Homeಮುಖಪುಟರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

ರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

- Advertisement -
- Advertisement -

ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 12 ಹೊಸ ಜಿಲ್ಲೆಗಳನ್ನು ಮತ್ತು ಮೂರು ಹೊಸ ವಿಭಾಗಗಳನ್ನು ರಾಜಸ್ಥಾನದ ಬಿಜೆಪಿ ಸರ್ಕಾರ ಶನಿವಾರ ರದ್ದುಗೊಳಿಸಿದೆ. ಅದಾಗ್ಯೂ, ಕಳೆದ ವರ್ಷ ಕಾಂಗ್ರೆಸ್‌ ಅವಧಿಯಲ್ಲಿ ರಚನೆಯಾಗಿದ್ದ ಎಂಟು ಜಿಲ್ಲೆಗಳನ್ನು ಸರ್ಕಾರ ಹಾಗೆ ಉಳಿಸಿಕೊಂಡಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದ್ದು, ರಾಜಕೀಯವಾಗಿ ಸೇಡಿನ ನಿರ್ಧಾರ ಎಂದು ಬಣ್ಣಿಸಿದೆ. ರಾಜಸ್ಥಾನ

ಮಾರ್ಚ್ 2023 ರಲ್ಲಿ, ಕಾಂಗ್ರೆಸ್‌ನ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯ ಸರ್ಕಾರವು 19 ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗೀಯ ಕೇಂದ್ರಗಳ ರಚನೆಯನ್ನು ಘೋಷಿಸಿತ್ತು. ಈ ವೇಳೆ ಜೈಪುರ ಮತ್ತು ಜೋಧಪುರ ಜಿಲ್ಲೆಗಳನ್ನು ತಲಾ ಎರಡು ಚಿಕ್ಕ ಜಿಲ್ಲೆಗಳಾಗಿ ವಿಂಗಡಿಸಲಾಗಿತ್ತು. ಹಾಗಾಗಿ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆಯು 33 ರಿಂದ 50 ಕ್ಕೆ ಏರಿಕೆಯಾಗಿತ್ತು. ಕಾಂಗ್ರೆಸ್ ಸರ್ಕಾರವು ಪಾಲಿ, ಸಿಕಾರ್ ಮತ್ತು ಬನ್ಸ್ವಾರಾ ಎಂಬ ಮೂರು ಹೊಸ ವಿಭಾಗಗಳನ್ನು ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಅಕ್ಟೋಬರ್ 6 ರಂದು, ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು, ಕಾಂಗ್ರೆಸ್ ಸರ್ಕಾರವು ಮತ್ತೆ ಮೂರು ಜಿಲ್ಲೆಗಳಾದ ಮಾಲ್‌ಪುರ, ಸುಜನ್‌ಗಢ ಮತ್ತು ಕುಚಮನ್‌ಗಳನ್ನು ರಚಿಸಿತ್ತು, ಹಾಗಾಗಿ ರಾಜ್ಯದ ಒಟ್ಟು ಜಿಲ್ಲೆಗಳ ಸಂಖ್ಯೆ 53 ಕ್ಕೆ ತಲುಪಿಸಿತ್ತು.

