರಿಂದ ದೇವಾಲಯವನ್ನು ಶುದ್ಧೀಕರಿಸುವುದು ಮುಖ್ಯ” ಎಂದು ಅಹುಜಾ ಈ ನಡೆಯನ್ನು ಸಮರ್ಥಿಸಿಕೊಂಡರು.

“ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ, ಆದರೆ ದೇವಾಲಯದಲ್ಲಿ ಯಾರಿದ್ದರು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದು ಹೇಳಿರುವ ಅಹುಜಾ, 2016 ರಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವನ್ನು ಲೈಂಗಿಕ ಅಡ್ಡೆ ಎಂದು ಕರೆದಿದ್ದರು. ಸಾಲದ್ದಕ್ಕೆ, ವಿವಿ ಆವರಣದಲ್ಲಿ ಪ್ರತಿದಿನ 3,000 ಕ್ಕೂ ಹೆಚ್ಚು ಬಳಸಿದ ಕಾಂಡೋಮ್‌ಗಳು ಮತ್ತು 2,000 ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳುವ ಮೂಲಕ  ಟೀಕೆಗೆ ಗುರಿಯಾಗಿದ್ದರು.

ಅಹುಜಾ ಅವರ ಕ್ರಮವು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಜುಲ್ಲಿ ಹೇಳಿದರು. “ನಾನು ವಿಧಾನಸಭೆಯಲ್ಲಿ ಅಸ್ಪೃಶ್ಯತಾ ವಿಷಯವನ್ನು ಎತ್ತಿದ್ದೇನೆ; ಅದರ ವಿರುದ್ಧ ಅಭಿಯಾನವನ್ನು ನಡೆಸುತ್ತೇನೆ. ನನ್ನ ದಲಿತ ಗುರುತಿನ ಕಾರಣದಿಂದಾಗಿ ಬಿಜೆಪಿ ದೇವಾಲಯವನ್ನು ಶುದ್ಧೀಕರಿಸುತ್ತಿದೆ. ಇದು ನನ್ನ ನಂಬಿಕೆಯ ಮೇಲಿನ ದಾಳಿ ಮಾತ್ರವಲ್ಲದೆ ಅಸ್ಪೃಶ್ಯತೆಗೆ ಸಂಬಂಧಿಸಿದ ಅಪರಾಧಗಳನ್ನು ಪ್ರೋತ್ಸಾಹಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.

ಬಿಜೆಪಿ ದಲಿತರನ್ನು ಎಷ್ಟು ದ್ವೇಷಿಸುತ್ತದೆ ಎಂದರೆ. ಅವರು ದೇವಾಲಯಗಳಲ್ಲಿ ಪೂಜಿಸುವುದನ್ನು ಸಹ ನೋಡಲು ಸಾಧ್ಯವಿಲ್ಲ ಎಂದು ಜುಲ್ಲಿ ಹೇಳಿದರು. “ದೇವರುಗಳು ಅವರ (ಬಿಜೆಪಿ) ಏಕಸ್ವಾಮ್ಯವೇ? ಮುಖ್ಯಮಂತ್ರಿ (ಭಜನ್ ಲಾಲ್ ಶರ್ಮಾ) ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ (ಮದನ್ ರಾಥೋಡ್) ಅವರು ಈ ಕ್ರಮವನ್ನು ಬೆಂಬಲಿಸುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು” ಎಂದು ಹಿಂದಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಅಲ್ವಾರ್ ಗ್ರಾಮೀಣ ಕ್ಷೇತ್ರದ ಶಾಸಕರಾದ ಜುಲ್ಲಿ ಹೇಳಿದರು.

ಕಾಂಗ್ರೆಸ್ ಮಂಗಳವಾರ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ, ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಲು ಯೋಜಿಸಿದೆ.

ಗೆಹ್ಲೋಟ್ ಅಹುಜಾ ಅವರ ಕ್ರಮವನ್ನು ಖಂಡಿಸಿದರು, ಜೂಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಗಂಗಾಜಲ ಸಿಂಪಡಿಸುವುದು ಬಿಜೆಪಿಯ ದಲಿತರ ಮೇಲಿನ ದ್ವೇಷವನ್ನು ತೋರಿಸುತ್ತದೆ ಎಂದು ಹೇಳಿದರು. “21 ನೇ ಶತಮಾನದಲ್ಲಿ ನಾಗರಿಕ ಸಮಾಜದಲ್ಲಿ ಇಂತಹ ಸಂಕುಚಿತ ಮನೋಭಾವ ಸ್ವೀಕಾರಾರ್ಹವಲ್ಲ” ಅವರು ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರನ್ನು ತಮ್ಮ ಹಿರಿಯ ನಾಯಕನ ಈ ನಡವಳಿಕೆಯನ್ನು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದರು. “ಈ ಹೇಯ ಕೃತ್ಯಕ್ಕಾಗಿ ಬಿಜೆಪಿ ತನ್ನ ನಾಯಕನ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

ಅಹುಜಾ ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸದಾ ಸುದ್ದಿಯಲ್ಲಿದ್ದಾರೆ. ಗೋ ಜಾಗರೂಕತೆಯನ್ನು ಬೆಂಬಲಿಸಿದ ಅಹುಜಾ, ಗೋ ಕಳ್ಳಸಾಗಣೆದಾರರು ಮತ್ತು ಗೋವುಗಳನ್ನು ವಧಿಸುವವರನ್ನು ಗುಂಪುಗುಂಪಾಗಿ ಕೊಲ್ಲಬೇಕೆಂದು ಕರೆ ನೀಡಿದ್ದರು. 2018 ರಲ್ಲಿ, ಅವರು ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಕರೆದರು. ಸಿಂಧಿ ಸಮುದಾಯದ ಮೇಲ್ಜಾತಿ ಅಹುಜಾ, ರಾಮಗಢದ ಮಾಜಿ ಮೂರು ಬಾರಿ ಶಾಸಕರಾಗಿದ್ದಾರೆ. ನವೆಂಬರ್‌ನಲ್ಲಿ, ಅವರ ಸೋದರಳಿಯ ಜೈ ಅಹುಜಾ ಅವರಿಗೆ ರಾಮಗಢ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯಿಂದ ದೂರವಿತ್ತು.

‘ಭಾರತವನ್ನು ಮಾರಿ ಹೊರಟು ಹೋಗುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...