Homeಮುಖಪುಟರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

- Advertisement -
- Advertisement -

ರಾಜಸ್ಥಾನದ ಅಲ್ವಾರ್‌ನ ರಾಮಗಢದಲ್ಲಿರುವ ರಾಮ ಮಂದಿರವನ್ನು ವಿರೋಧ ಪಕ್ಷದ ಕಾಂಗ್ರೆಸ್ ನಾಯಕ ಟಿಕರಾಮ್ ಪ್ರವೇಶಿಸಿದ ಬಳಿಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನ್ ದೇವ್ ಅಹುಜಾ ನೇತೃತ್ವದಲ್ಲಿ ಶುದ್ಧೀಕರಣಗೊಳಡಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಶುದ್ಧೀಕರಣದ ವೀಡಿಯೊ ಕಾಣಿಸಿಕೊಂಡಿದ್ದು, ಅಹುಜಾ ದೇವಾಲಯದ ಆವರಣದಲ್ಲಿ ಗಂಗಾಜಲ ಸಿಂಪಡಿಸುತ್ತಿರುವುದನ್ನು ಕಾಣಬಹುದು. “ಕೆಲವು ಅಶುದ್ಧ ಜನರು ಭಾನುವಾರ ದೇವಸ್ಥಾನ ಆವರಣ ಪ್ರವೇಶಿಸಿದ್ದರಿಂದ ದೇವಾಲಯವನ್ನು ಶುದ್ಧೀಕರಿಸುವುದು ಮುಖ್ಯ” ಎಂದು ಅಹುಜಾ ಈ ನಡೆಯನ್ನು ಸಮರ್ಥಿಸಿಕೊಂಡರು.

“ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ, ಆದರೆ ದೇವಾಲಯದಲ್ಲಿ ಯಾರಿದ್ದರು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದು ಹೇಳಿರುವ ಅಹುಜಾ, 2016 ರಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವನ್ನು ಲೈಂಗಿಕ ಅಡ್ಡೆ ಎಂದು ಕರೆದಿದ್ದರು. ಸಾಲದ್ದಕ್ಕೆ, ವಿವಿ ಆವರಣದಲ್ಲಿ ಪ್ರತಿದಿನ 3,000 ಕ್ಕೂ ಹೆಚ್ಚು ಬಳಸಿದ ಕಾಂಡೋಮ್‌ಗಳು ಮತ್ತು 2,000 ಮದ್ಯದ ಬಾಟಲಿಗಳು ಪತ್ತೆಯಾಗಿವೆ ಎಂದು ಹೇಳುವ ಮೂಲಕ  ಟೀಕೆಗೆ ಗುರಿಯಾಗಿದ್ದರು.

ಅಹುಜಾ ಅವರ ಕ್ರಮವು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಜುಲ್ಲಿ ಹೇಳಿದರು. “ನಾನು ವಿಧಾನಸಭೆಯಲ್ಲಿ ಅಸ್ಪೃಶ್ಯತಾ ವಿಷಯವನ್ನು ಎತ್ತಿದ್ದೇನೆ; ಅದರ ವಿರುದ್ಧ ಅಭಿಯಾನವನ್ನು ನಡೆಸುತ್ತೇನೆ. ನನ್ನ ದಲಿತ ಗುರುತಿನ ಕಾರಣದಿಂದಾಗಿ ಬಿಜೆಪಿ ದೇವಾಲಯವನ್ನು ಶುದ್ಧೀಕರಿಸುತ್ತಿದೆ. ಇದು ನನ್ನ ನಂಬಿಕೆಯ ಮೇಲಿನ ದಾಳಿ ಮಾತ್ರವಲ್ಲದೆ ಅಸ್ಪೃಶ್ಯತೆಗೆ ಸಂಬಂಧಿಸಿದ ಅಪರಾಧಗಳನ್ನು ಪ್ರೋತ್ಸಾಹಿಸುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.

