Homeದಲಿತ್ ಫೈಲ್ಸ್ರಾಜಸ್ಥಾನ: ದಲಿತ ಬಾಲಕನ ಸಾವಿನ ಹೊಣೆಹೊತ್ತು ಕಾಂಗ್ರೆಸ್ ಶಾಸಕನ ರಾಜೀನಾಮೆ

ರಾಜಸ್ಥಾನ: ದಲಿತ ಬಾಲಕನ ಸಾವಿನ ಹೊಣೆಹೊತ್ತು ಕಾಂಗ್ರೆಸ್ ಶಾಸಕನ ರಾಜೀನಾಮೆ

- Advertisement -
- Advertisement -

ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ 9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆಯ ಹೊಣೆಹೊತ್ತು ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಮ್ಮ ಸಮುದಾಯದ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗದಿದ್ದಾಗ ಶಾಸಕ ಸ್ಥಾನದಲ್ಲಿ ಮುಂದುವರೆಯುವ ಹಕ್ಕಿಲ್ಲ ಎಂದು ಅವರು ಸಿಎಂ ಅಶೋಕ್ ಗೆಹ್ಲೋಟ್‌ಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಉಲ್ಲೆಖಿಸಿದ್ದಾರೆ.

ಜುಲೈ 20 ರಂದು ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ಇಂದ್ರ ಕುಮಾರ್ ಎಂಬ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದನು. ತೀವ್ರವಾಗಿ ಗಾಯಗೊಂಡಿದ್ದ ಮಗು ಅಹಮದಾಬಾದ್ ಆಸ್ಪತ್ರೆಯಲ್ಲಿ ಸಾವನಪ್ಪಿದ ಎರಡು ದಿನದ ನಂತರ ಬರನ್-ಅತ್ರು ಕ್ಷೇತ್ರದ ಶಾಸಕ ರಾಜೀನಾಮೆ ನೀಡಿದ್ದಾರೆ.

“ನಮ್ಮ ಸಮುದಾಯದ ಹಕ್ಕುಗಳನ್ನು ರಕ್ಷಿಸಲು ನಾವು ವಿಫಲರಾದಾಗ… ಹುದ್ದೆಯಲ್ಲಿ ಉಳಿಯಲು ನಮಗೆ ಯಾವುದೇ ಹಕ್ಕಿಲ್ಲ. ನನ್ನ ಮನದಾಳದ ಮಾತನ್ನು ಆಲಿಸಿದ ನಂತರ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಇದರಿಂದ ನಾನು ಯಾವುದೇ ಸ್ಥಾನವಿಲ್ಲದೆ ಸಮುದಾಯಕ್ಕೆ ಸೇವೆ ಸಲ್ಲಿಸುತ್ತೇನೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ದೇಶವು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದರೂ, ದಲಿತರು ಮತ್ತು ಇತರ ವಂಚಿತ ವರ್ಗಗಳ ಮೇಲಿನ ದೌರ್ಜನ್ಯಗಳು ಮುಂದುವರಿದಿವೆ. ಈ ದೌರ್ಜನ್ಯವನ್ನು ನೋಡಿ ನನಗೆ ನೋವಾಗಿದೆ, ನನ್ನ ಸಮುದಾಯವನ್ನು ಹಿಂಸಿಸುತ್ತಿರುವ ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಶಾಸಕ ಪನಾ ಚಂದ್ ಮೇಘವಾಲ್ ನೋವು ತೋಡಿಕೊಂಡಿದ್ದಾರೆ.

ದಲಿತರು ಕೊಡ ಮುಟ್ಟಿದರೆ ಕೊಲ್ಲುತ್ತಾರೆ. ದಲಿತರು ಮದುವೆಯಲ್ಲಿ ಕುದುರೆ ಸವಾರಿ ನಡೆಸಿದರೆ, ಮೀಸೆ ಬಿಟ್ಟರೆ ಕೊಲ್ಲುತ್ತಾರೆ. ಪ್ರಕರಣ ದಾಖಲಿಸಿದರೂ ಪೊಲೀಸರು ಬಿ ರಿಪೋರ್ಟ್ ಹಾಕಿ ಕೇಸು ಮುಚ್ಚಿ ಹಾಕುತ್ತಿದ್ದಾರೆ. ನ್ಯಾಯಾಂಗ ವ್ಯವಸ್ಥೆಯ ವಿಳಂಬ ನೀತಿ ಅನುಸರಿಸುತ್ತಿದೆ. ಕೆಲವು ವರ್ಷಗಳಿಂದ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಸಂವಿಧಾನದತ್ತವಾಗಿರುವ ಹಕ್ಕುಗಳನ್ನು ರಕ್ಷಿಸಲು ಯಾರೂ ಮುಂದೆ ಬರುತ್ತಿಲ್ಲ. ಈ ಕುರಿತು ಅಸೆಂಬ್ಲಿಯಲ್ಲಿ ನಾನು ಹಲವಾರು ದನಿ ಎತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಪ್ರಕರಣದ ತನಿಖೆ ನಡೆಯುತ್ತಿದೆ. ಆರೋಪಿ ಚೈಲ್ ಸಿಂಗ್ ಎಂಬ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಗ್ರಾಮಕ್ಕೆ ಎಸ್‌ಸಿ/ಎಸ್‌ಟಿ ಆಯೋಗದ ಅಧ್ಯಕ್ಷರು ಭೇಟಿ ನೀಡಿದ್ದಾರೆ. ಸರ್ಕಾರ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದೆ.

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಿಕೆ ಸವರ್ಣೀಯ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದಾರೆ.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದು, “ಜಲೋರ್‌ನ ಸೈಲಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ ಮಗುವನ್ನು ಥಳಿಸಿದ ಕಾರಣ ಸಾವು ಸಂಭವಿಸಿದೆ. ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ಕಾಂಗ್ರೆಸ್ ಶಾಸಕ ಈಗಾಗಲೇ ಬಿಜೆಪಿ ಸೇರಲು ಎಲ್ಲಾ ವ್ಯವಸ್ಥೆ ಮಾಡಿ ಆಗಿದೆ ಪಾಪ 😢😢😢. ಬಿ ಜೆ ಪಿ ಸೇರಲು ಅವನಿಗೆ ಒಂದು ಪಿಳ್ಳೆ ನೆವ ಬೇಕಿತ್ತು ಅಷ್ಟೆ!!☺️☺️

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...