Homeಮುಖಪುಟರಾಜಸ್ಥಾನ ಬಿಕ್ಕಟ್ಟು: ಕೇಂದ್ರ ಸಚಿವ, ಬಂಡಾಯ ಶಾಸಕನ ವಿರುದ್ಧ FIR: ಒಬ್ಬನ ಬಂಧನ

ರಾಜಸ್ಥಾನ ಬಿಕ್ಕಟ್ಟು: ಕೇಂದ್ರ ಸಚಿವ, ಬಂಡಾಯ ಶಾಸಕನ ವಿರುದ್ಧ FIR: ಒಬ್ಬನ ಬಂಧನ

ಬಿಜೆಪಿಯೊಂದಿಗೆ ಸೇರಿ ಸರ್ಕಾರ ಉರುಳಿಸಲು ಸಂಚು ಮಾಡಿದ್ದಾರೆ ಎಂಬ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಭನ್ವರ್ ಲಾಲ್ ಶರ್ಮಾ ಮತ್ತು ಮತ್ತೊಬ್ಬ ಬಂಡಾಯ ಶಾಸಕ ವಿಶ್ವೇಂದ್ರ ಸಿಂಗ್ ಅವರನ್ನು ಶಾಸಕ ಸ್ಥಾನದಿಂದ ಕಾಂಗ್ರೆಸ್ ಅಮಾನತುಗೊಳಿಸಿದೆ.

- Advertisement -
- Advertisement -

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಬಂಡಾಯ ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾ ರಾಜಸ್ಥಾನದ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡಾಯವೆದ್ದ ಶಾಸಕರು ಬಿಜೆಪಿಯೊಂದಿಗೆ ಸೇರಿ ಸರ್ಕಾರ ಬೀಳಿಸಲು ಸಂಚು ಹೂಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತು ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಹಲವು ಬಂಡಾಯ ಶಾಸಕರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಆರೋಪಿಸಲಾಗಿರುವ ಬಿಜೆಪಿ ನಾಯಕ ಸಂಜಯ್ ಜೈನ್ ಎಂಬ ಉದ್ಯಮಿಯನ್ನು ಬಂಧಿಸಲಾಗಿದೆ. ಆತ ಕುದುರೆ ವ್ಯಾಪಾರದಲ್ಲಿ ಭಾಗಿಯಾಗಿದ್ದ ಎಂಬ ಕಾಂಗ್ರೆಸ್ ಆರೋಪವನ್ನು ಬಿಜೆಪಿ ನಿರಾಕರಿಸಿದೆ.

ಬಿಜೆಪಿಯೊಂದಿಗೆ ಸೇರಿ ಸರ್ಕಾರ ಉರುಳಿಸಲು ಸಂಚು ಮಾಡಿದ್ದಾರೆ ಎಂಬ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಭನ್ವರ್ ಲಾಲ್ ಶರ್ಮಾ ಮತ್ತು ಮತ್ತೊಬ್ಬ ಬಂಡಾಯ ಶಾಸಕ ವಿಶ್ವೇಂದ್ರ ಸಿಂಗ್ ಅವರನ್ನು ಶಾಸಕ ಸ್ಥಾನದಿಂದ ಕಾಂಗ್ರೆಸ್ ಅಮಾನತುಗೊಳಿಸಿದೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಮಾತನಾಡಿ, ಎರಡು ಆಡಿಯೋ ರೆಕಾರ್ಡಿಂಗ್‌ಗಳು ಹೊರಬಂದಿದ್ದು, ಇದರಲ್ಲಿ ಭನ್ವರ್ ಲಾಲ್ ಶರ್ಮಾ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ್ದಾರೆ. ಆಡಿಯೋ ಧ್ವನಿಯೊಂದರಲ್ಲಿ ರಾಜಸ್ಥಾನದ ಹಿರಿಯ ಬಿಜೆಪಿ ಮುಖಂಡ ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವ ಶೇಖಾವತ್ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

“ನಾನು ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ. ಆ ಆಡಿಯೊ ಧ್ವನಿ ನನ್ನದಲ್ಲ. ನನ್ನನ್ನು ಪ್ರಶ್ನಿಸಲು ಕರೆದರೆ ನಾನು ಖಂಡಿತವಾಗಿಯೂ ಹೋಗುತ್ತೇನೆ” ಎಂದು ಶೇಖಾವತ್ ಹೇಳಿದರು.


ಇದನ್ನೂ ಓದಿ: ಬಿಜೆಪಿಯೊಂದಿಗಿನ ಸಚಿನ್ ಪೈಲಟ್ ಬೆಂಬಲಿಗ ಶಾಸಕನ ಸಂಭಾಷಣೆಯ ಆಡಿಯೋ ಬಿಡುಗಡೆ ಮಾಡಿದ ಗೆಹ್ಲೋಟ್ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...