Homeಮುಖಪುಟಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

- Advertisement -
- Advertisement -

ಈಗ ಮದುವೆಗಳಲ್ಲಿ ವಿವಾಹ ಪೂರ್ವ ವಿಡಿಯೋ ಚಿತ್ರೀಕರಣ (ಪ್ರಿ ವೆಡ್ಡಿಂಗ್ ಶೂಟ್) ಮಾಡಿಸುವುದು ಸಾಮಾನ್ಯ ಸಂಗತಿಯಾಗಿದೆ. 5 ರಿಂದ 10 ನಿಮಿಷ ಇರುವ ವಿಡಿಯೊಗಾಗಿಯೇ ಲಕ್ಷ ಲಕ್ಷ ಹಣ ಖರ್ಚು ಮಾಡುತ್ತಾರೆ. ಜನಪ್ರಿಯ ಸಿನಿಮಾ ಹಾಡೋಂದನ್ನು ಹಿನ್ನೆಲೆಯಾಗಿ ಬಳಸಿ ಚೆಂದ ಚೆಂದ ಬಟ್ಟೆ ಧರಿಸಿ ಸಿನಿಮಾ ಹಾಡಿನಂತೆಯೇ ವಿಡಿಯೋ ಮಾಡಿ, ನೋಡಿ ಜನ ಖುಷಿ ಪಡುತ್ತಾರೆ..

ಇದೇ ರೀತಿ ರಾಜಸ್ಥಾನದ ಪೊಲೀಸ್ ಒಬ್ಬ ತನ್ನ ಮದುವೆಯಲ್ಲಿ ತಮಾಷೆ ಮಾಡಲು ಹೋಗಿ ತನ್ನ ಕೆಲಸವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದ್ದಾನೆ. ಅಷ್ಟಕ್ಕೂ ಈತ ಮಾಡಿ ತಪ್ಪು ಏನು ಗೊತ್ತೆ? ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮಾಡಿದ ತಪ್ಪು ಇಲ್ಲಿದೆ ನೋಡಿ.

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮದುಮಗ ಪೊಲೀಸ್ ಸಮವಸ್ತ್ರದಲ್ಲಿ ನಿಂತಿರುತ್ತಾನೆ. ಮದುಮಗಳು ಹೆಲ್ಮೆಟ್ ಧರಿಸದೇ ಸ್ಕೂಟರ್ ನಲ್ಲಿ ಬರುತ್ತಾಳೆ. ಅವನು ಕೂಡಲೇ ಅವಳನ್ನು ನಿಲ್ಲಿಸಿ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದಕ್ಕಾಗಿ ದಂಡ ವಿಧಿಸುತ್ತಾನೆ.

ಆಗ ಆಕೆ ಲಂಚವನ್ನು ಕೈಗೆ ಕೊಡದೇ ಆತನ ಜೇಬಿಗೆ ಹಾಕುತ್ತಾಳೆ ಮತ್ತು ಆತನ ಇಡೀ ಕೈಚೀಲವನ್ನು (ಪರ್ಸ್) ತೆಗೆದುಕೊಂಡು ಹೋಗುತ್ತಾಳೆ. ಆಗ ಆತ ಅವಳತ್ತ ಓಡಿ ತನ್ನ ಕೈಚೀಲ ಪಡೆದುಕೊಳ್ಳಲು ಪ್ರಯತ್ನಿಸುತ್ತಾನೆ, ಅವಳು ನಿರಾಕರಿಸುತ್ತಾಳೆ ಈಗೆ ಅವರು ಪ್ರೀತಿಯಲ್ಲಿ ಬೀಳುತ್ತಾರೆ..

ಥೇಟ್ ಬಾಲಿವುಡ್ ಹಾಡಿನ ಶೈಲಿಯಲ್ಲಿ ಮಾಡಲಾದ ಈ ಮನಮೋಹಕ ಹಾಡನ್ನು ಮಧುಮಗ ಪೊಲೀಸ್ ಧನಪತ್ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾನೆ. ಹಾಡು ಎಲ್ಲೆಡೆ ಹರಿದಾಡಿ ಕೊನೆಗೆ ಪೊಲೀಸ್ ಅಧಿಕಾರಿಗಳಿಗೂ ತಲುಪಿದೆ. ನೋಡಿದ ಕೂಡಲೇ ಕೆಂಡಾಮಂಡಲರಾದ ಅಧಿಕಾರಿಗಳು ಧನಪತ್ ಗೆ ಕರೆಕಳಿಸಿದ್ದಾರೆ.

ಉದಯಪುರ ಜಿಲ್ಲೆಯಲ್ಲಿ ಪೋಸ್ಟ್ ಮಾಡಲಾದ ಧನಪತ್ ಅವರ ಪೂರ್ವ ವಿವಾಹದ ಚಿತ್ರೀಕರಣವು ಅವರು ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮತ್ತು ಲಂಚ ಪಡೆಯುತ್ತಿರುವುದು ಇಡೀ ಇಲಾಖೆಗೆ ಅಗೌರವ ಎಂದು ಭಾವಿಸಿ ಆತನ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಐಜಿಯಾದ ಡಾ.ಹವಾ ಸಿಂಗ್ ಘೋಮರಿಯಾ ಅವರು ಎಲ್ಲಾ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್‌ಗಳಿಗೆ ನೀಡಿದ ನೋಟಿಸ್‌ನಲ್ಲಿ “ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಅಪರಾಧ ಮಾಡುವ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಲಂಚ ಪಡೆಯುತ್ತಿರುವುದನ್ನು ಸಾರ್ವತ್ರಿಕರಣಗೊಳಿಸಿರುವುದರಿಂದ ಇದು ಪೊಲೀಸ್ ಇಲಾಖೆಯ ಚಿತ್ರಣವನ್ನು ಹಾಳು ಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯು ದೊಡ್ಡ ಎಚ್ಚರಿಕೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕೆಂಬ ಆದೇಶ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಕ ಪಡೆಯುವ ಅದಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

  2. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಚ ಪಡೆಯುವ ಅಧಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...