Homeಮುಖಪುಟಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

- Advertisement -
- Advertisement -

ಈಗ ಮದುವೆಗಳಲ್ಲಿ ವಿವಾಹ ಪೂರ್ವ ವಿಡಿಯೋ ಚಿತ್ರೀಕರಣ (ಪ್ರಿ ವೆಡ್ಡಿಂಗ್ ಶೂಟ್) ಮಾಡಿಸುವುದು ಸಾಮಾನ್ಯ ಸಂಗತಿಯಾಗಿದೆ. 5 ರಿಂದ 10 ನಿಮಿಷ ಇರುವ ವಿಡಿಯೊಗಾಗಿಯೇ ಲಕ್ಷ ಲಕ್ಷ ಹಣ ಖರ್ಚು ಮಾಡುತ್ತಾರೆ. ಜನಪ್ರಿಯ ಸಿನಿಮಾ ಹಾಡೋಂದನ್ನು ಹಿನ್ನೆಲೆಯಾಗಿ ಬಳಸಿ ಚೆಂದ ಚೆಂದ ಬಟ್ಟೆ ಧರಿಸಿ ಸಿನಿಮಾ ಹಾಡಿನಂತೆಯೇ ವಿಡಿಯೋ ಮಾಡಿ, ನೋಡಿ ಜನ ಖುಷಿ ಪಡುತ್ತಾರೆ..

ಇದೇ ರೀತಿ ರಾಜಸ್ಥಾನದ ಪೊಲೀಸ್ ಒಬ್ಬ ತನ್ನ ಮದುವೆಯಲ್ಲಿ ತಮಾಷೆ ಮಾಡಲು ಹೋಗಿ ತನ್ನ ಕೆಲಸವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದ್ದಾನೆ. ಅಷ್ಟಕ್ಕೂ ಈತ ಮಾಡಿ ತಪ್ಪು ಏನು ಗೊತ್ತೆ? ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮಾಡಿದ ತಪ್ಪು ಇಲ್ಲಿದೆ ನೋಡಿ.

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮದುಮಗ ಪೊಲೀಸ್ ಸಮವಸ್ತ್ರದಲ್ಲಿ ನಿಂತಿರುತ್ತಾನೆ. ಮದುಮಗಳು ಹೆಲ್ಮೆಟ್ ಧರಿಸದೇ ಸ್ಕೂಟರ್ ನಲ್ಲಿ ಬರುತ್ತಾಳೆ. ಅವನು ಕೂಡಲೇ ಅವಳನ್ನು ನಿಲ್ಲಿಸಿ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದಕ್ಕಾಗಿ ದಂಡ ವಿಧಿಸುತ್ತಾನೆ.

ಆಗ ಆಕೆ ಲಂಚವನ್ನು ಕೈಗೆ ಕೊಡದೇ ಆತನ ಜೇಬಿಗೆ ಹಾಕುತ್ತಾಳೆ ಮತ್ತು ಆತನ ಇಡೀ ಕೈಚೀಲವನ್ನು (ಪರ್ಸ್) ತೆಗೆದುಕೊಂಡು ಹೋಗುತ್ತಾಳೆ. ಆಗ ಆತ ಅವಳತ್ತ ಓಡಿ ತನ್ನ ಕೈಚೀಲ ಪಡೆದುಕೊಳ್ಳಲು ಪ್ರಯತ್ನಿಸುತ್ತಾನೆ, ಅವಳು ನಿರಾಕರಿಸುತ್ತಾಳೆ ಈಗೆ ಅವರು ಪ್ರೀತಿಯಲ್ಲಿ ಬೀಳುತ್ತಾರೆ..

ಥೇಟ್ ಬಾಲಿವುಡ್ ಹಾಡಿನ ಶೈಲಿಯಲ್ಲಿ ಮಾಡಲಾದ ಈ ಮನಮೋಹಕ ಹಾಡನ್ನು ಮಧುಮಗ ಪೊಲೀಸ್ ಧನಪತ್ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾನೆ. ಹಾಡು ಎಲ್ಲೆಡೆ ಹರಿದಾಡಿ ಕೊನೆಗೆ ಪೊಲೀಸ್ ಅಧಿಕಾರಿಗಳಿಗೂ ತಲುಪಿದೆ. ನೋಡಿದ ಕೂಡಲೇ ಕೆಂಡಾಮಂಡಲರಾದ ಅಧಿಕಾರಿಗಳು ಧನಪತ್ ಗೆ ಕರೆಕಳಿಸಿದ್ದಾರೆ.

ಉದಯಪುರ ಜಿಲ್ಲೆಯಲ್ಲಿ ಪೋಸ್ಟ್ ಮಾಡಲಾದ ಧನಪತ್ ಅವರ ಪೂರ್ವ ವಿವಾಹದ ಚಿತ್ರೀಕರಣವು ಅವರು ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮತ್ತು ಲಂಚ ಪಡೆಯುತ್ತಿರುವುದು ಇಡೀ ಇಲಾಖೆಗೆ ಅಗೌರವ ಎಂದು ಭಾವಿಸಿ ಆತನ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಐಜಿಯಾದ ಡಾ.ಹವಾ ಸಿಂಗ್ ಘೋಮರಿಯಾ ಅವರು ಎಲ್ಲಾ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್‌ಗಳಿಗೆ ನೀಡಿದ ನೋಟಿಸ್‌ನಲ್ಲಿ “ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಅಪರಾಧ ಮಾಡುವ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಲಂಚ ಪಡೆಯುತ್ತಿರುವುದನ್ನು ಸಾರ್ವತ್ರಿಕರಣಗೊಳಿಸಿರುವುದರಿಂದ ಇದು ಪೊಲೀಸ್ ಇಲಾಖೆಯ ಚಿತ್ರಣವನ್ನು ಹಾಳು ಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯು ದೊಡ್ಡ ಎಚ್ಚರಿಕೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕೆಂಬ ಆದೇಶ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಕ ಪಡೆಯುವ ಅದಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

  2. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಚ ಪಡೆಯುವ ಅಧಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

LEAVE A REPLY

Please enter your comment!
Please enter your name here

- Advertisment -

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...