Homeಮುಖಪುಟರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

ರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

- Advertisement -
- Advertisement -

ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 12 ಹೊಸ ಜಿಲ್ಲೆಗಳನ್ನು ಮತ್ತು ಮೂರು ಹೊಸ ವಿಭಾಗಗಳನ್ನು ರಾಜಸ್ಥಾನದ ಬಿಜೆಪಿ ಸರ್ಕಾರ ಶನಿವಾರ ರದ್ದುಗೊಳಿಸಿದೆ. ಅದಾಗ್ಯೂ, ಕಳೆದ ವರ್ಷ ಕಾಂಗ್ರೆಸ್‌ ಅವಧಿಯಲ್ಲಿ ರಚನೆಯಾಗಿದ್ದ ಎಂಟು ಜಿಲ್ಲೆಗಳನ್ನು ಸರ್ಕಾರ ಹಾಗೆ ಉಳಿಸಿಕೊಂಡಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದ್ದು, ರಾಜಕೀಯವಾಗಿ ಸೇಡಿನ ನಿರ್ಧಾರ ಎಂದು ಬಣ್ಣಿಸಿದೆ. ರಾಜಸ್ಥಾನ

ಮಾರ್ಚ್ 2023 ರಲ್ಲಿ, ಕಾಂಗ್ರೆಸ್‌ನ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯ ಸರ್ಕಾರವು 19 ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗೀಯ ಕೇಂದ್ರಗಳ ರಚನೆಯನ್ನು ಘೋಷಿಸಿತ್ತು. ಈ ವೇಳೆ ಜೈಪುರ ಮತ್ತು ಜೋಧಪುರ ಜಿಲ್ಲೆಗಳನ್ನು ತಲಾ ಎರಡು ಚಿಕ್ಕ ಜಿಲ್ಲೆಗಳಾಗಿ ವಿಂಗಡಿಸಲಾಗಿತ್ತು. ಹಾಗಾಗಿ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆಯು 33 ರಿಂದ 50 ಕ್ಕೆ ಏರಿಕೆಯಾಗಿತ್ತು. ಕಾಂಗ್ರೆಸ್ ಸರ್ಕಾರವು ಪಾಲಿ, ಸಿಕಾರ್ ಮತ್ತು ಬನ್ಸ್ವಾರಾ ಎಂಬ ಮೂರು ಹೊಸ ವಿಭಾಗಗಳನ್ನು ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಅಕ್ಟೋಬರ್ 6 ರಂದು, ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು, ಕಾಂಗ್ರೆಸ್ ಸರ್ಕಾರವು ಮತ್ತೆ ಮೂರು ಜಿಲ್ಲೆಗಳಾದ ಮಾಲ್‌ಪುರ, ಸುಜನ್‌ಗಢ ಮತ್ತು ಕುಚಮನ್‌ಗಳನ್ನು ರಚಿಸಿತ್ತು, ಹಾಗಾಗಿ ರಾಜ್ಯದ ಒಟ್ಟು ಜಿಲ್ಲೆಗಳ ಸಂಖ್ಯೆ 53 ಕ್ಕೆ ತಲುಪಿಸಿತ್ತು.

