Homeಮುಖಪುಟಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

- Advertisement -
- Advertisement -

ಈಗ ಮದುವೆಗಳಲ್ಲಿ ವಿವಾಹ ಪೂರ್ವ ವಿಡಿಯೋ ಚಿತ್ರೀಕರಣ (ಪ್ರಿ ವೆಡ್ಡಿಂಗ್ ಶೂಟ್) ಮಾಡಿಸುವುದು ಸಾಮಾನ್ಯ ಸಂಗತಿಯಾಗಿದೆ. 5 ರಿಂದ 10 ನಿಮಿಷ ಇರುವ ವಿಡಿಯೊಗಾಗಿಯೇ ಲಕ್ಷ ಲಕ್ಷ ಹಣ ಖರ್ಚು ಮಾಡುತ್ತಾರೆ. ಜನಪ್ರಿಯ ಸಿನಿಮಾ ಹಾಡೋಂದನ್ನು ಹಿನ್ನೆಲೆಯಾಗಿ ಬಳಸಿ ಚೆಂದ ಚೆಂದ ಬಟ್ಟೆ ಧರಿಸಿ ಸಿನಿಮಾ ಹಾಡಿನಂತೆಯೇ ವಿಡಿಯೋ ಮಾಡಿ, ನೋಡಿ ಜನ ಖುಷಿ ಪಡುತ್ತಾರೆ..

ಇದೇ ರೀತಿ ರಾಜಸ್ಥಾನದ ಪೊಲೀಸ್ ಒಬ್ಬ ತನ್ನ ಮದುವೆಯಲ್ಲಿ ತಮಾಷೆ ಮಾಡಲು ಹೋಗಿ ತನ್ನ ಕೆಲಸವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದ್ದಾನೆ. ಅಷ್ಟಕ್ಕೂ ಈತ ಮಾಡಿ ತಪ್ಪು ಏನು ಗೊತ್ತೆ? ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮಾಡಿದ ತಪ್ಪು ಇಲ್ಲಿದೆ ನೋಡಿ.

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮದುಮಗ ಪೊಲೀಸ್ ಸಮವಸ್ತ್ರದಲ್ಲಿ ನಿಂತಿರುತ್ತಾನೆ. ಮದುಮಗಳು ಹೆಲ್ಮೆಟ್ ಧರಿಸದೇ ಸ್ಕೂಟರ್ ನಲ್ಲಿ ಬರುತ್ತಾಳೆ. ಅವನು ಕೂಡಲೇ ಅವಳನ್ನು ನಿಲ್ಲಿಸಿ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದಕ್ಕಾಗಿ ದಂಡ ವಿಧಿಸುತ್ತಾನೆ.

ಆಗ ಆಕೆ ಲಂಚವನ್ನು ಕೈಗೆ ಕೊಡದೇ ಆತನ ಜೇಬಿಗೆ ಹಾಕುತ್ತಾಳೆ ಮತ್ತು ಆತನ ಇಡೀ ಕೈಚೀಲವನ್ನು (ಪರ್ಸ್) ತೆಗೆದುಕೊಂಡು ಹೋಗುತ್ತಾಳೆ. ಆಗ ಆತ ಅವಳತ್ತ ಓಡಿ ತನ್ನ ಕೈಚೀಲ ಪಡೆದುಕೊಳ್ಳಲು ಪ್ರಯತ್ನಿಸುತ್ತಾನೆ, ಅವಳು ನಿರಾಕರಿಸುತ್ತಾಳೆ ಈಗೆ ಅವರು ಪ್ರೀತಿಯಲ್ಲಿ ಬೀಳುತ್ತಾರೆ..

ಥೇಟ್ ಬಾಲಿವುಡ್ ಹಾಡಿನ ಶೈಲಿಯಲ್ಲಿ ಮಾಡಲಾದ ಈ ಮನಮೋಹಕ ಹಾಡನ್ನು ಮಧುಮಗ ಪೊಲೀಸ್ ಧನಪತ್ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾನೆ. ಹಾಡು ಎಲ್ಲೆಡೆ ಹರಿದಾಡಿ ಕೊನೆಗೆ ಪೊಲೀಸ್ ಅಧಿಕಾರಿಗಳಿಗೂ ತಲುಪಿದೆ. ನೋಡಿದ ಕೂಡಲೇ ಕೆಂಡಾಮಂಡಲರಾದ ಅಧಿಕಾರಿಗಳು ಧನಪತ್ ಗೆ ಕರೆಕಳಿಸಿದ್ದಾರೆ.

ಉದಯಪುರ ಜಿಲ್ಲೆಯಲ್ಲಿ ಪೋಸ್ಟ್ ಮಾಡಲಾದ ಧನಪತ್ ಅವರ ಪೂರ್ವ ವಿವಾಹದ ಚಿತ್ರೀಕರಣವು ಅವರು ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮತ್ತು ಲಂಚ ಪಡೆಯುತ್ತಿರುವುದು ಇಡೀ ಇಲಾಖೆಗೆ ಅಗೌರವ ಎಂದು ಭಾವಿಸಿ ಆತನ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಐಜಿಯಾದ ಡಾ.ಹವಾ ಸಿಂಗ್ ಘೋಮರಿಯಾ ಅವರು ಎಲ್ಲಾ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್‌ಗಳಿಗೆ ನೀಡಿದ ನೋಟಿಸ್‌ನಲ್ಲಿ “ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಅಪರಾಧ ಮಾಡುವ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಲಂಚ ಪಡೆಯುತ್ತಿರುವುದನ್ನು ಸಾರ್ವತ್ರಿಕರಣಗೊಳಿಸಿರುವುದರಿಂದ ಇದು ಪೊಲೀಸ್ ಇಲಾಖೆಯ ಚಿತ್ರಣವನ್ನು ಹಾಳು ಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯು ದೊಡ್ಡ ಎಚ್ಚರಿಕೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕೆಂಬ ಆದೇಶ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಕ ಪಡೆಯುವ ಅದಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

  2. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಚ ಪಡೆಯುವ ಅಧಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...