Homeಮುಖಪುಟರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

ರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

- Advertisement -
- Advertisement -

ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 12 ಹೊಸ ಜಿಲ್ಲೆಗಳನ್ನು ಮತ್ತು ಮೂರು ಹೊಸ ವಿಭಾಗಗಳನ್ನು ರಾಜಸ್ಥಾನದ ಬಿಜೆಪಿ ಸರ್ಕಾರ ಶನಿವಾರ ರದ್ದುಗೊಳಿಸಿದೆ. ಅದಾಗ್ಯೂ, ಕಳೆದ ವರ್ಷ ಕಾಂಗ್ರೆಸ್‌ ಅವಧಿಯಲ್ಲಿ ರಚನೆಯಾಗಿದ್ದ ಎಂಟು ಜಿಲ್ಲೆಗಳನ್ನು ಸರ್ಕಾರ ಹಾಗೆ ಉಳಿಸಿಕೊಂಡಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದ್ದು, ರಾಜಕೀಯವಾಗಿ ಸೇಡಿನ ನಿರ್ಧಾರ ಎಂದು ಬಣ್ಣಿಸಿದೆ. ರಾಜಸ್ಥಾನ

ಮಾರ್ಚ್ 2023 ರಲ್ಲಿ, ಕಾಂಗ್ರೆಸ್‌ನ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯ ಸರ್ಕಾರವು 19 ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗೀಯ ಕೇಂದ್ರಗಳ ರಚನೆಯನ್ನು ಘೋಷಿಸಿತ್ತು. ಈ ವೇಳೆ ಜೈಪುರ ಮತ್ತು ಜೋಧಪುರ ಜಿಲ್ಲೆಗಳನ್ನು ತಲಾ ಎರಡು ಚಿಕ್ಕ ಜಿಲ್ಲೆಗಳಾಗಿ ವಿಂಗಡಿಸಲಾಗಿತ್ತು. ಹಾಗಾಗಿ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆಯು 33 ರಿಂದ 50 ಕ್ಕೆ ಏರಿಕೆಯಾಗಿತ್ತು. ಕಾಂಗ್ರೆಸ್ ಸರ್ಕಾರವು ಪಾಲಿ, ಸಿಕಾರ್ ಮತ್ತು ಬನ್ಸ್ವಾರಾ ಎಂಬ ಮೂರು ಹೊಸ ವಿಭಾಗಗಳನ್ನು ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಅಕ್ಟೋಬರ್ 6 ರಂದು, ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು, ಕಾಂಗ್ರೆಸ್ ಸರ್ಕಾರವು ಮತ್ತೆ ಮೂರು ಜಿಲ್ಲೆಗಳಾದ ಮಾಲ್‌ಪುರ, ಸುಜನ್‌ಗಢ ಮತ್ತು ಕುಚಮನ್‌ಗಳನ್ನು ರಚಿಸಿತ್ತು, ಹಾಗಾಗಿ ರಾಜ್ಯದ ಒಟ್ಟು ಜಿಲ್ಲೆಗಳ ಸಂಖ್ಯೆ 53 ಕ್ಕೆ ತಲುಪಿಸಿತ್ತು.

