Homeಮುಖಪುಟರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನ ರಾಮಗಢದಲ್ಲಿರುವ ರಾಮ ಮಂದಿರವನ್ನು ವಿರೋಧ ಪಕ್ಷದ ಕಾಂಗ್ರೆಸ್ ನಾಯಕ ಟಿಕರಾಮ್ ಪ್ರವೇಶಿಸಿದ ಬಳಿಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನ್ ದೇವ್ ಅಹುಜಾ ನೇತೃತ್ವದಲ್ಲಿ ಶುದ್ಧೀಕರಣಗೊಳಡಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಶುದ್ಧೀಕರಣದ ವೀಡಿಯೊ ಕಾಣಿಸಿಕೊಂಡಿದ್ದು, ಅಹುಜಾ ದೇವಾಲಯದ ಆವರಣದಲ್ಲಿ ಗಂಗಾಜಲ ಸಿಂಪಡಿಸುತ್ತಿರುವುದನ್ನು ಕಾಣಬಹುದು. “ಕೆಲವು ಅಶುದ್ಧ ಜನರು ಭಾನುವಾರ ದೇವಸ್ಥಾನ ಆವರಣ ಪ್ರವೇಶಿಸಿದ್ದರಿಂದ ದೇವಾಲಯವನ್ನು ಶುದ್ಧೀಕರಿಸುವುದು ಮುಖ್ಯ” ಎಂದು ಅಹುಜಾ ಈ ನಡೆಯನ್ನು ಸಮರ್ಥಿಸಿಕೊಂಡರು.

“ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ, ಆದರೆ ದೇವಾಲಯದಲ್ಲಿ ಯಾರಿದ್ದರು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದು ಹೇಳಿರುವ ಅಹುಜಾ, 2016 ರಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವನ್ನು ಲೈಂಗಿಕ ಅಡ್ಡೆ ಎಂದು ಕರೆದಿದ್ದರು. ಸಾಲದ್ದಕ್ಕೆ, ವಿವಿ ಆವರಣದಲ್ಲಿ ಪ್ರತಿದಿನ 3,000 ಕ್ಕೂ ಹೆಚ್ಚು ಬಳಸಿದ ಕಾಂಡೋಮ್‌ಗಳು ಮತ್ತು 2,000 ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳುವ ಮೂಲಕ  ಟೀಕೆಗೆ ಗುರಿಯಾಗಿದ್ದರು.

ಅಹುಜಾ ಅವರ ಕ್ರಮವು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಜುಲ್ಲಿ ಹೇಳಿದರು. “ನಾನು ವಿಧಾನಸಭೆಯಲ್ಲಿ ಅಸ್ಪೃಶ್ಯತಾ ವಿಷಯವನ್ನು ಎತ್ತಿದ್ದೇನೆ; ಅದರ ವಿರುದ್ಧ ಅಭಿಯಾನವನ್ನು ನಡೆಸುತ್ತೇನೆ. ನನ್ನ ದಲಿತ ಗುರುತಿನ ಕಾರಣದಿಂದಾಗಿ ಬಿಜೆಪಿ ದೇವಾಲಯವನ್ನು ಶುದ್ಧೀಕರಿಸುತ್ತಿದೆ. ಇದು ನನ್ನ ನಂಬಿಕೆಯ ಮೇಲಿನ ದಾಳಿ ಮಾತ್ರವಲ್ಲದೆ ಅಸ್ಪೃಶ್ಯತೆಗೆ ಸಂಬಂಧಿಸಿದ ಅಪರಾಧಗಳನ್ನು ಪ್ರೋತ್ಸಾಹಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.

ಬಿಜೆಪಿ ದಲಿತರನ್ನು ಎಷ್ಟು ದ್ವೇಷಿಸುತ್ತದೆ ಎಂದರೆ. ಅವರು ದೇವಾಲಯಗಳಲ್ಲಿ ಪೂಜಿಸುವುದನ್ನು ಸಹ ನೋಡಲು ಸಾಧ್ಯವಿಲ್ಲ ಎಂದು ಜುಲ್ಲಿ ಹೇಳಿದರು. “ದೇವರುಗಳು ಅವರ (ಬಿಜೆಪಿ) ಏಕಸ್ವಾಮ್ಯವೇ? ಮುಖ್ಯಮಂತ್ರಿ (ಭಜನ್ ಲಾಲ್ ಶರ್ಮಾ) ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ (ಮದನ್ ರಾಥೋಡ್) ಅವರು ಈ ಕ್ರಮವನ್ನು ಬೆಂಬಲಿಸುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು” ಎಂದು ಹಿಂದಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಅಲ್ವಾರ್ ಗ್ರಾಮೀಣ ಕ್ಷೇತ್ರದ ಶಾಸಕರಾದ ಜುಲ್ಲಿ ಹೇಳಿದರು.

ಕಾಂಗ್ರೆಸ್ ಮಂಗಳವಾರ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ, ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಲು ಯೋಜಿಸಿದೆ.

ಗೆಹ್ಲೋಟ್ ಅಹುಜಾ ಅವರ ಕ್ರಮವನ್ನು ಖಂಡಿಸಿದರು, ಜೂಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಗಂಗಾಜಲ ಸಿಂಪಡಿಸುವುದು ಬಿಜೆಪಿಯ ದಲಿತರ ಮೇಲಿನ ದ್ವೇಷವನ್ನು ತೋರಿಸುತ್ತದೆ ಎಂದು ಹೇಳಿದರು. “21 ನೇ ಶತಮಾನದಲ್ಲಿ ನಾಗರಿಕ ಸಮಾಜದಲ್ಲಿ ಇಂತಹ ಸಂಕುಚಿತ ಮನೋಭಾವ ಸ್ವೀಕಾರಾರ್ಹವಲ್ಲ” ಅವರು ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರನ್ನು ತಮ್ಮ ಹಿರಿಯ ನಾಯಕನ ಈ ನಡವಳಿಕೆಯನ್ನು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದರು. “ಈ ಹೇಯ ಕೃತ್ಯಕ್ಕಾಗಿ ಬಿಜೆಪಿ ತನ್ನ ನಾಯಕನ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

ಅಹುಜಾ ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸದಾ ಸುದ್ದಿಯಲ್ಲಿದ್ದಾರೆ. ಗೋ ಜಾಗರೂಕತೆಯನ್ನು ಬೆಂಬಲಿಸಿದ ಅಹುಜಾ, ಗೋ ಕಳ್ಳಸಾಗಣೆದಾರರು ಮತ್ತು ಗೋವುಗಳನ್ನು ವಧಿಸುವವರನ್ನು ಗುಂಪುಗುಂಪಾಗಿ ಕೊಲ್ಲಬೇಕೆಂದು ಕರೆ ನೀಡಿದ್ದರು. 2018 ರಲ್ಲಿ, ಅವರು ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಕರೆದರು. ಸಿಂಧಿ ಸಮುದಾಯದ ಮೇಲ್ಜಾತಿ ಅಹುಜಾ, ರಾಮಗಢದ ಮಾಜಿ ಮೂರು ಬಾರಿ ಶಾಸಕರಾಗಿದ್ದಾರೆ. ನವೆಂಬರ್‌ನಲ್ಲಿ, ಅವರ ಸೋದರಳಿಯ ಜೈ ಅಹುಜಾ ಅವರಿಗೆ ರಾಮಗಢ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯಿಂದ ದೂರವಿತ್ತು.

‘ಭಾರತವನ್ನು ಮಾರಿ ಹೊರಟು ಹೋಗುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...