ಶನಿವಾರ, ರಾಜ್ಯದ ಬಿಜೆಪಿ ಸರ್ಕಾರವು ಅನುಪಗಢ, ದುಡು, ಗಂಗಾಪುರ ನಗರ, ಜೈಪುರ ಗ್ರಾಮಾಂತರ, ಜೋಧ್‌ಪುರ ಗ್ರಾಮಾಂತರ, ಕೇಕ್ರಿ, ನೀಮ್ ಕಾ ಥಾನಾ, ಸಂಚೋರ್ ಮತ್ತು ಶಹಪುರ ಜಿಲ್ಲೆಗಳನ್ನು ರದ್ದುಗೊಳಿಸಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಘೋಷಣೆಯಾದ ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್-ತಿಜಾರಾ, ಫಲೋಡಿ ಮತ್ತು ಸಲುಂಭರ್ ಅನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಶನಿವಾರ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಅವರು ಮಾತನಾಡಿ, ಅಕ್ಟೋಬರ್‌ನಲ್ಲಿ ಘೋಷಿಸಲಾದ ಮಾಲ್‌ಪುರ, ಸುಜನ್‌ಗಢ್ ಮತ್ತು ಕೂಚಮನ್ ರಚನೆಯ ಕುರಿತು ಹಿಂದಿನ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ಆರೋಪಿಸಿದ್ದಾರೆ. ಇದರೊಂದಿಗೆ, ರಾಜಸ್ಥಾನವು ಈಗ 41 ಜಿಲ್ಲೆಗಳು ಮತ್ತು ಏಳು ವಿಭಾಗಗಳನ್ನು ಹೊಂದಿದೆ. ರಾಜಸ್ಥಾನ

ಕಾಂಗ್ರೆಸ್ ಸರ್ಕಾರವು ರಾಜಕೀಯ ಲಾಭಕ್ಕಾಗಿ ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸಿದೆ ಎಂದು ಪಟೇಲ್ ಆರೋಪಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರವು ಆರ್ಥಿಕ ಸಂಪನ್ಮೂಲಗಳ ಲಭ್ಯತೆ, ಆಡಳಿತಾತ್ಮಕ ಅವಶ್ಯಕತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾಂಸ್ಕೃತಿಕ ಸಾಮರಸ್ಯದಂತಹ ಅಂಶಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸುವ ಅಗತ್ಯವಿದೆಯೇ ಎಂದು ಪರಿಶೀಲಿಸಲು ರಾಜ್ಯ ಸರ್ಕಾರವು ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ ಲಲಿತ್ ಕೆ ಪನ್ವಾರ್ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ಮತ್ತು ತಜ್ಞರ ಸಮಿತಿಯನ್ನು ರಚಿಸಿತ್ತು.

ತಮ್ಮ ಆಡಳಿತದ ನಿರ್ಧಾರವನ್ನು ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಆಡಳಿತಾತ್ಮಕ ದಕ್ಷತೆಯ ದೃಷ್ಟಿಯಿಂದ ಸಣ್ಣ ಜಿಲ್ಲೆಗಳು ಉತ್ತಮವಾಗಿವೆ ಎಂದು ಹೇಳಿದ್ದಾರೆ. “ಬಿಜೆಪಿ ಸರ್ಕಾರದ ರಾಜಕೀಯವಾಗಿ ಸೇಡಿನ ನಿರ್ಧಾರವನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ನಿವೃತ್ತ ಅಧಿಕಾರಿ ರಾಮ್ ಲುಭಾಯಾ ನೇತೃತ್ವದ ಸಮಿತಿಯ ಸಂಶೋಧನೆಗಳ ಆಧಾರದ ಮೇಲೆ ಹೊಸ ಜಿಲ್ಲೆಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿತ್ತು ಎಂದು ಗೆಹ್ಲೋಟ್ ಹೇಳಿದ್ದು, “ಹೊಸ ಜಿಲ್ಲೆಗಳು ರಚನೆಯಾಗುವ ಮೊದಲು ರಾಜಸ್ಥಾನದ ಪ್ರತಿ ಜಿಲ್ಲೆಯ ಸರಾಸರಿ ಜನಸಂಖ್ಯೆ 35.42 ಲಕ್ಷ ಇತ್ತು. ಹೊಸ ಜಿಲ್ಲೆಗಳ ರಚನೆಯ ನಂತರ ಈ ಸಂಖ್ಯೆ 15.35 ಲಕ್ಷಕ್ಕೆ ಇಳಿದಿದೆ. ಮಧ್ಯಪ್ರದೇಶವು ರಾಜಸ್ಥಾನಕ್ಕಿಂತ ಚಿಕ್ಕದಾದರೂ 53 ಜಿಲ್ಲೆಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...