Homeಮುಖಪುಟರಾಜಸ್ಥಾನ ಬಿಕ್ಕಟ್ಟು: ಇಬ್ಬರು ಪ್ರಾದೇಶಿಕ ಪಕ್ಷಗಳ ಶಾಸಕರ ಬೆಂಬಲವಿದೆಯೆಂದ ಗೆಹ್ಲೋಟ್

ರಾಜಸ್ಥಾನ ಬಿಕ್ಕಟ್ಟು: ಇಬ್ಬರು ಪ್ರಾದೇಶಿಕ ಪಕ್ಷಗಳ ಶಾಸಕರ ಬೆಂಬಲವಿದೆಯೆಂದ ಗೆಹ್ಲೋಟ್

- Advertisement -
- Advertisement -

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದ ಪ್ರಾದೇಶಿಕ ಪಕ್ಷದ ಇಬ್ಬರು ಶಾಸಕರು ಈಗ ಮತ್ತೆ ಆಡಳಿತ ಸರ್ಕಾರವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

“ಭಾರತೀಯ ಟ್ರೈಬಲ್ ಪಾರ್ಟಿ (ಬಿಟಿಪಿ)ಯ ಇಬ್ಬರೂ ಶಾಸಕರು ತಮ್ಮ ರಾಜ್ಯ ಕಾರ್ಯಕಾರಿ ಸಮಿತಿಯನ್ನು ಭೇಟಿಯಾಗಿ ಅವರ ಬೇಡಿಕೆಗಳೊಂದಿಗೆ ಚರ್ಚಿಸಿದ ನಂತರ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿದರು” ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ ಹಂಚಿಕೊಂಡ ಫೋಟೋಗಳಲ್ಲಿ ಶಾಸಕರ ಬೆಂಬಲ ಪತ್ರವನ್ನು ಅಶೋಕ್ ಗೆಹ್ಲೋಟ್ ಸ್ವೀಕರಿಸುತ್ತಿರುವುದು ಕಂಡುಬಂದಿದೆ.

ಸಚಿನ್ ಪೈಲಟ್ ಬಂಡಾಯವೆದ್ದ ನಂತರ ಈ ಇಬ್ಬರೂ ಶಾಸಕರ ಮೇಲೆ ಎಲ್ಲರ ಗಮನ ನೆಟ್ಟಿತ್ತು. ಆಗ ಅವರು ತಮ್ಮ ಇಚ್ಚೆಗೆ ವಿರುದ್ಧವಾಗಿ ಮುಖ್ಯಮಂತ್ರಿ ಗೆಹ್ಲೋಟ್ ಐಷಾರಾಮಿ ಹೋಟೆಲ್‌ನಲ್ಲಿ ಬಂಧಿಸಿಟ್ಟಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದನ್ನು ಮಾಡಿ ಹಂಚಿಕೊಂಡಿದ್ದರು.

ತನ್ನ ಬೆಂಬಲದ ಶಾಸಕರನ್ನು ಉಳಿಸಿಕೊಳ್ಳುವಲ್ಲಿ ಹೆಣಗಾಡುತ್ತಿರುವ ಕಾಂಗ್ರೆಸ್ ಇಬ್ಬರು ಶಾಸಕರನ್ನು ಕಳೆದುಕೊಂಡರೆ ಸರ್ಕಾರದ ಪರವಾಗಿರುವ ಬೆಂಬಲದ ಸದಸ್ಯರ ಸಂಖ್ಯೆ ಕಡಿಮೆಯಾಗುತ್ತಿತ್ತು.

ಸಚಿನ್ ಪೈಲಟ್ ತಮಗೆ 30 ಶಾಸಕರ ಬೆಂಬಲವಿದೆ ಎಂದು ಹೇಳಿದ್ದಾರೆ. ಇತ್ತ ಕಡೆ ಗೆಹ್ಲೋಟ್ ಕೂಡಾ ತನಗೆ 109 ಶಾಸಕರ ಬೆಂಬಲವಿದೆ ಎಂದು ಹೇಳಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಉಳಿಯಬೇಕಾದ 101 ಸದಸ್ಯರ ಬೆಂಬಲ ಸಾಕಾಗುತ್ತದೆ.

ಗುರುವಾರ ಬಿಟಿಪಿ ಶಾಸಕರಲ್ಲಿ ಒಬ್ಬರಾದ ರಾಜ್‌ಕುಮಾರ್ ನಾವು ಸಚಿನ್ ಪೈಲಟ್ ಬೆಂಬಲಿಗರಲ್ಲ, ಕೆಲವು ವಿಷಯಗಳ ಬಗ್ಗೆ ಚರ್ಚಿಸಲು ಗೆಹ್ಲೋಟ್‌ರನ್ನು ಭೇಟಿ ಮಾಡಲು ಯೋಜಿಸಿದ್ದೇವೆ ಎಂದು ತಿಳಿಸಿದ್ದರು.

ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆಯ ಸಂದರ್ಭದಲ್ಲಿ ಪಕ್ಷ ತಟಸ್ಥವಾಗಿರಬೇಕು ಎಂದು ಬಿಟಿಪಿ ಮುಖ್ಯಸ್ಥ ಮಹೇಶ್ ಭಾಯ್ ವಾಸವ ಸೋಮವಾರ ತಮ್ಮ ಶಾಸಕರಿಗೆ ಪತ್ರ ಬರೆದಿದ್ದಾರೆ.

ಆಗ ಇಬ್ಬರು ಶಾಸಕರು ತಾವು ಅಶೋಕ್ ಗೆಹ್ಲೋಟ್ ಅವರೊಂದಿಗೆ ಇದ್ದೇವೆ ಎಂದು ಹೇಳಿದ್ದರು. “ಸ್ವಲ್ಪ ಗೊಂದಲವಿದೆ. ಇದೀಗ ನಾವು ಸರ್ಕಾರದೊಂದಿಗಿದ್ದೇವೆ. ಆದರೆ ನಮ್ಮ ನಾಯಕರೊಂದಿಗೆ ಮಾತನಾಡಿದ ನಂತರ ನಾವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.


ಓದಿ: ರಾಜಸ್ಥಾನ ಬಿಕ್ಕಟ್ಟು: ಕೇಂದ್ರ ಸಚಿವ, ಬಂಡಾಯ ಶಾಸಕನ ವಿರುದ್ಧ FIR: ಒಬ್ಬನ ಬಂಧನ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...