Homeಮುಖಪುಟರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

ರಾಜಸ್ಥಾನ | ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ 12 ಜಿಲ್ಲೆಗಳನ್ನು ರದ್ದು ಮಾಡಿದ ಬಿಜೆಪಿ!

- Advertisement -
- Advertisement -

ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 12 ಹೊಸ ಜಿಲ್ಲೆಗಳನ್ನು ಮತ್ತು ಮೂರು ಹೊಸ ವಿಭಾಗಗಳನ್ನು ರಾಜಸ್ಥಾನದ ಬಿಜೆಪಿ ಸರ್ಕಾರ ಶನಿವಾರ ರದ್ದುಗೊಳಿಸಿದೆ. ಅದಾಗ್ಯೂ, ಕಳೆದ ವರ್ಷ ಕಾಂಗ್ರೆಸ್‌ ಅವಧಿಯಲ್ಲಿ ರಚನೆಯಾಗಿದ್ದ ಎಂಟು ಜಿಲ್ಲೆಗಳನ್ನು ಸರ್ಕಾರ ಹಾಗೆ ಉಳಿಸಿಕೊಂಡಿದೆ. ಬಿಜೆಪಿ ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ವಿರೋಧಿಸಿದ್ದು, ರಾಜಕೀಯವಾಗಿ ಸೇಡಿನ ನಿರ್ಧಾರ ಎಂದು ಬಣ್ಣಿಸಿದೆ. ರಾಜಸ್ಥಾನ

ಮಾರ್ಚ್ 2023 ರಲ್ಲಿ, ಕಾಂಗ್ರೆಸ್‌ನ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯ ಸರ್ಕಾರವು 19 ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗೀಯ ಕೇಂದ್ರಗಳ ರಚನೆಯನ್ನು ಘೋಷಿಸಿತ್ತು. ಈ ವೇಳೆ ಜೈಪುರ ಮತ್ತು ಜೋಧಪುರ ಜಿಲ್ಲೆಗಳನ್ನು ತಲಾ ಎರಡು ಚಿಕ್ಕ ಜಿಲ್ಲೆಗಳಾಗಿ ವಿಂಗಡಿಸಲಾಗಿತ್ತು. ಹಾಗಾಗಿ ರಾಜಸ್ಥಾನದ ಒಟ್ಟು ಜಿಲ್ಲೆಗಳ ಸಂಖ್ಯೆಯು 33 ರಿಂದ 50 ಕ್ಕೆ ಏರಿಕೆಯಾಗಿತ್ತು. ಕಾಂಗ್ರೆಸ್ ಸರ್ಕಾರವು ಪಾಲಿ, ಸಿಕಾರ್ ಮತ್ತು ಬನ್ಸ್ವಾರಾ ಎಂಬ ಮೂರು ಹೊಸ ವಿಭಾಗಗಳನ್ನು ಘೋಷಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳೆದ ವರ್ಷ ಅಕ್ಟೋಬರ್ 6 ರಂದು, ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಒಂದು ದಿನದ ಮೊದಲು, ಕಾಂಗ್ರೆಸ್ ಸರ್ಕಾರವು ಮತ್ತೆ ಮೂರು ಜಿಲ್ಲೆಗಳಾದ ಮಾಲ್‌ಪುರ, ಸುಜನ್‌ಗಢ ಮತ್ತು ಕುಚಮನ್‌ಗಳನ್ನು ರಚಿಸಿತ್ತು, ಹಾಗಾಗಿ ರಾಜ್ಯದ ಒಟ್ಟು ಜಿಲ್ಲೆಗಳ ಸಂಖ್ಯೆ 53 ಕ್ಕೆ ತಲುಪಿಸಿತ್ತು.

ಶನಿವಾರ, ರಾಜ್ಯದ ಬಿಜೆಪಿ ಸರ್ಕಾರವು ಅನುಪಗಢ, ದುಡು, ಗಂಗಾಪುರ ನಗರ, ಜೈಪುರ ಗ್ರಾಮಾಂತರ, ಜೋಧ್‌ಪುರ ಗ್ರಾಮಾಂತರ, ಕೇಕ್ರಿ, ನೀಮ್ ಕಾ ಥಾನಾ, ಸಂಚೋರ್ ಮತ್ತು ಶಹಪುರ ಜಿಲ್ಲೆಗಳನ್ನು ರದ್ದುಗೊಳಿಸಿದೆ. ಆದಾಗ್ಯೂ, ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಘೋಷಣೆಯಾದ ಬಲೋತ್ರಾ, ಬೇವಾರ್, ದೀಗ್, ದಿದ್ವಾನಾ-ಕುಚಮನ್, ಕೊಟ್‌ಪುಟ್ಲಿ-ಬೆಹ್ರೋರ್, ಖೈರ್ತಾಲ್-ತಿಜಾರಾ, ಫಲೋಡಿ ಮತ್ತು ಸಲುಂಭರ್ ಅನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಶನಿವಾರ ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಜೋಗರಾಮ್ ಪಟೇಲ್ ಅವರು ಮಾತನಾಡಿ, ಅಕ್ಟೋಬರ್‌ನಲ್ಲಿ ಘೋಷಿಸಲಾದ ಮಾಲ್‌ಪುರ, ಸುಜನ್‌ಗಢ್ ಮತ್ತು ಕೂಚಮನ್ ರಚನೆಯ ಕುರಿತು ಹಿಂದಿನ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ಆರೋಪಿಸಿದ್ದಾರೆ. ಇದರೊಂದಿಗೆ, ರಾಜಸ್ಥಾನವು ಈಗ 41 ಜಿಲ್ಲೆಗಳು ಮತ್ತು ಏಳು ವಿಭಾಗಗಳನ್ನು ಹೊಂದಿದೆ. ರಾಜಸ್ಥಾನ

