Homeಮುಖಪುಟರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ - 102 ಶಾಸಕರ ಪಟ್ಟಿ ರವಾನೆ

ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

- Advertisement -
- Advertisement -

ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಮತ್ತು ಸಚಿನ್ ಪೈಲಟ್ ಬಣದ ಮೇಲೆ ಕ್ರಮ ಕೈಗೊಳ್ಳದಂತೆ ರಾಜಸ್ಥಾನ ಹೈಕೋರ್ಟ್‌ ನೀಡಿದ ತೀರ್ಪಿನಿಂದಾಗಿ ಕ್ರುದ್ಧಗೊಂಡಿರುವ ಗೆಹ್ಲೋಟ್ ಬಣದ ನೂರಕ್ಕು ಹೆಚ್ಚು ಶಾಸಕರು ವಿಧಾನಸಭಾ ಅಧಿವೇಶನ ಕರೆಯುವಂತೆ ಒತ್ತಾಯಿಸಿ ರಾಜ್ಯಪಾಲ ಕಾಳ್‌ರಾಜ್ ಮಿಶ್ರಾ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ತಡರಾತ್ರಿಯವರೆಗೆ ನಾಲ್ಕು ಗಂಟೆಗಳಿಗೂ ಹೆಚ್ಚು ಪ್ರತಿಭಟನೆ ನಡೆಸಿ ವಿಧಾನಸಭಾ ಅಧಿವೇಶನ ಕರೆಯಿರಿ, ನ್ಯಾಯಬೇಕು ಎಂಬ ಘೋಷಣೆಗಳನ್ನು ಕೂಗಿದ್ದಾರೆ. ರಾಜ್ಯಪಾಲರು ಉತ್ತರ ನೀಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹಠ ಹಿಡಿದಿದ್ದರು ಎನ್ನಲಾಗಿದೆ.

102 ಶಾಸಕರ ಬೆಂಬಲದ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿರುವ ಗೆಹ್ಲೋಟ್ “ನಾವು ಅಧಿವೇಶನ ಕರೆಯಲು ಮನವಿ ಮಾಡಿದ್ದೇವೆ. ತಡರಾತ್ರಿಯವರೆಗೂ ಪ್ರತಿಭಟನೆ ನಡೆಸಿದ್ದೇವೆ. ಆದರೆ ಬಿಜೆಪಿ ಹಿಡಿತದಲ್ಲಿರುವ ರಾಜ್ಯಪಾಲರು ಯಾವುದೇ ಸ್ಪಂದನೆ ನೀಡಿಲ್ಲ” ಎಂದು ದೂರಿದ್ದಾರೆ.

ನಾವು ಬಹುಮತ ಸಾಬೀತುಪಡಿಸಲು ಸಿದ್ದರಿದ್ದೇವೆ. ಇದನ್ನು ಬಿಜೆಪಿ ಸ್ವೀಕರಿಸಬೇಕು. ಆದರೆ ಇಲ್ಲ ಎಲ್ಲಾ ಉಲ್ಟಪಲ್ಟ ಆಗಿದೆ ಎಂದು ಗೆಹ್ಲೋಟ್ ಕಿಡಿಕಾರಿದ್ದಾರೆ.

ವಿಚಾರ ಸುಪ್ರೀಂ ಕೋರ್ಟ್‌‌ನಲ್ಲಿರುವುದರಿಂದ ಅಧಿವೇಶನ ಕರೆಯುವುದರ ಬಗ್ಗೆ ಕಾನೂನು ಅಭಿಪ್ರಾಯ ಪಡೆಯುತ್ತಿದ್ದೇನೆ. ಎಲ್ಲಕ್ಕಿಂತ ಹೆಚ್ಚಾಗಿ ಗೆಹ್ಲೋಟ್‌ರವರ ಮನವಿಯಲ್ಲಿ ವಿಧಾನಸಭಾ ಅಧಿವೇಶನ ಕರೆಯುವ ಅಜೆಂಡಾವೇ ಇಲ್ಲ. ಅವರು ಹೊಸ ಮನವಿಯನ್ನು ಕಳಿಸಲಿ ಎಂದು ರಾಜ್ಯಪಾಲರು ಪ್ರತಿಕ್ರಿಯಿಸಿದ್ದಾರೆ.

ಇನ್ನೊಂದೆಡೆ ನಾನು ಗೆಹ್ಲೋಟ್‌ರವರ ಮನವಿಯನ್ನು ತಿರಸ್ಕರಿಸಿಲ್ಲ. ಆ ಬಗ್ಗೆ ಏನು ಮಾಡಬೇಕೆಂದು ನಿರ್ಧರಿಸಿಲ್ಲ. ನಾನು ನಿಯಮಗಳನ್ನು ಅನುಸರಿಸುತ್ತೇನೆ. ಕೋವಿಡ್ ಪರಿಸ್ಥಿತಿಯಲ್ಲಿ ವಿಧಾನಸಭಾ ಅಧಿವೇಶನ ಕರೆಯುವುದು ಸೂಕ್ತವೇ ಎಂದು ಯೋಚಿಸುತ್ತಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ರಘು ಶರ್ಮಾ, ನಾವು ಬೇಕಾದರೆ ಕೋವಿಡ್ ಟೆಸ್ಟ್ ಮಾಡಿಸುತ್ತೇವೆ. ಆದರೆ ರಾಜ್ಯಪಾಲರು ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ನಿನ್ನೆ ಫೋನ್‌ನಲ್ಲಿ ರಾಜ್ಯಪಾಲರೊಂದಿಗೆ ಮಾತನಾಡಿದ್ದ ಗೆಹ್ಲೋಟ್, ನಮಗೆ ಬಹುಮತವಿದೆ. ಸಾಬೀತುಪಡಿಸಲು ಸಿದ್ದರಿದ್ದೇವೆ. ಸಂವಿಧಾನದ ಪ್ರಕಾರ ಅಧಿವೇಶನ ಕರೆಯಿರಿ. ಇಲ್ಲ ಜನರು ರಾಜಭವನವನ್ನು ಮುತ್ತಿಗೆ ಹಾಕಿದರೆ ಅದಕ್ಕೆ ನಾವು ಜವಾಬ್ದಾರರಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಜನ ದಂಗೆ ಎದ್ದರೆ ನಾವು ಜವಾಬ್ದಾರರಲ್ಲವೆಂದ ಅಶೋಕ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...