Homeಮುಖಪುಟರಾಜಸ್ಥಾನ | ಪ್ರಶ್ನೆ ಪತ್ರಿಕೆ ಲೀಕ್‌‌ ಪ್ರಕರಣದಲ್ಲಿ ಭಾಗಿಯಾದ ಕೋಚಿಂಗ್ ಸೆಂಟರ್ ಧ್ವಂಸ; ಬಿಜೆಪಿ ಹಾದಿಯಲ್ಲಿ...

ರಾಜಸ್ಥಾನ | ಪ್ರಶ್ನೆ ಪತ್ರಿಕೆ ಲೀಕ್‌‌ ಪ್ರಕರಣದಲ್ಲಿ ಭಾಗಿಯಾದ ಕೋಚಿಂಗ್ ಸೆಂಟರ್ ಧ್ವಂಸ; ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌?

- Advertisement -
- Advertisement -

ರಾಜಸ್ಥಾನದಲ್ಲಿ ಇತ್ತೀಚೆಗೆ ಗ್ರೇಡ್-2 ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಆರೋಪಿಯಾಗಿ ಅಧಿಗಮ್‌ ಕೋಚಿಂಗ್ ಸೆಂಟರ್‌ನ ಆಪರೇಟರ್‌ನ ಹೆಸರು ಕಾಣಿಸಿಕೊಂಡಿತ್ತು. ಹೀಗಾಗಿ ಐದು ಅಂತಸ್ತಿನ ಕೋಚಿಂಗ್‌ ಸೆಂಟರ್‌ ಕಟ್ಟಡವನ್ನು ಜೈಪುರ ಅಭಿವೃದ್ಧಿ ಪ್ರಾಧಿಕಾರ (ಜೆಡಿಎ) ಸೋಮವಾರ ನೆಲಸಮಗೊಳಿಸಿದೆ. ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಹಲವಾರು ಜನರು ಖಂಡಿಸಿದ್ದು, ಕಾಂಗ್ರೆಸ್ ಪಕ್ಷವೂ ತಾನು ಕೂಡಾ ಬಿಜೆಪಿ ಎಂದು ತೋರಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಗಮ್ ಕೋಚಿಂಗ್ ಸೆಂಟರ್ ಕಟ್ಟಡವನ್ನು ಕಾನೂನು ಉಲ್ಲಂಘಿಸಿ ನಿರ್ಮಿಸಲಾಗಿದೆ ಎಂದು ಜೆಡಿಎ ಜಾರಿ ವಿಭಾಗ ಪತ್ತೆ ಮಾಡಿದೆ. ಹೀಗಾಗಿ ಕಟ್ಟಡದ ಮಾಲೀಕ ಅನಿಲ್ ಅಗರ್ವಾಲ್ ಮತ್ತು ಕೋಚಿಂಗ್ ಸೆಂಟರ್ ನಿರ್ವಾಹಕರಾದ ಸುರೇಶ್ ಢಾಕಾ, ಭೂಪೇಂದ್ರ ಸರನ್, ಧರ್ಮೇಂದ್ರ ಚೌಧರಿ ಮತ್ತು ಛಾಜು ಲಾಲ್ ಜಾಟ್ ಅವರಿಗೆ ನೋಟಿಸ್ ನೀಡಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಸ್ಥೆಯು ಎರಡು ವಸತಿ ಪ್ಲಾಟ್‌ಗಳಲ್ಲಿ ಇದ್ದು, ರಸ್ತೆಯನ್ನು ಸಹ ಅತಿಕ್ರಮಣ ಮಾಡಲಾಗಿದೆ ಎಂದು ಜೆಡಿಎ ಹೇಳಿದೆ. ಸಂಸ್ಥೆಯಿಂದ ಯಾವುದೇ ತೃಪ್ತಿಕರ ಉತ್ತರ ಸಿಗದ ಕಾರಣ ಕಟ್ಟಡವನ್ನು ಕೆಡವಲಾಗಿದೆ ಎಂದು ಜೆಡಿಎ ಜಾರಿ ವಿಭಾಗದ ಮುಖ್ಯಸ್ಥ ರಘುವೀರ್ ಸೈನಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಡಿಸೆಂಬರ್‌ನಲ್ಲಿ ಗ್ರೇಡ್-2 ಶಿಕ್ಷಕರ ನೇಮಕಾತಿ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 37 ಅಭ್ಯರ್ಥಿಗಳು ಸೇರಿದಂತೆ ಒಟ್ಟು 55 ಮಂದಿಯನ್ನು ಬಂಧಿಸಲಾಗಿತ್ತು. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ಶಾಲೆಯ ಪ್ರಾಂಶುಪಾಲರಾದ ಸುರೇಶ್ ವಿಷ್ಣೋಯ್, ಎಂಬಿಬಿಎಸ್ ವಿದ್ಯಾರ್ಥಿ ಭಜನ್ ಲಾಲ್ ಮತ್ತು ರಾಯಿತ ರಾಮ್ ಚೌಧರಿ ಅವರನ್ನು ಬಂಧಿಸಲಾಗಿದೆ.

ಪ್ರಕರಣದಲ್ಲಿ ಅಧಿಗಮ್ ಕೋಚಿಂಗ್ ಸೆಂಟರ್ ಆಪರೇಟರ್ ಸುರೇಶ್ ಢಾಕಾ ಅವರ ಹೆಸರು ಕೂಡ ಇದ್ದು, ಆದರೆ ಅವರು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ಅಭ್ಯರ್ಥಿಗಳು ಪರೀಕ್ಷೆಗೆ ತೆರಳುತ್ತಿದ್ದ ಬಸ್ಸನ್ನು ಉದಯಪುರ ಪೊಲೀಸರು ತಡೆದಿದ್ದರು. ಈ ವೇಳೆ ಅಭ್ಯರ್ಥಿಗಳಿಂದ ಪ್ರಶ್ನೆ ಪತ್ರಿಕೆ ಪತ್ತೆಯಾಗಿದ್ದು, ಬಳಿಕ ಎಲ್ಲರನ್ನೂ ಬಂಧಿಸಲಾಗಿತ್ತು.

ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಹಲವರು ಖಂಡಿಸಿದ್ದು, ಕಾಂಗ್ರೆಸ್ ಕೂಡಾ ಬಿಜೆಪಿಯಾಗುತ್ತಿದೆ ಎಂದು ಹೇಳಿದ್ದಾರೆ. ಮಾನವಹಕ್ಕುಗಳ ಪರವಾಗಿ ಧ್ವನಿ ಎತ್ತುವ ಆಕಾರ್‌ ಪಟೇಲ್ ಅವರು, ಕಾಂಗ್ರೆಸ್ ತಾನು ಕೂಡಾ ಬಿಜೆಪಿ ಎಂದು ತೋರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...