Homeಮುಖಪುಟರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

ರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

- Advertisement -
- Advertisement -

ರಾಜಸ್ಥಾನ ಸಚಿವ ಸಂಪುಟ ಪುನಾರಚನೆ ಆಗಲಿದ್ದು, 12 ಹೊಸ ಮುಖಗಳು ಸಚಿವರಾಗಲಿದ್ದಾರೆ. ಯುವ ನಾಯಕ ಸಚಿನ್‌ ಪೈಲಟ್‌‌ ಬಣದ ಐವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿಗಳಾಗಿವೆ.

ರಾಜಸ್ಥಾನ ಸಂಪುಟದ ಎಲ್ಲಾ 21 ಸದಸ್ಯರು ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೂವರು ಕ್ಯಾಬಿನೆಟ್ ಮಂತ್ರಿಗಳಾದ ರಘು ಶರ್ಮಾ, ಹರೀಶ್ ಚೌಧರಿ ಮತ್ತು ಗೋವಿಂದ್ ಸಿಂಗ್ ದೋತಾಸ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಶರ್ಮಾ, ಚೌಧರಿ ಮತ್ತು ದೋತಸ್ರಾ ಅವರು ಪಕ್ಷದ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವುದರಿಂದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. “ಒಬ್ಬ ವ್ಯಕ್ತಿ, ಒಂದು ಹುದ್ದೆ” ಸೂತ್ರವನ್ನು ರಾಜ್ಯದಲ್ಲಿ ಅನ್ವಯಿಸಲಾಗಿದೆ.

ಗುಜರಾತ್‌ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಉಸ್ತುವಾರಿಯಾಗಿ ಶರ್ಮಾ, ಪಂಜಾಬ್‌ನ ಎಐಸಿಸಿ ಉಸ್ತುವಾರಿಯಾಗಿ ಚೌಧರಿ ಮತ್ತು ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಮುಖ್ಯಸ್ಥರಾಗಿ ದೋತಸ್ರಾ ಅವರನ್ನು ನೇಮಿಸಲಾಗಿದೆ.


ಇದನ್ನೂ ಓದಿರಿ: ಜಿಲ್ಲಾ ಕೋರ್ಟ್‌‌ನಲ್ಲಿ ನ್ಯಾಯಾಧೀಶರ ಮೇಲೆಯೆ ಹಲ್ಲೆ ನಡೆಸಿದ ಪೊಲೀಸರು!


ಮೂವರು ಸಚಿವರು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಸೇರಿದವರಾಗಿದ್ದು, ಅವರನ್ನು ಸಂಪುಟ ದರ್ಜೆಗೆ ಏರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೊಸ ರಾಜ್ಯ ಸಚಿವ ಸಂಪುಟವು ಮೊದಲ ಬಾರಿಗೆ ನಾಲ್ವರು ಎಸ್‌ಸಿ ಸದಸ್ಯರನ್ನು ಹೊಂದಿದ್ದು, ದಲಿತರನ್ನು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಎತ್ತಿದ ನಂತರ ಕಾಂಗ್ರೆಸ್ ತೆಗೆದುಕೊಂಡ ಹೆಜ್ಜೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸಮುದಾಯದ ಮೂವರು ಸಚಿವರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಪುಟದಲ್ಲಿ ಮೂವರು ಮಹಿಳೆಯರು ಇರಲಿದ್ದು, ಮುಸ್ಲಿಂ, ಎಸ್‌ಸಿ ಮತ್ತು ಗುಜ್ಜರ್ ಸಮುದಾಯವನ್ನು ಮಹಿಳೆಯರು ಪ್ರತಿನಿಧಿಸುತ್ತಿದ್ದಾರೆ.

ರಾಜಸ್ಥಾನ ಸಂಪುಟದಲ್ಲಿ ನೂತನ ಸಚಿವರು: ಹೇಮರಾಮ್ ಚೌಧರಿ, ಮಹೇಂದ್ರಜಿತ್ ಸಿಂಗ್ ಮಾಳವೀಯ, ರಾಮ್‌ಲಾಲ್ ಜಾಟ್, ಮಹೇಶ್ ಜೋಶಿ, ವಿಶ್ವೇಂದ್ರ ಸಿಂಗ್, ರಮೇಶ್ ಮೀನಾ, ಮಮತಾ ಭೂಪೇಶ್ ಭೈರ್ವಾ, ಭಜನ್‌ಲಾಲ್ ಜಾತವ್, ಟಿಕಾರಾಂ ಜೂಲಿ, ಗೋವಿಂದ್ ರಾಮ್ ಮೇಘವಾಲ್ ಮತ್ತು ಶಕುಂತಲಾ ರಾವತ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಹಿದಾ, ಬ್ರಿಜೇಂದ್ರ ಸಿಂಗ್ ಓಲಾ, ರಾಜೇಂದ್ರ ದುರ್ಹಾ ಮತ್ತು ಮುರಲೀಲಾಲ್ ಮೀನಾ ರಾಜ್ಯದ ನೂತನ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. “ಸಚಿನ್ ಪೈಲಟ್ ಬಣದಿಂದ”ನಿಂದ ಸಚಿವರಾಗಿ ಸೇರ್ಪಡೆಗೊಂಡವರಲ್ಲಿ ವಿಶ್ವೇಂದ್ರ ಸಿಂಗ್, ರಮೇಶ್ ಮೀನಾ ಮತ್ತು ಹೇಮರಾಮ್ ಚೌಧರಿ ಅವರು ಕ್ಯಾಬಿನೆಟ್ ಮಂತ್ರಿಗಳಾಗಿದ್ದಾರೆ. ಜೊತೆಗೆ ಬ್ರಿಜೇಂದ್ರ ಓಲಾ ಮತ್ತು ಮುರಾರಿ ಮೀನಾ ಅವರು ರಾಜ್ಯ ಸಚಿವರಾಗಿದ್ದಾರೆ.


ಇದನ್ನೂ ಓದಿರಿ: ಯುಪಿ: ಪಾಕ್ ಧ್ವಜ ಹಾರಿಸಿದ್ದಾರೆಂದು ನಾಲ್ವರು ಮುಸ್ಲಿಮರ ಮೇಲೆ ದೇಶದ್ರೋಹ ಪ್ರಕರಣ; ಅದು ಪಾಕ್‌ ಧ್ವಜ ಅಲ್ಲ ಎಂದ ಪೊಲೀಸರು


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...