ಶನಿವಾರ, ರಾಜ್ಯದ ಬಿಜೆಪಿ ಸರ್ಕಾರವು ಅನುಪಗಢ, ದುಡು, ಗಂಗಾಪುರ ನಗರ, ಜೈಪುರ ಗ್ರಾಮಾಂತರ, ಜೋಧ್‌ಪುರ ಗ್ರಾಮಾಂತರ, ಕೇಕ್ರಿ, ನೀಮ್ ಕಾ ಥಾನಾ, ಸಂಚೋರ್ ಮತ್ತು ಶಹಪುರ ಜಿಲ್ಲೆಗಳನ್ನು ರದ್ದುಗೊಳಿಸಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಘೋಷಣೆಯಾದ ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್-ತಿಜಾರಾ, ಫಲೋಡಿ ಮತ್ತು ಸಲುಂಭರ್ ಅನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಶನಿವಾರ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಅವರು ಮಾತನಾಡಿ, ಅಕ್ಟೋಬರ್‌ನಲ್ಲಿ ಘೋಷಿಸಲಾದ ಮಾಲ್‌ಪುರ, ಸುಜನ್‌ಗಢ್ ಮತ್ತು ಕೂಚಮನ್ ರಚನೆಯ ಕುರಿತು ಹಿಂದಿನ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ಆರೋಪಿಸಿದ್ದಾರೆ. ಇದರೊಂದಿಗೆ, ರಾಜಸ್ಥಾನವು ಈಗ 41 ಜಿಲ್ಲೆಗಳು ಮತ್ತು ಏಳು ವಿಭಾಗಗಳನ್ನು ಹೊಂದಿದೆ. ರಾಜಸ್ಥಾನ

ಕಾಂಗ್ರೆಸ್ ಸರ್ಕಾರವು ರಾಜಕೀಯ ಲಾಭಕ್ಕಾಗಿ ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸಿದೆ ಎಂದು ಪಟೇಲ್ ಆರೋಪಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರವು ಆರ್ಥಿಕ ಸಂಪನ್ಮೂಲಗಳ ಲಭ್ಯತೆ, ಆಡಳಿತಾತ್ಮಕ ಅವಶ್ಯಕತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾಂಸ್ಕೃತಿಕ ಸಾಮರಸ್ಯದಂತಹ ಅಂಶಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸುವ ಅಗತ್ಯವಿದೆಯೇ ಎಂದು ಪರಿಶೀಲಿಸಲು ರಾಜ್ಯ ಸರ್ಕಾರವು ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ ಲಲಿತ್ ಕೆ ಪನ್ವಾರ್ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ಮತ್ತು ತಜ್ಞರ ಸಮಿತಿಯನ್ನು ರಚಿಸಿತ್ತು.

ತಮ್ಮ ಆಡಳಿತದ ನಿರ್ಧಾರವನ್ನು ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಆಡಳಿತಾತ್ಮಕ ದಕ್ಷತೆಯ ದೃಷ್ಟಿಯಿಂದ ಸಣ್ಣ ಜಿಲ್ಲೆಗಳು ಉತ್ತಮವಾಗಿವೆ ಎಂದು ಹೇಳಿದ್ದಾರೆ. “ಬಿಜೆಪಿ ಸರ್ಕಾರದ ರಾಜಕೀಯವಾಗಿ ಸೇಡಿನ ನಿರ್ಧಾರವನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ನಿವೃತ್ತ ಅಧಿಕಾರಿ ರಾಮ್ ಲುಭಾಯಾ ನೇತೃತ್ವದ ಸಮಿತಿಯ ಸಂಶೋಧನೆಗಳ ಆಧಾರದ ಮೇಲೆ ಹೊಸ ಜಿಲ್ಲೆಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿತ್ತು ಎಂದು ಗೆಹ್ಲೋಟ್ ಹೇಳಿದ್ದು, “ಹೊಸ ಜಿಲ್ಲೆಗಳು ರಚನೆಯಾಗುವ ಮೊದಲು ರಾಜಸ್ಥಾನದ ಪ್ರತಿ ಜಿಲ್ಲೆಯ ಸರಾಸರಿ ಜನಸಂಖ್ಯೆ 35.42 ಲಕ್ಷ ಇತ್ತು. ಹೊಸ ಜಿಲ್ಲೆಗಳ ರಚನೆಯ ನಂತರ ಈ ಸಂಖ್ಯೆ 15.35 ಲಕ್ಷಕ್ಕೆ ಇಳಿದಿದೆ. ಮಧ್ಯಪ್ರದೇಶವು ರಾಜಸ್ಥಾನಕ್ಕಿಂತ ಚಿಕ್ಕದಾದರೂ 53 ಜಿಲ್ಲೆಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...