Homeಮುಖಪುಟರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

ರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

- Advertisement -
- Advertisement -

ರಾಜಸ್ಥಾನ ಸಚಿವ ಸಂಪುಟ ಪುನಾರಚನೆ ಆಗಲಿದ್ದು, 12 ಹೊಸ ಮುಖಗಳು ಸಚಿವರಾಗಲಿದ್ದಾರೆ. ಯುವ ನಾಯಕ ಸಚಿನ್‌ ಪೈಲಟ್‌‌ ಬಣದ ಐವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿಗಳಾಗಿವೆ.

ರಾಜಸ್ಥಾನ ಸಂಪುಟದ ಎಲ್ಲಾ 21 ಸದಸ್ಯರು ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೂವರು ಕ್ಯಾಬಿನೆಟ್ ಮಂತ್ರಿಗಳಾದ ರಘು ಶರ್ಮಾ, ಹರೀಶ್ ಚೌಧರಿ ಮತ್ತು ಗೋವಿಂದ್ ಸಿಂಗ್ ದೋತಾಸ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಶರ್ಮಾ, ಚೌಧರಿ ಮತ್ತು ದೋತಸ್ರಾ ಅವರು ಪಕ್ಷದ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವುದರಿಂದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. “ಒಬ್ಬ ವ್ಯಕ್ತಿ, ಒಂದು ಹುದ್ದೆ” ಸೂತ್ರವನ್ನು ರಾಜ್ಯದಲ್ಲಿ ಅನ್ವಯಿಸಲಾಗಿದೆ.

ಗುಜರಾತ್‌ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿಯಾಗಿ ಶರ್ಮಾ, ಪಂಜಾಬ್‌ನ ಎಐಸಿಸಿ ಉಸ್ತುವಾರಿಯಾಗಿ ಚೌಧರಿ ಮತ್ತು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥರಾಗಿ ದೋತಸ್ರಾ ಅವರನ್ನು ನೇಮಿಸಲಾಗಿದೆ.


ಇದನ್ನೂ ಓದಿರಿ: ಜಿಲ್ಲಾ ಕೋರ್ಟ್‌‌ನಲ್ಲಿ ನ್ಯಾಯಾಧೀಶರ ಮೇಲೆಯೆ ಹಲ್ಲೆ ನಡೆಸಿದ ಪೊಲೀಸರು!


ಮೂವರು ಸಚಿವರು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಸಂಪುಟ ದರ್ಜೆಗೆ ಏರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೊಸ ರಾಜ್ಯ ಸಚಿವ ಸಂಪುಟವು ಮೊದಲ ಬಾರಿಗೆ ನಾಲ್ವರು ಎಸ್‌ಸಿ ಸದಸ್ಯರನ್ನು ಹೊಂದಿದ್ದು, ದಲಿತರನ್ನು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಎತ್ತಿದ ನಂತರ ಕಾಂಗ್ರೆಸ್ ತೆಗೆದುಕೊಂಡ ಹೆಜ್ಜೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸಮುದಾಯದ ಮೂವರು ಸಚಿವರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಪುಟದಲ್ಲಿ ಮೂವರು ಮಹಿಳೆಯರು ಇರಲಿದ್ದು, ಮುಸ್ಲಿಂ, ಎಸ್‌ಸಿ ಮತ್ತು ಗುಜ್ಜರ್ ಸಮುದಾಯವನ್ನು ಮಹಿಳೆಯರು ಪ್ರತಿನಿಧಿಸುತ್ತಿದ್ದಾರೆ.

ರಾಜಸ್ಥಾನ ಸಂಪುಟದಲ್ಲಿ ನೂತನ ಸಚಿವರು: ಹೇಮರಾಮ್ ಚೌಧರಿ, ಮಹೇಂದ್ರಜಿತ್ ಸಿಂಗ್ ಮಾಳವೀಯ, ರಾಮ್‌ಲಾಲ್ ಜಾಟ್, ಮಹೇಶ್ ಜೋಶಿ, ವಿಶ್ವೇಂದ್ರ ಸಿಂಗ್, ರಮೇಶ್ ಮೀನಾ, ಮಮತಾ ಭೂಪೇಶ್ ಭೈರ್ವಾ, ಭಜನ್‌ಲಾಲ್ ಜಾತವ್, ಟಿಕಾರಾಂ ಜೂಲಿ, ಗೋವಿಂದ್ ರಾಮ್ ಮೇಘವಾಲ್ ಮತ್ತು ಶಕುಂತಲಾ ರಾವತ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಹಿದಾ, ಬ್ರಿಜೇಂದ್ರ ಸಿಂಗ್ ಓಲಾ, ರಾಜೇಂದ್ರ ದುರ್ಹಾ ಮತ್ತು ಮುರಲೀಲಾಲ್ ಮೀನಾ ರಾಜ್ಯದ ನೂತನ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. “ಸಚಿನ್ ಪೈಲಟ್ ಬಣದಿಂದ”ನಿಂದ ಸಚಿವರಾಗಿ ಸೇರ್ಪಡೆಗೊಂಡವರಲ್ಲಿ ವಿಶ್ವೇಂದ್ರ ಸಿಂಗ್, ರಮೇಶ್ ಮೀನಾ ಮತ್ತು ಹೇಮರಾಮ್ ಚೌಧರಿ ಅವರು ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಜೊತೆಗೆ ಬ್ರಿಜೇಂದ್ರ ಓಲಾ ಮತ್ತು ಮುರಾರಿ ಮೀನಾ ಅವರು ರಾಜ್ಯ ಸಚಿವರಾಗಿದ್ದಾರೆ.


ಇದನ್ನೂ ಓದಿರಿ: ಯುಪಿ: ಪಾಕ್ ಧ್ವಜ ಹಾರಿಸಿದ್ದಾರೆಂದು ನಾಲ್ವರು ಮುಸ್ಲಿಮರ ಮೇಲೆ ದೇಶದ್ರೋಹ ಪ್ರಕರಣ; ಅದು ಪಾಕ್‌ ಧ್ವಜ ಅಲ್ಲ ಎಂದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...