Homeಮುಖಪುಟಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

- Advertisement -
- Advertisement -

ಈಗ ಮದುವೆಗಳಲ್ಲಿ ವಿವಾಹ ಪೂರ್ವ ವಿಡಿಯೋ ಚಿತ್ರೀಕರಣ (ಪ್ರಿ ವೆಡ್ಡಿಂಗ್ ಶೂಟ್) ಮಾಡಿಸುವುದು ಸಾಮಾನ್ಯ ಸಂಗತಿಯಾಗಿದೆ. 5 ರಿಂದ 10 ನಿಮಿಷ ಇರುವ ವಿಡಿಯೊಗಾಗಿಯೇ ಲಕ್ಷ ಲಕ್ಷ ಹಣ ಖರ್ಚು ಮಾಡುತ್ತಾರೆ. ಜನಪ್ರಿಯ ಸಿನಿಮಾ ಹಾಡೋಂದನ್ನು ಹಿನ್ನೆಲೆಯಾಗಿ ಬಳಸಿ ಚೆಂದ ಚೆಂದ ಬಟ್ಟೆ ಧರಿಸಿ ಸಿನಿಮಾ ಹಾಡಿನಂತೆಯೇ ವಿಡಿಯೋ ಮಾಡಿ, ನೋಡಿ ಜನ ಖುಷಿ ಪಡುತ್ತಾರೆ..

ಇದೇ ರೀತಿ ರಾಜಸ್ಥಾನದ ಪೊಲೀಸ್ ಒಬ್ಬ ತನ್ನ ಮದುವೆಯಲ್ಲಿ ತಮಾಷೆ ಮಾಡಲು ಹೋಗಿ ತನ್ನ ಕೆಲಸವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದ್ದಾನೆ. ಅಷ್ಟಕ್ಕೂ ಈತ ಮಾಡಿ ತಪ್ಪು ಏನು ಗೊತ್ತೆ? ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮಾಡಿದ ತಪ್ಪು ಇಲ್ಲಿದೆ ನೋಡಿ.

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮದುಮಗ ಪೊಲೀಸ್ ಸಮವಸ್ತ್ರದಲ್ಲಿ ನಿಂತಿರುತ್ತಾನೆ. ಮದುಮಗಳು ಹೆಲ್ಮೆಟ್ ಧರಿಸದೇ ಸ್ಕೂಟರ್ ನಲ್ಲಿ ಬರುತ್ತಾಳೆ. ಅವನು ಕೂಡಲೇ ಅವಳನ್ನು ನಿಲ್ಲಿಸಿ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದಕ್ಕಾಗಿ ದಂಡ ವಿಧಿಸುತ್ತಾನೆ.

ಆಗ ಆಕೆ ಲಂಚವನ್ನು ಕೈಗೆ ಕೊಡದೇ ಆತನ ಜೇಬಿಗೆ ಹಾಕುತ್ತಾಳೆ ಮತ್ತು ಆತನ ಇಡೀ ಕೈಚೀಲವನ್ನು (ಪರ್ಸ್) ತೆಗೆದುಕೊಂಡು ಹೋಗುತ್ತಾಳೆ. ಆಗ ಆತ ಅವಳತ್ತ ಓಡಿ ತನ್ನ ಕೈಚೀಲ ಪಡೆದುಕೊಳ್ಳಲು ಪ್ರಯತ್ನಿಸುತ್ತಾನೆ, ಅವಳು ನಿರಾಕರಿಸುತ್ತಾಳೆ ಈಗೆ ಅವರು ಪ್ರೀತಿಯಲ್ಲಿ ಬೀಳುತ್ತಾರೆ..

ಥೇಟ್ ಬಾಲಿವುಡ್ ಹಾಡಿನ ಶೈಲಿಯಲ್ಲಿ ಮಾಡಲಾದ ಈ ಮನಮೋಹಕ ಹಾಡನ್ನು ಮಧುಮಗ ಪೊಲೀಸ್ ಧನಪತ್ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾನೆ. ಹಾಡು ಎಲ್ಲೆಡೆ ಹರಿದಾಡಿ ಕೊನೆಗೆ ಪೊಲೀಸ್ ಅಧಿಕಾರಿಗಳಿಗೂ ತಲುಪಿದೆ. ನೋಡಿದ ಕೂಡಲೇ ಕೆಂಡಾಮಂಡಲರಾದ ಅಧಿಕಾರಿಗಳು ಧನಪತ್ ಗೆ ಕರೆಕಳಿಸಿದ್ದಾರೆ.

ಉದಯಪುರ ಜಿಲ್ಲೆಯಲ್ಲಿ ಪೋಸ್ಟ್ ಮಾಡಲಾದ ಧನಪತ್ ಅವರ ಪೂರ್ವ ವಿವಾಹದ ಚಿತ್ರೀಕರಣವು ಅವರು ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮತ್ತು ಲಂಚ ಪಡೆಯುತ್ತಿರುವುದು ಇಡೀ ಇಲಾಖೆಗೆ ಅಗೌರವ ಎಂದು ಭಾವಿಸಿ ಆತನ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಐಜಿಯಾದ ಡಾ.ಹವಾ ಸಿಂಗ್ ಘೋಮರಿಯಾ ಅವರು ಎಲ್ಲಾ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್‌ಗಳಿಗೆ ನೀಡಿದ ನೋಟಿಸ್‌ನಲ್ಲಿ “ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಅಪರಾಧ ಮಾಡುವ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಲಂಚ ಪಡೆಯುತ್ತಿರುವುದನ್ನು ಸಾರ್ವತ್ರಿಕರಣಗೊಳಿಸಿರುವುದರಿಂದ ಇದು ಪೊಲೀಸ್ ಇಲಾಖೆಯ ಚಿತ್ರಣವನ್ನು ಹಾಳು ಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯು ದೊಡ್ಡ ಎಚ್ಚರಿಕೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕೆಂಬ ಆದೇಶ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಕ ಪಡೆಯುವ ಅದಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

  2. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಚ ಪಡೆಯುವ ಅಧಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

LEAVE A REPLY

Please enter your comment!
Please enter your name here

- Advertisment -

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...