Homeಮುಖಪುಟರಾಜಸ್ಥಾನ: ನೂಪುರ್‌ ಶರ್ಮಾ ತಲೆ ಕತ್ತರಿಸಿ ಎಂದ ಧರ್ಮಗುರು ಅರೆಸ್ಟ್‌

ರಾಜಸ್ಥಾನ: ನೂಪುರ್‌ ಶರ್ಮಾ ತಲೆ ಕತ್ತರಿಸಿ ಎಂದ ಧರ್ಮಗುರು ಅರೆಸ್ಟ್‌

ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೇದಿನ್ ಅಲಿ ಖಾನ್ ಅವರ ಕಚೇರಿಯು ಈ ವಿಡಿಯೋವನ್ನು ಖಂಡಿಸಿದೆ.

- Advertisement -
- Advertisement -

ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡಿದ ಯಾರಿಗಾದರೂ ತನ್ನ ಮನೆಯನ್ನು ಉಡುಗೊರೆಯಾಗಿ ನೀಡುವುದಾಗಿ ಹೇಳಿದ ರಾಜಸ್ಥಾನದ ಅಜ್ಮೀರ್ ದರ್ಗಾದ ಧರ್ಮಗುರುವನ್ನು ಬಂಧಿಸಲಾಗಿದೆ.

ವಿಡಿಯೋ ಕ್ಲಿಪ್ ಆಧಾರಿಸಿ ಸೋಮವಾರ ರಾತ್ರಿ ಎಫ್‌ಐಆರ್ ದಾಖಲಿಸಿದ ನಂತರ ರಾಜಸ್ಥಾನ ಪೊಲೀಸರು ಸಲ್ಮಾನ್ ಚಿಸ್ತಿಗಾಗಿ ಹುಡುಕಾಟ ನಡೆಸಿದ್ದರು.

ಈ ಕುರಿತು ಎನ್‌ಡಿಟಿವಿ ವರದಿ ಮಾಡಿದ್ದು, “ಈ ವಿಡಿಯೊದ ಅಧಿಕೃತತೆಯನ್ನು ನಾವು ಪರಿಶೀಲಿಸಿಲ್ಲ. ನೂಪುರ್ ಶರ್ಮಾ ಅವರ ತಲೆಯನ್ನು ತನ್ನ ಬಳಿಗೆ ತರುವ ಯಾರಿಗಾದರೂ ತನ್ನ ಮನೆಯನ್ನು ನೀಡುವುದಾಗಿ ಧರ್ಮಗುರು ಹೇಳುತ್ತಾರೆ. ಪ್ರವಾದಿಯನ್ನು ಅವಹೇಳನ ಮಾಡಿದ್ದಕ್ಕಾಗಿ ನೂಪುರ್‌ ಅವರನ್ನು ಗುಂಡಿಕ್ಕಿ ಸಾಯಿಸುವುದಾಗಿ ಹೇಳಿದ್ದೂ ಕೇಳಿಬರುತ್ತಿದೆ” ಎಂದು ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ಎಲ್ಲಾ ಮುಸ್ಲಿಂ ರಾಷ್ಟ್ರಗಳಿಗೆ ಉತ್ತರವನ್ನು ನೀಡಬೇಕು. ನಾನು ಇದನ್ನು ರಾಜಸ್ಥಾನದ ಅಜ್ಮೀರ್‌ನಿಂದ ಹೇಳುತ್ತಿದ್ದೇನೆ. ಈ ಸಂದೇಶವು ಹುಜೂರ್ ಖ್ವಾಜಾ ಬಾಬಾ ಕಾ ದರ್ಬಾರ್‌ನಿಂದ ಬಂದಿದೆ” ಎಂದು ಹೇಳುವ ಅವರು, ಪ್ರಸಿದ್ಧ ಸೂಫಿ ದರ್ಗಾವನ್ನು ಉಲ್ಲೇಖಿಸಿ ವೀಡಿಯೊ ಮಾಡಿದ್ದಾರೆ.

ಆರೋಪಿಯು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿ ದಲ್ವೀರ್ ಸಿಂಗ್ ಫೌಜ್ದಾರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೇದಿನ್ ಅಲಿ ಖಾನ್ ಅವರ ಕಚೇರಿಯು ಈ ವಿಡಿಯೋವನ್ನು ಖಂಡಿಸಿದೆ. ಈ ದರ್ಗಾವು ಕೋಮು ಸೌಹಾರ್ದತೆಯ ಕೇಂದ್ರವಾಗಿದೆ ಎಂದು ತಿಳಿಸಿದ್ದಾರೆ.

ಖದೀಮರು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ದರ್ಗಾದ ಸಂದೇಶವೆಂದು ಪರಿಗಣಿಸಬಾರದು. ಈ ಟೀಕೆಗಳು ಒಬ್ಬ ವ್ಯಕ್ತಿಯ ಹೇಳಿಕೆಯಾಗಿದ್ದು, ಇದು ಅತ್ಯಂತ ಖಂಡನೀಯವಾಗಿದೆ ಎಂದು ಕಚೇರಿ ಸ್ಪಷ್ಟಪಡಿಸಿದೆ.

ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ ಬಳಿಕ ತನಗೆ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿದ್ದ ಟೈಲರ್‌‌ ಕನ್ಹಯ್ಯಾ ಲಾಲ್ ಅವರನ್ನು ಉದಯಪುರದಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆರೋಪಿಗಳು ಹತ್ಯೆಯನ್ನು ಚಿತ್ರೀಕರಿಸಿದ್ದರು. ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಇಬ್ಬರನ್ನೂ ಬಂಧಿಸಲಾಗಿದೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್‌‌ ಹತ್ಯೆಯ ಆರೋಪಿಗಳಲ್ಲಿ ಒಬ್ಬ ಆರೋಪಿಯು ಬಿಜೆಪಿ ಜೊತೆಗೆ ಒಡನಾಟ ಇಟ್ಟುಕೊಂಡಿದ್ದನು ಮತ್ತು ಬಿಜೆಪಿ ಸೇರಲು ಬಯಸಿದ್ದನು ಎಂದು ಇಂಡಿಯಾ ಟುಡೆ ವರದಿ ಮಾಡಿತ್ತು. ಅಷ್ಟೇ ಅಲ್ಲದೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸದಸ್ಯರೊಬ್ಬರು ಆರೋಪಿಯು ಬಿಜೆಪಿ ಸದಸ್ಯ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಟೈಲರ್‌ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ‘ಬಿಜೆಪಿ ಸದಸ್ಯ’ ಎಂದು ನೇರಾನೇರ ಆರೋಪಿಸಿದ್ದು, ಪ್ರಕರಣದ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೇ ಎಂದು ಪ್ರಶ್ನಿಸಿದೆ. ಆದರೆ ಈ ಎಲ್ಲಾ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ.

“ಯಾವುದೇ ಆರೋಪಿಗಳೊಂದಿಗೆ, ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ರಾಜಸ್ಥಾನ ಬಿಜೆಪಿಯ ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಸಾದಿಕ್ ಖಾನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಹತ್ಯೆಯು ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವೈಫಲ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಜುಬೇರ್‌ ಪ್ರಕರಣ: ಜಾಮೀನು ನೀಡಲು ನ್ಯಾಯಾಧೀಶರು ಹೆದರುತ್ತಿದ್ದಾರೆ- ಜಸ್ಟೀಸ್‌ ದೀಪಕ್‌ ಗುಪ್ತಾ

ಟೈಲರ್‌ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ‘ಬಿಜೆಪಿ ಸದಸ್ಯ’ ಎಂದು ಕಾಂಗ್ರೆಸ್ ಆರೋಪಿಸಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಬೇಕಾಗಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸಲು ಕೇಂದ್ರ ಸರ್ಕಾರ ತರಾತುರಿಯಲ್ಲಿ ಮುಂದಾಗಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಉದಯಪುರ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳು ಹೊರ ಹಾಕಿರುವ ವರದಿಯನ್ನು ಉಲ್ಲೇಖಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು, “ಕನ್ಹಯ್ಯಾ ಲಾಲ್‌ನ ಹಂತಕ, ರಿಯಾಜ್ ಅತ್ತಾರಿ ಬಿಜೆಪಿಯ ಸದಸ್ಯ” ಎಂದು ಹೇಳಿದ್ದಾರೆ.

ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದರ್ಗಾ ಗಳಲ್ಲಿ ಇರುವ ಬಾಗಶಹ ಎಲ್ಲಾ ಧರ್ಮ ಗುರುಗಳು ಇದೇ ಮನಸ್ಥಿತಿ ಉಳ್ಳವರೇ ಆಗಿದ್ದಾರೆ,ಅವರಿಗೆ ಮತಾಂದತೆಯ ಅಫೀಮು ತಲೆಗೆ ಹತ್ತಿದಾಗ ಈ ರೀತಿಯ ಹೇಳಿಕೆಗಳು ಸರ್ವೇ ಸಾಮಾನ್ಯ,ಮೊದಲು ಇವನನ್ನು ದೇಶದ್ರೋಹಿ ಕಾನೂನು ಅಡಿ ಕೇಸ್ ದಾಖಲಿಸಿ ಗಲ್ಲಿ ಗರಗಸ ಭೇಟಿ ದೆ,ಇವನಿಗೆ ನೀಡುವ ಶಿಕ್ಷೆ ಇತರರಿಗೆ ಭಯ ತರಿಸಬೇಕಿದೆ

  2. ದರ್ಗಾ ಗಳಲ್ಲಿ ಇರುವ ಬಾಗಶಹ ಎಲ್ಲಾ ಧರ್ಮ ಗುರುಗಳು ಇದೇ ಮನಸ್ಥಿತಿ ಉಳ್ಳವರೇ ಆಗಿದ್ದಾರೆ,ಅವರಿಗೆ ಮತಾಂದತೆಯ ಅಫೀಮು ತಲೆಗೆ ಹತ್ತಿದಾಗ ಈ ರೀತಿಯ ಹೇಳಿಕೆಗಳು ಸರ್ವೇ ಸಾಮಾನ್ಯ,ಮೊದಲು ಇವನನ್ನು ದೇಶದ್ರೋಹಿ ಕಾನೂನು ಅಡಿ ಕೇಸ್ ದಾಖಲಿಸಿ ಗಲ್ಲಿಗೇರಿಸಬೇಕಿದೆ,ಇವನಿಗೆ ನೀಡುವ ಶಿಕ್ಷೆ ಇತರರಿಗೆ ಭಯ ತರಿಸಬೇಕಿದೆ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...