ಕಾಂಗ್ರೆಸ್ ಸರ್ಕಾರವು ರಾಜಕೀಯ ಲಾಭಕ್ಕಾಗಿ ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸಿದೆ ಎಂದು ಪಟೇಲ್ ಆರೋಪಿಸಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರವು ಆರ್ಥಿಕ ಸಂಪನ್ಮೂಲಗಳ ಲಭ್ಯತೆ, ಆಡಳಿತಾತ್ಮಕ ಅವಶ್ಯಕತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾಂಸ್ಕೃತಿಕ ಸಾಮರಸ್ಯದಂತಹ ಅಂಶಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಹೊಸ ಜಿಲ್ಲೆಗಳು ಮತ್ತು ವಿಭಾಗಗಳನ್ನು ರಚಿಸುವ ಅಗತ್ಯವಿದೆಯೇ ಎಂದು ಪರಿಶೀಲಿಸಲು ರಾಜ್ಯ ಸರ್ಕಾರವು ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿ ಲಲಿತ್ ಕೆ ಪನ್ವಾರ್ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ ಮತ್ತು ತಜ್ಞರ ಸಮಿತಿಯನ್ನು ರಚಿಸಿತ್ತು.

ತಮ್ಮ ಆಡಳಿತದ ನಿರ್ಧಾರವನ್ನು ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್, ಆಡಳಿತಾತ್ಮಕ ದಕ್ಷತೆಯ ದೃಷ್ಟಿಯಿಂದ ಸಣ್ಣ ಜಿಲ್ಲೆಗಳು ಉತ್ತಮವಾಗಿವೆ ಎಂದು ಹೇಳಿದ್ದಾರೆ. “ಬಿಜೆಪಿ ಸರ್ಕಾರದ ರಾಜಕೀಯವಾಗಿ ಸೇಡಿನ ನಿರ್ಧಾರವನ್ನು ನಾವು ಖಂಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ನಿವೃತ್ತ ಅಧಿಕಾರಿ ರಾಮ್ ಲುಭಾಯಾ ನೇತೃತ್ವದ ಸಮಿತಿಯ ಸಂಶೋಧನೆಗಳ ಆಧಾರದ ಮೇಲೆ ಹೊಸ ಜಿಲ್ಲೆಗಳನ್ನು ರಚಿಸಲು ತಮ್ಮ ಸರ್ಕಾರ ನಿರ್ಧರಿಸಿತ್ತು ಎಂದು ಗೆಹ್ಲೋಟ್ ಹೇಳಿದ್ದು, “ಹೊಸ ಜಿಲ್ಲೆಗಳು ರಚನೆಯಾಗುವ ಮೊದಲು ರಾಜಸ್ಥಾನದ ಪ್ರತಿ ಜಿಲ್ಲೆಯ ಸರಾಸರಿ ಜನಸಂಖ್ಯೆ 35.42 ಲಕ್ಷ ಇತ್ತು. ಹೊಸ ಜಿಲ್ಲೆಗಳ ರಚನೆಯ ನಂತರ ಈ ಸಂಖ್ಯೆ 15.35 ಲಕ್ಷಕ್ಕೆ ಇಳಿದಿದೆ. ಮಧ್ಯಪ್ರದೇಶವು ರಾಜಸ್ಥಾನಕ್ಕಿಂತ ಚಿಕ್ಕದಾದರೂ 53 ಜಿಲ್ಲೆಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ಬಿಹಾರ ನಾಗರಿಕ ಸೇವಾ ಆಕಾಂಕ್ಷಿಗಳ ಪ್ರತಿಭಟನೆ: ಪ್ರಶಾಂತ್ ಕಿಶೋರ್  ವಿರುದ್ಧ ದೂರು ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...