ಶನಿವಾರ, ರಾಜ್ಯದ ಬಿಜೆಪಿ ಸರ್ಕಾರವು ಅನುಪಗಢ, ದುಡು, ಗಂಗಾಪುರ ನಗರ, ಜೈಪುರ ಗ್ರಾಮಾಂತರ, ಜೋಧ್‌ಪುರ ಗ್ರಾಮಾಂತರ, ಕೇಕ್ರಿ, ನೀಮ್ ಕಾ ಥಾನಾ, ಸಂಚೋರ್ ಮತ್ತು ಶಹಪುರ ಜಿಲ್ಲೆಗಳನ್ನು ರದ್ದುಗೊಳಿಸಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಘೋಷಣೆಯಾದ ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್-ತಿಜಾರಾ, ಫಲೋಡಿ ಮತ್ತು ಸಲುಂಭರ್ ಅನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಶನಿವಾರ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಅವರು ಮಾತನಾಡಿ, ಅಕ್ಟೋಬರ್‌ನಲ್ಲಿ ಘೋಷಿಸಲಾದ ಮಾಲ್‌ಪುರ, ಸುಜನ್‌ಗಢ್ ಮತ್ತು ಕೂಚಮನ್ ರಚನೆಯ ಕುರಿತು ಹಿಂದಿನ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ಆರೋಪಿಸಿದ್ದಾರೆ. ಇದರೊಂದಿಗೆ, ರಾಜಸ್ಥಾನವು ಈಗ 41 ಜಿಲ್ಲೆಗಳು ಮತ್ತು ಏಳು ವಿಭಾಗಗಳನ್ನು ಹೊಂದಿದೆ. ರಾಜಸ್ಥಾನ

ಕಾಂಗ್ರೆಸ್ ಸರ್ಕಾರವು ರಾಜಕೀಯ ಲಾಭಕ್ಕಾಗಿ ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸಿದೆ ಎಂದು ಪಟೇಲ್ ಆರೋಪಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರವು ಆರ್ಥಿಕ ಸಂಪನ್ಮೂಲಗಳ ಲಭ್ಯತೆ, ಆಡಳಿತಾತ್ಮಕ ಅವಶ್ಯಕತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾಂಸ್ಕೃತಿಕ ಸಾಮರಸ್ಯದಂತಹ ಅಂಶಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸುವ ಅಗತ್ಯವಿದೆಯೇ ಎಂದು ಪರಿಶೀಲಿಸಲು ರಾಜ್ಯ ಸರ್ಕಾರವು ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ ಲಲಿತ್ ಕೆ ಪನ್ವಾರ್ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ಮತ್ತು ತಜ್ಞರ ಸಮಿತಿಯನ್ನು ರಚಿಸಿತ್ತು.

ತಮ್ಮ ಆಡಳಿತದ ನಿರ್ಧಾರವನ್ನು ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಆಡಳಿತಾತ್ಮಕ ದಕ್ಷತೆಯ ದೃಷ್ಟಿಯಿಂದ ಸಣ್ಣ ಜಿಲ್ಲೆಗಳು ಉತ್ತಮವಾಗಿವೆ ಎಂದು ಹೇಳಿದ್ದಾರೆ. “ಬಿಜೆಪಿ ಸರ್ಕಾರದ ರಾಜಕೀಯವಾಗಿ ಸೇಡಿನ ನಿರ್ಧಾರವನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ನಿವೃತ್ತ ಅಧಿಕಾರಿ ರಾಮ್ ಲುಭಾಯಾ ನೇತೃತ್ವದ ಸಮಿತಿಯ ಸಂಶೋಧನೆಗಳ ಆಧಾರದ ಮೇಲೆ ಹೊಸ ಜಿಲ್ಲೆಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿತ್ತು ಎಂದು ಗೆಹ್ಲೋಟ್ ಹೇಳಿದ್ದು, “ಹೊಸ ಜಿಲ್ಲೆಗಳು ರಚನೆಯಾಗುವ ಮೊದಲು ರಾಜಸ್ಥಾನದ ಪ್ರತಿ ಜಿಲ್ಲೆಯ ಸರಾಸರಿ ಜನಸಂಖ್ಯೆ 35.42 ಲಕ್ಷ ಇತ್ತು. ಹೊಸ ಜಿಲ್ಲೆಗಳ ರಚನೆಯ ನಂತರ ಈ ಸಂಖ್ಯೆ 15.35 ಲಕ್ಷಕ್ಕೆ ಇಳಿದಿದೆ. ಮಧ್ಯಪ್ರದೇಶವು ರಾಜಸ್ಥಾನಕ್ಕಿಂತ ಚಿಕ್ಕದಾದರೂ 53 ಜಿಲ್ಲೆಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...