ಬಿಜೆಪಿ ದಲಿತರನ್ನು ಎಷ್ಟು ದ್ವೇಷಿಸುತ್ತದೆ ಎಂದರೆ. ಅವರು ದೇವಾಲಯಗಳಲ್ಲಿ ಪೂಜಿಸುವುದನ್ನು ಸಹ ನೋಡಲು ಸಾಧ್ಯವಿಲ್ಲ ಎಂದು ಜುಲ್ಲಿ ಹೇಳಿದರು. “ದೇವರುಗಳು ಅವರ (ಬಿಜೆಪಿ) ಏಕಸ್ವಾಮ್ಯವೇ? ಮುಖ್ಯಮಂತ್ರಿ (ಭಜನ್ ಲಾಲ್ ಶರ್ಮಾ) ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ (ಮದನ್ ರಾಥೋಡ್) ಅವರು ಈ ಕ್ರಮವನ್ನು ಬೆಂಬಲಿಸುತ್ತಾರೆಯೇ ಎಂದು ಸ್ಪಷ್ಟಪಡಿಸಬೇಕು” ಎಂದು ಹಿಂದಿನ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಅಲ್ವಾರ್ ಗ್ರಾಮೀಣ ಕ್ಷೇತ್ರದ ಶಾಸಕರಾದ ಜುಲ್ಲಿ ಹೇಳಿದರು.

ಕಾಂಗ್ರೆಸ್ ಮಂಗಳವಾರ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದೆ, ಬಿಜೆಪಿ ನಾಯಕರ ಪ್ರತಿಕೃತಿಗಳನ್ನು ದಹಿಸಲು ಯೋಜಿಸಿದೆ.

ಗೆಹ್ಲೋಟ್ ಅಹುಜಾ ಅವರ ಕ್ರಮವನ್ನು ಖಂಡಿಸಿದರು, ಜೂಲಿ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಗಂಗಾಜಲ ಸಿಂಪಡಿಸುವುದು ಬಿಜೆಪಿಯ ದಲಿತರ ಮೇಲಿನ ದ್ವೇಷವನ್ನು ತೋರಿಸುತ್ತದೆ ಎಂದು ಹೇಳಿದರು. “21 ನೇ ಶತಮಾನದಲ್ಲಿ ನಾಗರಿಕ ಸಮಾಜದಲ್ಲಿ ಇಂತಹ ಸಂಕುಚಿತ ಮನೋಭಾವ ಸ್ವೀಕಾರಾರ್ಹವಲ್ಲ” ಅವರು ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥರನ್ನು ತಮ್ಮ ಹಿರಿಯ ನಾಯಕನ ಈ ನಡವಳಿಕೆಯನ್ನು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದರು. “ಈ ಹೇಯ ಕೃತ್ಯಕ್ಕಾಗಿ ಬಿಜೆಪಿ ತನ್ನ ನಾಯಕನ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ” ಎಂದು ಪ್ರಶ್ನಿಸಿದ್ದಾರೆ.

ಅಹುಜಾ ತಮ್ಮ ವಿವಾದಾತ್ಮಕ ಹೇಳಿಕೆಗಳಿಗಾಗಿ ಸದಾ ಸುದ್ದಿಯಲ್ಲಿದ್ದಾರೆ. ಗೋ ಜಾಗರೂಕತೆಯನ್ನು ಬೆಂಬಲಿಸಿದ ಅಹುಜಾ, ಗೋ ಕಳ್ಳಸಾಗಣೆದಾರರು ಮತ್ತು ಗೋವುಗಳನ್ನು ವಧಿಸುವವರನ್ನು ಗುಂಪುಗುಂಪಾಗಿ ಕೊಲ್ಲಬೇಕೆಂದು ಕರೆ ನೀಡಿದ್ದರು. 2018 ರಲ್ಲಿ, ಅವರು ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಕರೆದರು. ಸಿಂಧಿ ಸಮುದಾಯದ ಮೇಲ್ಜಾತಿ ಅಹುಜಾ, ರಾಮಗಢದ ಮಾಜಿ ಮೂರು ಬಾರಿ ಶಾಸಕರಾಗಿದ್ದಾರೆ. ನವೆಂಬರ್‌ನಲ್ಲಿ, ಅವರ ಸೋದರಳಿಯ ಜೈ ಅಹುಜಾ ಅವರಿಗೆ ರಾಮಗಢ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯಿಂದ ದೂರವಿತ್ತು.

‘ಭಾರತವನ್ನು ಮಾರಿ ಹೊರಟು ಹೋಗುತ್ತಾರೆ..’; ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...